ಅಮರಾವತಿ: ಮಿಚೌಂಗ್ ಚಂಡಮಾರುತ (Cyclone Michaung) ಭಾರೀ ಅನಾಹುತ ಸೃಷ್ಟಿಸುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾ ತೀರ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿದೆ.
ಆಂಧ್ರದ ನೆಲ್ಲೂರು (Nelluru Andhra Pradesh) ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಬಾಲಕನೊಬ್ಬನನ್ನು ಬಲಿ ಪಡೆದಿದೆ. ಬಿರುಗಾಳಿಯ ತೀವ್ರತೆಗೆ ಗುಡಿಸಲು ಕುಸಿದು ಬಾಲಕ ಬಲಿ ಆಗಿದ್ದಾನೆ. ಸದ್ಯ ನೆಲ್ಲೂರಿಗೆ ಆಗ್ನೇಯ ದಿನನಲ್ಲಿ 440 ಕಿಲೋಮೀಟರ್ ದೂರದಲ್ಲಿ ಚಂಡಮಾರುತ ಕೇಂದ್ರೀಕೃತವಾಗಿದೆ. ವಾಯುವ್ಯ ದಿಕ್ಕಿನತ್ತ ಪಯಣಿಸುತ್ತಿರುವ ಈ ಚಂಡಮಾರುತ ಡಿಸೆಂಬರ್ 5 ರಂದು ನೆಲ್ಲೂರು-ಮಚಲಿಪಟ್ಟಣಂ ನಡುವೆ ತೀರ ದಾಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಂಜೆ ದೆಹಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ (Narendra Modi), ಮಿಚೌಂಗ್ ಚಂಡಮಾರುತ ಎದುರಿಸಲು ಎಲ್ಲಾ ಸನ್ನದ್ಧತೆ ನಡೆಸಲಾಗಿದೆ. ತೀರ ಪ್ರದೇಶದ ರಾಜ್ಯಗಳ ಜೊತೆ ಸತತವಾಗಿ ಸಂಪರ್ಕದಲ್ಲಿದ್ದೇವೆ. ಬಿಜೆಪಿ ಕಾರ್ಯಕರ್ತರು ನೆರವಿಗೆ ಧಾವಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್ಐಆರ್
ತಮಿಳುನಾಡಿನ (Thamilnadu) ಚೆನೈ, ತಿರುವಳ್ಳೂರ್, ಕಾಂಚೀಪುರಂ ಹಾಗೂ ಚೆನ್ನಗಲ್ ಪಟ್ಟು ಈ ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋೀಷಿಸಲಾಗಿದೆ. ಅಲ್ಲದೆ ತಮಿಳುನಾಡು ಸರ್ಕಾರ ಇಂದು ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜು, ಸರ್ಕಾರಿ ಕಛೇರಿ ಸೇರಿದಂತೆ ಸಾರ್ವಜನಿಕ ಕಚೇರಿಗಳಿಗೆ ರಜೆ ಘೋಷಣೆ ಮಾಡಿದೆ.
ಅರಬ್ಬಿ ಸಮುದ್ರ ಮೂಲಕ 310 ಕಿಲೋ ಮೀಟರ್ ವೇಗದಲ್ಲಿ ತಮಿಳುನಾಡಿನ ಚೆನೈ ಗೆ ಎಂಟ್ರಿ ಕೊಡಲಿರೋ ಚಂಡಮಾರುತವು ಬೇ ಆಫ್ ಬೆಂಗಾಲ್ ಸೌಥ್ ರೀಜನ್ ಮೂಲಕ ಹಾದು ಹೊಗಲಿದೆ. ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.