ಬಾಗಲಕೋಟೆ: ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕೂಲಿಕಾರ್ಮಿಕರ ಆರು ಜೋಪಡಿ ಮನೆಗಳು ಭಸ್ಮವಾದ ಘಟನೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ.
ಇಳಕಲ್ ನಗರದ ಪೊಲೀಸ್ ಕ್ವಾಟರ್ಸ್ ಹತ್ತಿರದ ಶರಗುರು ಬಾಷಾ ಕೊಳಚೆ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಶಾಂತಮ್ಮ ಅವಾರಿ ಎನ್ನುವವರ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದಲ್ಲಿದ್ದ ಜೋಪಡಿ ಮನೆಗಳಿಗೂ ಬೆಂಕಿ ತಗುಲಿದ್ದು, ಮೀನಾಕ್ಷಿ ಶೀಲವೇರಿ, ಆನಂದ ರೊಡ್ಡನ್ನವರ, ಬಸವರಾಜ ನೀಲಿ, ಲಕ್ಷ್ಮೀ ಭಗವತಿ, ಅಮೀನಸಾಬ ಗುಣಸಿ ಎನ್ನುವ ಬಡಕೂಲಿಕಾರ್ಮಿಕರ ಜೋಪಡಿಗಳು ಸುಟ್ಟು ಭಸ್ಮವಾಗಿದೆ.
- Advertisement 2
- Advertisement 3
ಅದೃಷ್ಟವಶಾತ್ ಸಿಲಿಂಡರ್ ಸ್ಪೋಟಗೊಂಡ ಸಮಯದಲ್ಲಿ ಜೋಪಡಿಗಳಲ್ಲಿ ಯಾರು ಇರದ ಕಾರಣ ಯಾವುದೇ ಜೀವಹಾನಿ ಆಗಿಲ್ಲ. ಆದ್ರೆ ಈ ಮನೆಗಳಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.
- Advertisement 4
ಇಳಕಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv