Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಫಲಿತಾಂಶದಿಂದ ದಿಗ್ಭ್ರಮೆ, ಸಹೋದರ ಗೆದ್ದಿರೋದು ಸಂತೋಷವಾಗ್ತಿಲ್ಲ: ಡಿಕೆಶಿ

Public TV
Last updated: May 28, 2019 6:10 pm
Public TV
Share
3 Min Read
dkshi 2
SHARE

– ಮಾಧ್ಯಮಗಳ ಜೊತೆ ಮಾತನಾಡಬಾರದು ಅನ್ನೋ ಸೂಚನೆ ಇದೆ
– ಸೋಲಿನ ಬಗ್ಗೆ ವಿಮರ್ಷೆ, ವಿಷಯ ಸಂಗ್ರಹ

ಬೆಂಗಳೂರು: ಲೋಕಸಭೆ ಫಲಿತಾಂಶದಿಂದ ನನಗೆ ದಿಗ್ಭ್ರಮೆ ಆಶ್ಚರ್ಯವಾಗಿದೆ. ಇಂತಹ ಫಲಿತಾಂಶ ನಾನು ನಿರೀಕ್ಷೆ ಮಾಡಿರಲಿಲ್ಲ. ಹೀಗಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ನನ್ನ ಸಹೋದರ ಡಿ.ಕೆ ಸುರೇಶ್ ಗೆದ್ದಿರುವುದು ನನಗೆ ಸಂತೋಷವಾಗುತ್ತಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಕುಟುಂಬದೊಡನೆ ವಿದೇಶ ಪ್ರವಾಸದಲ್ಲಿದ್ದ ಡಿಕೆಶಿ ಅವರು ಬೆಂಗಳೂರಿಗೆ ಮರಳಿದ್ದಾರೆ. ಹೀಗಾಗಿ ಇಂದು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.

dksuresh

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ನಾಯಕರ ಅನುಮತಿ ಪಡೆದು ಕುಟುಂಬಕ್ಕೆ ಟೈಂ ಕೊಡಲು ಪ್ರವಾಸ ಹೋಗಿದ್ದೆ. ಆದರೆ ನನಗೆ ಪ್ರವಾಸದಲ್ಲೇ ವಿಷಯ ಗೊತ್ತಾಯ್ತು. ಈ ತರಹದ ಫಲಿತಾಂಶವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ದೇವೇಗೌಡರು ಸೇರಿ 10 ಸಂಸದರು ಸೋತಿದ್ದು ಅಚ್ಚರಿ ಮೂಡಿಸಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಸೋಲಿನ ಬಗ್ಗೆ ವಿಮರ್ಶೆ ಮಾಡುತ್ತೇವೆ. ನನ್ನ ಸಹೋದರ ಗೆದ್ದಿರುವುದು ನನಗೆ ಸಂತೋಷವಾಗುತ್ತಿಲ್ಲ ಎಂದು ಬೇಸರದ ನುಡಿಗಳನ್ನಾಡಿದರು.

mallikarjuna kharge

ದೇಶಕ್ಕೆ ಖರ್ಗೆ, ದೇವೇಗೌಡರ ಹೋರಾಟ ಹೆಚ್ಚಿದೆ. ಅವರ ಚರಿತ್ರೆಗಳು ಇತಿಹಾಸ ಸೇರುತ್ತಾ ಅಂತ ಅನ್ನಿಸುತ್ತಿದೆ. ನನ್ನ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ 3 ಲಕ್ಷ ಲೀಡ್ ಬರುತ್ತದೆ ಎಂದುಕೊಂಡಿದ್ದೆ. ಆದರೆ ಅದು ಆಗಲಿಲ್ಲ. ಚುನಾವಣೆ ಫಲಿತಾಂಶದಲ್ಲಿ ಹೆಚ್ಚು ನಿರೀಕ್ಷೆ ಇತ್ತು, ಈ ಸೋಲು ನನಗೆ ನಂಬಲು ಆಗ್ತಿಲ್ಲ. 10 ಜನರು ಅಭ್ಯರ್ಥಿ ಇದ್ದರೂ 1 ಸ್ಥಾನ ಗೆದ್ದಿರೋದನ್ನ ನಂಬೋಕೆ ಆಗುತ್ತಿಲ್ಲ. ಯಾಕೆ ಹೀಗೆ ಆಗಿದೆ ವಿಮರ್ಶೆ ಮಾಡುತ್ತೇನೆ. ಎಲ್ಲಿ ಸಮಸ್ಯೆ ಆಗಿದೆ ಎನ್ನುವುದರ ಬಗ್ಗೆ ವಿಷಯ ಸಂಗ್ರಹ ಮಾಡುತ್ತೇನೆ ಎಂದರು.

HDD 1

ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರವಾಗಿ ಮಾತನಾಡಿ, ಇದು ಕ್ಯಾಬಿನೆಟ್ ನಿರ್ಧಾರ. ಇದು ಹಿಂದಿನ ಸರ್ಕಾರ ತೆಗೆದುಕೊಂಡ ನಿರ್ಧಾರವಾಗಿದ್ದು, ಬಂಡವಾಳ ಹೂಡಿಕೆಗಾಗಿ ಸಮಾವೇಶ ಮಾಡಿದ್ದೇವು. ಜಿಂದಾಲ್ ನಮ್ಮ ರಾಜ್ಯಕ್ಕೆ ದೊಡ್ಡ ಗೌರವ ತಂದುಕೊಟ್ಟಿದೆ. ಉದ್ಯೋಗ, ವಿದ್ಯುತ್ ಸೇರಿದಂತೆ ಉತ್ತಮ ಕೆಲಸ ಜಿಂದಾಲ್ ರಾಜ್ಯಕ್ಕೆ ನೀಡಿದೆ. ಹಿಂದಿನ ಸರ್ಕಾರಕ್ಕೆ ಮಾತುಕೊಟ್ಟಂತೆ ಜಿಂದಾಲ್‍ಗೆ ಭೂಮಿ ನೀಡಲಾಗುತ್ತಿದೆ. ಇದು ತಪ್ಪಲ್ಲ, ಹಿಂದೆ ನಾನು ಇನ್ಫೋಸಿಸ್‍ಗೆ ಜಾಗ ನೀಡಿದಾಗಲೂ ವಿರೋಧ ವ್ಯಕ್ತವಾಗಿತ್ತು. ಆದರೆ ಅದರಿಂದ ಬಳಿಕ ಹೆಚ್ಚು ಅನುಕೂಲವಾಗಿತ್ತು. ಬಂಡವಾಳ ಹೂಡಿಕೆ ಮಾಡುವವರಿಗೆ ಅನುಕೂಲ ಮಾಡಬೇಕು. ಉದ್ಯಮಗಳಿಗೆ ಅನುಕೂಲವಾಗಲು ಜಾಗಗಳನ್ನ ನೀಡಬೇಕು. ಕೆಲವೊಂದು ಸಮಯದಲ್ಲಿ ಕೆಲವನ್ನು ಪಡೆಯಬೇಕಾದರೆ, ಇನ್ನೂ ಕೆಲವನ್ನು ಕಳೆದುಕೊಳ್ಳಬೇಕು ಎಂದು ಜಿಂದಾಲ್‍ಗೆ ಭೂಮಿ ನೀಡುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

collage jds

ಸಮ್ಮಿಶ್ರ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ತೀವಿ. ಯಾರ ವೈಯಕ್ತಿಕ ವಿಚಾರಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಪಕ್ಷದ ಕಾರ್ಯಕರ್ತ. ನಮ್ಮ ನಾಯಕರು ಮಾಧ್ಯಮಗಳ ಜೊತೆ ಮಾತನಾಡಬೇಡಿ ಅಂತ ಹೇಳಿದ್ದಾರೆ. ಆದರೆ ಇವತ್ತು ಒಂದು ದಿವಸ ಮಾತನಾಡುತ್ತಿದ್ದೇನೆ. ಬೇರೆಯವರ ತರಹ ಬೈಬಾರದು ಅಂತ ಇವತ್ತು ನಾನು ನಿಮ್ಮ ಜೊತೆ ಮಾತಾಡುತ್ತಿದ್ದೇನೆ ಎಂದರು.

ಸರ್ಕಾರ ವಿಸರ್ಜನೆ ಮಾಡಿ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರ ಕೈಯಲ್ಲಿ ಎಲ್ಲಾ ಇದೆ. ಅವರ ಕೈಯಲ್ಲಿ ಇರೋದನ್ನ ಮಾಡಲಿ ಎಂದು ಹೇಳಿ ಟಾಂಗ್ ಕೊಟ್ಟರು.

BSY BJP

ಲಿಂಗಾಯತರನ್ನ ಕಡೆಗಣಿಸಿದ್ದಾರೆ ಎನ್ನುವ ಬಿಸಿ ಪಾಟೀಲ್ ಹೇಳಿಕೆಯ ಬಗ್ಗೆ ಮಾತನಾಡಿ, ನಾನು ಯಾವುದನ್ನು ನೋಡಿಲ್ಲ. ನಾನು ಯಾರ ವೈಯಕ್ತಿಕ ಅಭಿಪ್ರಾಯಕ್ಕೆ ಉತ್ತರ ಕೊಡುವುದಿಲ್ಲ. ಯಾವ ಜಾತಿ ಬಗ್ಗೆಯೂ ಮಾತನಾಡುವುದಿಲ್ಲ. ಸದ್ಯಕ್ಕೆ ನನ್ನ ಬಾಯಿಗೆ ಬೀಗ ಹಾಕಿಕೊಂಡಿದ್ದೇನೆ. ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಬಗ್ಗೆ ನನಗೇನು ಗೊತ್ತಿಲ್ಲ. ಮಾಧ್ಯಮಗಳಿಗೆ ಹೋಗಬಾರದು ಅಂತ ಪಕ್ಷ ಹೇಳಿದೆ. ಆದ್ರೆ ನನಗೆ ಇವತ್ತು ಒಂದು ದಿನ ವಿಶೇಷ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

TAGGED:bengaluruCoalition Governmentd k shivakumarLokSabha electionPublic TVresultಡಿಕೆ ಶಿವಕುಮಾರ್ಪಬ್ಲಿಕ್ ಟಿವಿಫಲಿತಾಂಶಬೆಂಗಳೂರುಲೋಕಸಭಾ ಚುನಾವಣೆಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

You Might Also Like

landslide at sakaleshpura bengaluru murudeshwar train suspended
Districts

ಹಾಸನ | ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು – ಮುರುಡೇಶ್ವರ ರೈಲು ಸ್ಥಗಿತ

Public TV
By Public TV
9 minutes ago
Yoga 4
Bengaluru City

ʻಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ – ಈ ದಿನದ ಮಹತ್ವ ನೀವೂ ತಿಳಿಯಿರಿ…

Public TV
By Public TV
35 minutes ago
Gill Jaiswal
Cricket

England vs India, 1st Test: ಇಂಗ್ಲೆಂಡ್‌ ನೆಲದಲ್ಲಿ ಮೊದಲ ಪಂದ್ಯದಲ್ಲೇ ಜೈಸ್ವಾಲ್‌, ಗಿಲ್‌ ಶತಕದ ಸಾಧನೆ

Public TV
By Public TV
8 hours ago
alipur village chikkaballapur
Chikkaballapur

ಇರಾನ್-ಇಸ್ರೇಲ್ ಯುದ್ಧ; ಕರ್ನಾಟಕದ ಅಲೀಪುರದಲ್ಲಿ ಮನೆ ಮಾಡಿದ ಆತಂಕ

Public TV
By Public TV
9 hours ago
yashasvi jaiswal
Cricket

England vs India 1st Test – ಭಾರತಕ್ಕೆ 2 ಬಾರಿ 5 ರನ್‌!

Public TV
By Public TV
10 hours ago
indian students in iran
Latest

ಭಾರತೀಯರ ರಕ್ಷಣೆಗಾಗಿ ತನ್ನ ವಾಯುನೆಲೆ ತೆರೆದ ಇರಾನ್‌

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?