Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ನಿಷೇಧ ಮಸೂದೆಯನ್ನು ಹರಿದು ಹಾಕಿದ್ದೇನೆ, ಇದು ನನ್ನ ಹಕ್ಕು: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತಾಂತರ ನಿಷೇಧ ಮಸೂದೆಯನ್ನು ಹರಿದು ಹಾಕಿದ್ದೇನೆ, ಇದು ನನ್ನ ಹಕ್ಕು: ಡಿಕೆಶಿ

Belgaum

ಮತಾಂತರ ನಿಷೇಧ ಮಸೂದೆಯನ್ನು ಹರಿದು ಹಾಕಿದ್ದೇನೆ, ಇದು ನನ್ನ ಹಕ್ಕು: ಡಿಕೆಶಿ

Public TV
Last updated: December 21, 2021 10:33 pm
Public TV
Share
3 Min Read
DK Shivakumar DKSHI 8
SHARE

ಬೆಳಗಾವಿ: ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ, ಇದು ನನ್ನ ಹಕ್ಕು. ಅವರು ಏನು ಮಾಡುತ್ತಾರೋ ಮಾಡಲಿ. ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸದನದಲ್ಲಿ ಸಮಯಾವಕಾಶ ಇದ್ದರೂ ಕಾಯಲಿಲ್ಲ. ಕಂದಾಯ ಸಚಿವರು ಉತ್ತರ ನೀಡುವ ಸಂದರ್ಭದಲ್ಲಿ ಅವರ ಮಾತು ಮುಗಿಸಿ, ನಂತರ ನಮ್ಮ ಸಮ್ಮುಖದಲ್ಲೇ ಮಂಡನೆ ಮಾಡಬಹುದಿತ್ತು. ನಾವು ಕೂಡ ಪ್ರಸ್ತಾವನೆ ಸಂದರ್ಭದಲ್ಲೇ ಇದನ್ನು ಆಕ್ಷೇಪಿಸಲು ಸಿದ್ಧರಿದ್ದೆವು. ಸರ್ಕಾರ ಮಸೂದೆ ಮಂಡಿಸಿ ನಂತರ ಮತಕ್ಕೆ ಹಾಕಲು ಅವಕಾಶ ಮಾಡಿ ಕೊಡಬೇಕಿತ್ತು. ಬಹುಮತದ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಬಹುದಿತ್ತು. ಆದರೆ ಸ್ಪೀಕರ್ ಅವರು ರಾಜಕೀಯ ಪಕ್ಷದ ಸದಸ್ಯರಂತೆ ನಡೆದುಕೊಂಡಿದ್ದಾರೆ. ಅವರು ಕಾನೂನಿನ ಪ್ರಕಾರವಾಗಿ ನಡೆದುಕೊಂಡಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಪ್ರತಿಪಕ್ಷಗಳ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆ ಮಂಡನೆ

suverna soudha

ನಾವು ಯಾರನ್ನೂ ನಂಬಲ್ಲ: ಜೆಡಿಎಸ್ ಬೆಂಬಲ ಪಡೆಯುವ ಬಗ್ಗೆ ಯಡಿಯೂರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಜೆಡಿಎಸ್‌ಗೆ ಬಿಟ್ಟ ವಿಚಾರ. ಗೋಹತ್ಯೆ ನಿಷೇಧ ಮಸೂದೆ ಮಂಡನೆ ಸಮಯದಲ್ಲಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಈಗಲೂ ಅವರು ವಿರೋಧಿಸುತ್ತೇವೆ ಎಂದು ಹೇಳಿ, ನಂತರ ಹಿಂದೆ ಸರಿಯುತ್ತಾರೆ. ನಾವು ಇಲ್ಲಿ ಯಾರನ್ನೂ ನಂಬಲು ಸಾಧ್ಯವಿಲ್ಲ. ಇದು ನಮ್ಮ ಅನುಭವ. ನಮಗೆ ಬಹುಮತ ಇದೆಯೋ, ಇಲ್ಲವೋ ಬೇರೆ ವಿಚಾರ. ಆದರೆ ಈ ಮಸೂದೆ ಸಂವಿಧಾನ ವಿರುದ್ಧವಾಗಿದೆ. ಈ ಮಸೂದೆಯಲ್ಲಿ ಶಿಕ್ಷಣ ಸಂಸ್ಥೆಗಳು ಉಚಿತ ಶಿಕ್ಷಣ ನೀಡುವ ಆಮಿಷ ನೀಡಲಾಗುತ್ತಿದೆ ಎಂಬ ಅಸಂಬದ್ಧ ಅಂಶಗಳಿವೆ ಎಂದರು.

suverna soudha2

ಒಂದು ವರ್ಗ ಗುರಿಯಾಗಿಸಲು ಮಸೂದೆ: ಮತಾಂತರ ನಿಷೇಧ ಹಾಗೂ ಲವ್ ಜಿಹಾದ್ ಅನ್ನು ಒಂದೇ ಮಸೂದೆಯಲ್ಲಿ ತರಲಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಮದುವೆಯು ನಂಬಿಕೆ, ಪರಸ್ಪರ ಒಪ್ಪಿಗೆ ಹಾಗೂ ಪ್ರೀತಿಯ ಸಂಬಂಧದ ಆಧಾರದ ಮೇಲೆ ನಡೆಯುತ್ತದೆ. ಮದುವೆಯನ್ನು ಬಲವಂತವಾಗಿ ಮಾಡಲು ಸಾಧ್ಯವಿಲ್ಲ. ಇಂತಹ ಮದುವೆಯನ್ನು ಅವರು ಅಸಿಂಧು ಮಾಡಲು ಹೇಗೆ ಸಾಧ್ಯ? ಸಂವಿಧಾನದ 21 ನೇ ಪರಿಚ್ಛೇದ ಏನು ಹೇಳುತ್ತದೆ? ಅನೇಕ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪು ಏನು? ಮತಾಂತರ ವಿಚಾರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಇದು ಕೇವಲ ಕ್ರೈಸ್ತರಿಗೆ ಮಾತ್ರ ಸೀಮಿತವಾದುದಲ್ಲ. ಎಲ್ಲ ಧರ್ಮಕ್ಕೆ ಸಂಬಂಧಿಸಿದ್ದು, ಒಂದು ವರ್ಗವನ್ನು ಗುರಿಯಾಗಿಸಲು ಹಾಗೂ ಶೋಷಣೆ ಮಾಡಲು ಈ ಮಸೂದೆ ತರಲಾಗಿದೆ ಎಂದರು. ಇದನ್ನೂ ಓದಿ: ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ: ಸಿ.ಎಂ ಇಬ್ರಾಹಿಂ

suverna soudha1

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮತಾಂತರಗೊಂಡಾಗ ದೊಡ್ಡ ಪ್ರಮಾಣದಲ್ಲಿ ಸಾಮೂಹಿಕ ಮತಾಂತರ ನಡೆಯಿತು. ಇದು ಭಾರತದ ಇತಿಹಾಸ. ರಾಜ್ಯದಲ್ಲಿ ಅನೇಕ ವೈದ್ಯಕೀಯ, ಇಂಜಿನಿಯರಿಂಗ್, ಪದವಿ ಕಾಲೇಜು ಹಾಗೂ ಶಾಲೆಗಳು ಇವೆ. ಆಸ್ಪತ್ರೆಗಳು, ಧಾರ್ಮಿಕ ಸಂಸ್ಥೆಗಳಿವೆ. ಆದರೂ ಸಚಿವರ ಮಕ್ಕಳು ಕ್ರೈಸ್ತ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲೇ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗುತ್ತಾರೆ. ಈಗಲೂ ಕೇಂದ್ರದ ಹಲವು ಸಚಿವರ ಮಕ್ಕಳು ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿದ್ದಾರೆ. ಈ ಮಸೂದೆ ರಾಜ್ಯದಲ್ಲಿ ಮುಂದೆ ಬರಬಹುದಾದ ಬಂಡವಾಳ ಹೂಡಿಕೆ ಮೇಲೂ ಕೆಟ್ಟ ಪರಿಣಾಮ ಬೀರಲಿದೆ. ವಿದೇಶಿ ಬಂಡವಾಳ ಹೂಡಿಕೆದಾರರು ರಾಜ್ಯಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಇದರ ವಿರುದ್ಧ ಹೋರಾಡುತ್ತದೆ. ನಾವು ಜನರ ಮುಂದೆ ಹೋಗುತ್ತೇವೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಈ ಮಸೂದೆಯನ್ನು ಹಿಂಪಡೆಯಲಿದೆ ಎಂದರು.

DKSHI 1 1

ತಹಶೀಲ್ದಾರ್‌ ವರ್ಗಾವಣೆ ಏಕೆ?: ಚಿತ್ರದುರ್ಗದಲ್ಲಿ ಒಂದೇ ಒಂದು ಬಲವಂತದ ಮತಾಂತರ ಆಗಿಲ್ಲ ಎಂದು ವರದಿ ನೀಡಿರುವ ತಹಶೀಲ್ದಾರರನ್ನು ವರ್ಗಾವಣೆ ಮಾಡಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಶಾಸಕರೊಬ್ಬರು ಹುಚ್ಚರಂತೆ ಮಾತನಾಡುತ್ತಿದ್ದಾರೆ. ಅವರ ತಾಯಿ ವಿಚಾರದಲ್ಲಿ ಏನಾಗಿದೆಯೋ ಅದು ಅವರ ವೈಯಕ್ತಿಕ ವಿಚಾರ. ಆದರೆ ಚಿತ್ರದುರ್ಗ ತಹಶೀಲ್ದಾರ್ ಅವರು ವರದಿ ನೀಡಿದಾಗ ವರ್ಗಾವಣೆ ಮಾಡಿರುವುದೇಕೆ? ಕೇವಲ ಇದೊಂದೇ ಅಲ್ಲ, ಶಿಕ್ಷೆ, ಸಾಕ್ಷ್ಯಾಧಾರ ಸೇರಿದಂತೆ ಅನೇಕ ವಿಚಾರಗಳು ಇದರಲ್ಲಿ ಅಡಗಿವೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

DKSHI

ಮತಾಂತರ ಆಗುವ ಮುನ್ನ ಅಥವಾ ನಂತರ ಅವರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹೋಗಬೇಕು ಎಂಬ ಅಂಶವಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮತಾಂತರ ಆಗಲು ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಹಾಕಬೇಕಂತೆ. ಇದು ಈ ದೇಶದಲ್ಲಿ ಸಾಧ್ಯವೇ? ಈ ದೇಶದ ಅನೇಕ ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ವಿದೇಶದಿಂದ ಬಂದ ಅನೇಕರು ಭಜನೆ ಮಾಡುತ್ತಾರೆ. ಇದನ್ನು ತಡೆಯಲು ಸಾಧ್ಯವೇ? ಇದು ಬಲವಂತದಿಂದ ಮಾಡಲಾಗುತ್ತಿದೆಯೇ ಎಂದು ಅವರು ಪ್ರಶ್ನಿಸಿದರು.

TAGGED:Anti-conversion Billd k shivakumarಡಿ.ಕೆ.ಶಿವಕುಮಾರ್ಮತಾಂತರ ನಿಷೇಧ ಮಸೂದೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
5 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
15 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
20 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
51 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?