Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಶ್ವತ್ಥ ನಾರಾಯಣ್ ವಿರುದ್ಧ ಡಿಕೆಶಿ ಷಡ್ಯಂತ್ರ ಮಾಡುತ್ತಿದ್ದಾರೆ: ಎಸ್.ಟಿ.ಸೋಮಶೇಖರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಶ್ವತ್ಥ ನಾರಾಯಣ್ ವಿರುದ್ಧ ಡಿಕೆಶಿ ಷಡ್ಯಂತ್ರ ಮಾಡುತ್ತಿದ್ದಾರೆ: ಎಸ್.ಟಿ.ಸೋಮಶೇಖರ್

Districts

ಅಶ್ವತ್ಥ ನಾರಾಯಣ್ ವಿರುದ್ಧ ಡಿಕೆಶಿ ಷಡ್ಯಂತ್ರ ಮಾಡುತ್ತಿದ್ದಾರೆ: ಎಸ್.ಟಿ.ಸೋಮಶೇಖರ್

Public TV
Last updated: May 5, 2022 7:12 pm
Public TV
Share
2 Min Read
ST Somashekar 1
SHARE

ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಮೇಲೆ ಕಾಂಗ್ರೆಸ್ ಮುಗಿಬೀಳ್ತಿದ್ದಾರೆ. ಸಚಿವರ ಪರ ಸಂಪುಟ ಸಹೋದ್ಯೋಗಿಗಳು ಬ್ಯಾಟಿಂಗ್‍ಗೆ ಇಳಿದಿದ್ದಾರೆ. ಈ ಹಿನ್ನೆಲೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಹ ಅಶ್ವತ್ಥ ನಾರಾಯಣ್ ಅವರ ಪರ ಬ್ಯಾಟಿಂಗ್ ಮಾಡಿದರು.

BJP CONGRESS FLAG

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಎಸ್.ಟಿ.ಸೋಮಶೇಖರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ರಾಮನಗರ ಜಿಲ್ಲೆಯಲ್ಲಿ ಲೀಡರ್‍ಶಿಪ್ ಫೈಟ್ ನಡೆಸುತ್ತಿದ್ದಾರೆ. ಒಕ್ಕಲಿಗರ ಜಿಲ್ಲೆ ಎಂಬ ಕಾರಣಕ್ಕೆ ನಾಯಕತ್ವಕ್ಕೆ ಪೈಪೋಟಿ ನಡೆಯುತ್ತಿದೆ. 4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗಾಗಿ ಶ್ರಮಿಸುತ್ತಿರುವ ಕಾರಣ ಅಶ್ವತ್ಥ ನಾರಾಯಣ್ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅಲ್ಲಿ ಅಭಿವೃದ್ಧಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಇದರಿಂದಾಗಿ ಪ್ರಕರಣದಲ್ಲಿ ಆಧಾರ ರಹಿತ ಆರೋಪ ಮಾಡುವ ಮೂಲಕ ಅಶ್ವತ್ಥ ನಾರಾಯಣ್ ಅವರ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಆಕ್ಷೇಪಿಸಿದರು.

ಅಶ್ವತ್ಥ ನಾರಾಯಣ್ ವಿರುದ್ಧ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ. ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ನಿರುದ್ಯೋಗಿಗಳ ಭವಿಷ್ಯದ ವಿಚಾರದಲ್ಲಿ ಚೆಲ್ಲಾಟ ಆಡಬಾರದು ಎಂಬ ಉದ್ದೇಶ ನಮ್ಮದು ಎಂದು ತಿಳಿಸಿದರು. ಅಂತೆಕಂತೆಗಳಿಗೆ ಉತ್ತರ ಕೊಡುವುದಿಲ್ಲ. ಪ್ರಾಮಾಣಿಕವಾಗಿ ತನಿಖೆ ಆಗಬೇಕಿದೆ. ಮಾಹಿತಿ ಕೊಟ್ಟರೆ ಸಮರ್ಥವಾಗಿ ತನಿಖೆ ನಡೆಯಲು ಸಹಕಾರಿ ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗದಿಂದ ರಾಜ್ಯಪಾಲರ ಭೇಟಿ – ಪತ್ರಿಕಾ ದಿನಾಚರಣೆಗೆ ಆಹ್ವಾನ 

ASHWATH NARAYAN

ಅಶ್ವತ್ಥ ನಾರಾಯಣ್ ಅವರು ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ 2 ವರ್ಷಗಳಲ್ಲಿ ಕ್ರಾಂತಿಕಾರಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಇದನ್ನು ಸಹಿಸಲಾಗದೆ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅಸ್ತಿತ್ವಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇವರು ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಅಶ್ವತ್ಥ ನಾರಾಯಣ್ ಅವರ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಬೆಂಬಲ ಕೊಟ್ಟರು.

SIDDU DKSHI

ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಎಂದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ಕೊಡಬಾರದು ಎಂದಿದೆಯೇ? ದಾಖಲಾತಿ ಕೊಡಿ ಎಂದು ಕೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಕರ್ನಾಟಕ ಪೊಲೀಸ್ ನಂಬರ್ ಒನ್ ಪೊಲೀಸ್. ಪೊಲೀಸರು ಯಾರದೇ ಹಿಡಿತದಲಿಲ್ಲ. ಅವರದೇ ಆದ ತನಿಖೆ ಮಾಡಲಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

Basavaraja Bommai

ನಾಲ್ಕು ವರ್ಷ ಎಲ್ಲ ಮಲಗಿದ್ದರು. ನಾವು ಜೀವಂತವಾಗಿ ಇದ್ದೇವೆಂದು ತೋರಿಸಲು ಈಗ ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಆಕ್ರೋಶ ಹೊರಹಾಕಿದರು. ನಮ್ಮ ಸರ್ಕಾರ ಈಗ ಸಮರ್ಥವಾಗಿದೆ. ಸಿಎಂ ಬೊಮ್ಮಾಯಿ ಅವರು ಸಮರ್ಥರಿದ್ದಾರೆ. ‘ಉಪ್ಪು ತಿಂದವರು ನೀರು ಕುಡಿಯಲಿದ್ದಾರೆ’ ಎಂದರು. ಇದನ್ನೂ ಓದಿ:  ಟ್ರಕ್ ಟರ್ಮಿನಲ್ ನಿರ್ಮಾಣ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಗ್ರಾಮಸ್ಥರು 

ಕಾಂಗ್ರೆಸ್ ಪಕ್ಷದ ಡಿ.ಕೆ.ಸುರೇಶ್ ಸಂಸದರಾದ ಬಳಿಕ ಬದಲಾಗುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಅವರು ಗಲಾಟೆ ಮಾಡುವುದನ್ನು ಸಾರ್ವಜನಿಕರೂ ಗಮನಿಸಲಿದ್ದಾರೆ ಎಂದು ತಿಳಿಸಿದರು.

TAGGED:Ashwattha NarayanbjpcongressDK ShivakumarPriyank KhargePSIST Somashekarಅಶ್ವತ್ಥ ನಾರಾಯಣ್ಎಸ್‌.ಟಿ.ಸೋಮಶೇಖರ್‌ಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಿಎಸ್‍ಐಪ್ರಿಯಾಂಕ್ ಖರ್ಗೆಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

US Soldiers Killed
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ 560 ಸೈನಿಕರ ಸಾವು?

Public TV
By Public TV
23 minutes ago
Amit Shah
Latest

ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

Public TV
By Public TV
32 minutes ago
gavi gangadhareshwara temple
Bengaluru City

ನಾಳೆ ರಕ್ತ ಚಂದ್ರಗ್ರಹಣ – ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಬದಲು

Public TV
By Public TV
2 hours ago
Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
2 hours ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
2 hours ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?