Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಲಿತಾಂಶದಿಂದ ದಿಗ್ಭ್ರಮೆ, ಸಹೋದರ ಗೆದ್ದಿರೋದು ಸಂತೋಷವಾಗ್ತಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫಲಿತಾಂಶದಿಂದ ದಿಗ್ಭ್ರಮೆ, ಸಹೋದರ ಗೆದ್ದಿರೋದು ಸಂತೋಷವಾಗ್ತಿಲ್ಲ: ಡಿಕೆಶಿ

Bengaluru City

ಫಲಿತಾಂಶದಿಂದ ದಿಗ್ಭ್ರಮೆ, ಸಹೋದರ ಗೆದ್ದಿರೋದು ಸಂತೋಷವಾಗ್ತಿಲ್ಲ: ಡಿಕೆಶಿ

Public TV
Last updated: May 28, 2019 6:10 pm
Public TV
Share
3 Min Read
dkshi 2
SHARE

– ಮಾಧ್ಯಮಗಳ ಜೊತೆ ಮಾತನಾಡಬಾರದು ಅನ್ನೋ ಸೂಚನೆ ಇದೆ
– ಸೋಲಿನ ಬಗ್ಗೆ ವಿಮರ್ಷೆ, ವಿಷಯ ಸಂಗ್ರಹ

ಬೆಂಗಳೂರು: ಲೋಕಸಭೆ ಫಲಿತಾಂಶದಿಂದ ನನಗೆ ದಿಗ್ಭ್ರಮೆ ಆಶ್ಚರ್ಯವಾಗಿದೆ. ಇಂತಹ ಫಲಿತಾಂಶ ನಾನು ನಿರೀಕ್ಷೆ ಮಾಡಿರಲಿಲ್ಲ. ಹೀಗಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ನನ್ನ ಸಹೋದರ ಡಿ.ಕೆ ಸುರೇಶ್ ಗೆದ್ದಿರುವುದು ನನಗೆ ಸಂತೋಷವಾಗುತ್ತಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಕುಟುಂಬದೊಡನೆ ವಿದೇಶ ಪ್ರವಾಸದಲ್ಲಿದ್ದ ಡಿಕೆಶಿ ಅವರು ಬೆಂಗಳೂರಿಗೆ ಮರಳಿದ್ದಾರೆ. ಹೀಗಾಗಿ ಇಂದು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.

dksuresh

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ನಾಯಕರ ಅನುಮತಿ ಪಡೆದು ಕುಟುಂಬಕ್ಕೆ ಟೈಂ ಕೊಡಲು ಪ್ರವಾಸ ಹೋಗಿದ್ದೆ. ಆದರೆ ನನಗೆ ಪ್ರವಾಸದಲ್ಲೇ ವಿಷಯ ಗೊತ್ತಾಯ್ತು. ಈ ತರಹದ ಫಲಿತಾಂಶವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ದೇವೇಗೌಡರು ಸೇರಿ 10 ಸಂಸದರು ಸೋತಿದ್ದು ಅಚ್ಚರಿ ಮೂಡಿಸಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಸೋಲಿನ ಬಗ್ಗೆ ವಿಮರ್ಶೆ ಮಾಡುತ್ತೇವೆ. ನನ್ನ ಸಹೋದರ ಗೆದ್ದಿರುವುದು ನನಗೆ ಸಂತೋಷವಾಗುತ್ತಿಲ್ಲ ಎಂದು ಬೇಸರದ ನುಡಿಗಳನ್ನಾಡಿದರು.

mallikarjuna kharge

ದೇಶಕ್ಕೆ ಖರ್ಗೆ, ದೇವೇಗೌಡರ ಹೋರಾಟ ಹೆಚ್ಚಿದೆ. ಅವರ ಚರಿತ್ರೆಗಳು ಇತಿಹಾಸ ಸೇರುತ್ತಾ ಅಂತ ಅನ್ನಿಸುತ್ತಿದೆ. ನನ್ನ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ 3 ಲಕ್ಷ ಲೀಡ್ ಬರುತ್ತದೆ ಎಂದುಕೊಂಡಿದ್ದೆ. ಆದರೆ ಅದು ಆಗಲಿಲ್ಲ. ಚುನಾವಣೆ ಫಲಿತಾಂಶದಲ್ಲಿ ಹೆಚ್ಚು ನಿರೀಕ್ಷೆ ಇತ್ತು, ಈ ಸೋಲು ನನಗೆ ನಂಬಲು ಆಗ್ತಿಲ್ಲ. 10 ಜನರು ಅಭ್ಯರ್ಥಿ ಇದ್ದರೂ 1 ಸ್ಥಾನ ಗೆದ್ದಿರೋದನ್ನ ನಂಬೋಕೆ ಆಗುತ್ತಿಲ್ಲ. ಯಾಕೆ ಹೀಗೆ ಆಗಿದೆ ವಿಮರ್ಶೆ ಮಾಡುತ್ತೇನೆ. ಎಲ್ಲಿ ಸಮಸ್ಯೆ ಆಗಿದೆ ಎನ್ನುವುದರ ಬಗ್ಗೆ ವಿಷಯ ಸಂಗ್ರಹ ಮಾಡುತ್ತೇನೆ ಎಂದರು.

HDD 1

ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರವಾಗಿ ಮಾತನಾಡಿ, ಇದು ಕ್ಯಾಬಿನೆಟ್ ನಿರ್ಧಾರ. ಇದು ಹಿಂದಿನ ಸರ್ಕಾರ ತೆಗೆದುಕೊಂಡ ನಿರ್ಧಾರವಾಗಿದ್ದು, ಬಂಡವಾಳ ಹೂಡಿಕೆಗಾಗಿ ಸಮಾವೇಶ ಮಾಡಿದ್ದೇವು. ಜಿಂದಾಲ್ ನಮ್ಮ ರಾಜ್ಯಕ್ಕೆ ದೊಡ್ಡ ಗೌರವ ತಂದುಕೊಟ್ಟಿದೆ. ಉದ್ಯೋಗ, ವಿದ್ಯುತ್ ಸೇರಿದಂತೆ ಉತ್ತಮ ಕೆಲಸ ಜಿಂದಾಲ್ ರಾಜ್ಯಕ್ಕೆ ನೀಡಿದೆ. ಹಿಂದಿನ ಸರ್ಕಾರಕ್ಕೆ ಮಾತುಕೊಟ್ಟಂತೆ ಜಿಂದಾಲ್‍ಗೆ ಭೂಮಿ ನೀಡಲಾಗುತ್ತಿದೆ. ಇದು ತಪ್ಪಲ್ಲ, ಹಿಂದೆ ನಾನು ಇನ್ಫೋಸಿಸ್‍ಗೆ ಜಾಗ ನೀಡಿದಾಗಲೂ ವಿರೋಧ ವ್ಯಕ್ತವಾಗಿತ್ತು. ಆದರೆ ಅದರಿಂದ ಬಳಿಕ ಹೆಚ್ಚು ಅನುಕೂಲವಾಗಿತ್ತು. ಬಂಡವಾಳ ಹೂಡಿಕೆ ಮಾಡುವವರಿಗೆ ಅನುಕೂಲ ಮಾಡಬೇಕು. ಉದ್ಯಮಗಳಿಗೆ ಅನುಕೂಲವಾಗಲು ಜಾಗಗಳನ್ನ ನೀಡಬೇಕು. ಕೆಲವೊಂದು ಸಮಯದಲ್ಲಿ ಕೆಲವನ್ನು ಪಡೆಯಬೇಕಾದರೆ, ಇನ್ನೂ ಕೆಲವನ್ನು ಕಳೆದುಕೊಳ್ಳಬೇಕು ಎಂದು ಜಿಂದಾಲ್‍ಗೆ ಭೂಮಿ ನೀಡುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

collage jds

ಸಮ್ಮಿಶ್ರ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ತೀವಿ. ಯಾರ ವೈಯಕ್ತಿಕ ವಿಚಾರಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಪಕ್ಷದ ಕಾರ್ಯಕರ್ತ. ನಮ್ಮ ನಾಯಕರು ಮಾಧ್ಯಮಗಳ ಜೊತೆ ಮಾತನಾಡಬೇಡಿ ಅಂತ ಹೇಳಿದ್ದಾರೆ. ಆದರೆ ಇವತ್ತು ಒಂದು ದಿವಸ ಮಾತನಾಡುತ್ತಿದ್ದೇನೆ. ಬೇರೆಯವರ ತರಹ ಬೈಬಾರದು ಅಂತ ಇವತ್ತು ನಾನು ನಿಮ್ಮ ಜೊತೆ ಮಾತಾಡುತ್ತಿದ್ದೇನೆ ಎಂದರು.

ಸರ್ಕಾರ ವಿಸರ್ಜನೆ ಮಾಡಿ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರ ಕೈಯಲ್ಲಿ ಎಲ್ಲಾ ಇದೆ. ಅವರ ಕೈಯಲ್ಲಿ ಇರೋದನ್ನ ಮಾಡಲಿ ಎಂದು ಹೇಳಿ ಟಾಂಗ್ ಕೊಟ್ಟರು.

BSY BJP

ಲಿಂಗಾಯತರನ್ನ ಕಡೆಗಣಿಸಿದ್ದಾರೆ ಎನ್ನುವ ಬಿಸಿ ಪಾಟೀಲ್ ಹೇಳಿಕೆಯ ಬಗ್ಗೆ ಮಾತನಾಡಿ, ನಾನು ಯಾವುದನ್ನು ನೋಡಿಲ್ಲ. ನಾನು ಯಾರ ವೈಯಕ್ತಿಕ ಅಭಿಪ್ರಾಯಕ್ಕೆ ಉತ್ತರ ಕೊಡುವುದಿಲ್ಲ. ಯಾವ ಜಾತಿ ಬಗ್ಗೆಯೂ ಮಾತನಾಡುವುದಿಲ್ಲ. ಸದ್ಯಕ್ಕೆ ನನ್ನ ಬಾಯಿಗೆ ಬೀಗ ಹಾಕಿಕೊಂಡಿದ್ದೇನೆ. ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಬಗ್ಗೆ ನನಗೇನು ಗೊತ್ತಿಲ್ಲ. ಮಾಧ್ಯಮಗಳಿಗೆ ಹೋಗಬಾರದು ಅಂತ ಪಕ್ಷ ಹೇಳಿದೆ. ಆದ್ರೆ ನನಗೆ ಇವತ್ತು ಒಂದು ದಿನ ವಿಶೇಷ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

TAGGED:bengaluruCoalition Governmentd k shivakumarLokSabha electionPublic TVresultಡಿಕೆ ಶಿವಕುಮಾರ್ಪಬ್ಲಿಕ್ ಟಿವಿಫಲಿತಾಂಶಬೆಂಗಳೂರುಲೋಕಸಭಾ ಚುನಾವಣೆಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
28 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
55 minutes ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
1 hour ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?