Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

Bagalkot

ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

Public TV
Last updated: October 28, 2025 12:29 pm
Public TV
Share
2 Min Read
Montha Cyclone
SHARE

– ದೇಶದ ವಿವಿಧೆಡೆ ಅ.28, 29ರಂದು ಭಾರೀ ಮಳೆ
– ಆಂಧ್ರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತದ (Montha Cyclone) ಪರಿಣಾಮ ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ ಹಿನ್ನೆಲೆ ದೇಶದ ವಿವಿಧೆಡೆ ಅ.28 ಹಾಗೂ ಅ.29ರಂದು ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದಿಂದಾಗಿ ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಅ.28) ಬೆಂಗಳೂರಿನಿಂದ ಹೊರಡಲಿರುವ ಕೆಲವು ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಇದನ್ನೂ ಓದಿ: ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ (Bengaluru) ವಾತಾವರಣ ತಂಪಾಗಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ನಗರದ SMVTಯಿಂದ ಹೊರಡುವ ಏಳು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಹೊರಡುವ ಸಮಯಕ್ಕಿಂತ 12 ಗಂಟೆ ತಡವಾಗಿ ಹೊರಡಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಆಂಧ್ರ ಕರಾವಳಿ ತೀರ ಪ್ರದೇಶಕ್ಕೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಾ ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣ ನಡುವೆ, ಕಾಕಿನಾಡದ ಸುತ್ತಮುತ್ತಲಿನ ಕರಾವಳಿಯನ್ನು ದಾಟಲಿದೆ. ಈ ಚಂಡಮಾರುತವು ಗಂಟೆಗೆ 90 ರಿಂದ 100 ಕಿ.ಮೀ ವೇಗದಲ್ಲಿ ಚಲಿಸುವ ಸಾಧ್ಯತೆಯಿದೆ. ಅಲ್ಲದೇ ಚಂಡಮಾರುತವು 2-4.6 ಮೀಟರ್ ಎತ್ತರದ ಅಲೆಗಳೊಂದಿಗೆ ಬಂದು ಅಪ್ಪಳಿಸಿದ್ದು, ಆಂಧ್ರದ 1,419 ಹಳ್ಳಿಗಳು ಮತ್ತು 44 ಪಟ್ಟಣಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಜೊತೆಗೆ ಆಂಧ್ರಪ್ರದೇಶ, ಒಡಿಶಾ, ಪುದುಚೇರಿ, ತಮಿಳುನಾಡು ಮತ್ತು ಛತ್ತೀಸ್‌ಗಢಗಳಲ್ಲಿ ರಾಷ್ಟ್ರೀಯ ವಿಪತ್ತು ಪಡೆಯ 22 ತಂಡಗಳನ್ನು ಸರ್ಕಾರ ನಿಯೋಜಿಸಿದೆ.

ಈಗಾಗಲೇ ಆಂಧ್ರದ ಹಲವು ನಗರಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಸ್ಥಿತಿ ಅಸ್ತವ್ಯಸ್ಥವಾಗಿದೆ. ಆಂಧ್ರಪ್ರದೇಶದ ಅನಕಾಪಲ್ಲಿ, ಕಾಕಿನಾಡ, ಕೋನಾಸೀಮಾ, ಶ್ರೀಕಾಕುಳಂ, ನೆಲ್ಲೂರು, ವಿಶಾಖಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿಯಲ್ಲಿ ಮುಂದಿನ 10 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಆಂಧ್ರಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಜನರನ್ನು ನಿರಾಶ್ರಿತ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಇನ್ನೂ ಆಂಧ್ರಪ್ರದೇಶದ ಪೂರ್ವ ಕರಾವಳಿಯಲ್ಲಿ ಸಂಚರಿಸುವ 65 ರೈಲುಗಳ ಓಡಾಟ ಸ್ಥಗಿತಗೊಂಡಿದೆ.

ಮೊಂಥಾ ಚಂಡಮಾರುತದ ಹಿನ್ನೆಲೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ತಡರಾತ್ರಿ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದ್ದು, ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರಿಗೆ ಸ್ಪಂದಿಸಲು ಜಿಲ್ಲೆಗೊಬ್ಬರು ಅಧಿಕಾರಿಯನ್ನು ನೇಮಕ ಮಾಡಿ ಎಂದು ಸೂಚನೆ ನೀಡಿದ್ದಾರೆ.ಇದನ್ನೂ ಓದಿ: Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

 

TAGGED:Andhra PradeshkarnatakaMontha Cyclonetamilnaduಆಂಧ್ರಪ್ರದೇಶಕರ್ನಾಟಕತಮಿಳುನಾಡುಮಳೆಮೊಂಥಾ ಚಂಡಮಾರುತಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
27 minutes ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
35 minutes ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
50 minutes ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
1 hour ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
2 hours ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?