Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru Rural

ಸಿದ್ದರಾಮಯ್ಯರ ಮೇಲೆ ನಂಬಿಕೆ ಇದೆ, ಅವ್ರು ಆ ರೀತಿ ಹೇಳಿರಲ್ಲ: ಡಿಕೆಶಿ ತಿರುಗೇಟು

Public TV
Last updated: October 28, 2019 8:23 am
Public TV
Share
3 Min Read
DHShi Siddu
SHARE

ಬೆಂಗಳೂರು: ಡಿಕೆಶಿ ಜೆಡಿಎಸ್ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ತುಮಕೂರು ಜಿಲ್ಲೆಯ ಶಿರಾದ ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಠದಲ್ಲಿ ಮಾತನಾಡಿದ ಮಾಜಿ ಸಚಿವರು, ನಾನು ಜೈಲಿನಿಂದ ಹೊರ ಬರಲು ಎಲ್ಲ ಸಮಾಜ, ಪಕ್ಷ, ಸಂಘಗಳು ಪಕ್ಷಾತೀತವಾಗಿ ಹೋರಾಟ ನಡೆಸಿವೆ. ಬೆಂಗಳೂರು ವಿಮಾನ ನಿಲ್ದಾಣದಿಂದ ನಾನು ಬರುವಾಗ ಜೆಡಿಎಸ್ ಕಾರ್ಯಕರ್ತರು ದಾರಿಯಲ್ಲಿ ನಿಂತು ಹಾರೈಸಿದರು. ನನ್ನನ್ನು ನೋಡಲು ಮಾಜಿ ಸಿಎಂ ಕುಮಾರಸ್ವಾಮಿ ಜೈಲಿಗೆ ಬಂದಿದ್ದರು. ಅವರನ್ನು ಬರಬೇಡಿ ಎನ್ನುವುದಕ್ಕೆ ಆಗುತ್ತಾ? ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಕೂಡ ಬಂದಿದ್ದರು. ಆದರೆ ಅವರಿಗೆ ನನ್ನನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ ಎಂದರು.

Siddu A 1

ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ, ಗೌರವ ಇದೆ. ಅವರು ಆ ರೀತಿ ಮಾತನಾಡಿರುವುಕ್ಕೆ ಸಾಧ್ಯವಿಲ್ಲ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಪಿಎ ರಮೇಶ್ ನನ್ನ ಹುಡುಗ. ಸೋಮವಾರ ರಮೇಶ್ ಮನೆಗೂ ಹೋಗಿ ಕುಟುಂಬಕ್ಕೆ ಧೈರ್ಯ ತುಂಬುತ್ತೇನೆ ಎಂದರು. ಆದರೆ ಕೇಂದ್ರ ಸರ್ಕಾರ ಐಟಿ, ಇಡಿ ದುರ್ಬಳಕೆ ಬಗ್ಗೆ ಹೇಳಿಕೆ ನೀಡಲು ಡಿ.ಕೆ.ಶಿವಕುಮಾರ್ ನಿರಾಕರಿಸಿದರು.

ನಾನು ಪಕ್ಷಾತೀತ ನಾಯಕ, ನನಗೆ ಎಲ್ಲ ವರ್ಗದವರ ಆಶೀರ್ವಾದ ಇದೆ. ನಾನು ಅರೆಸ್ಟ್ ಆದಾಗ ನಂಜಾವಧೂತ ಶ್ರೀಗಳು ನನ್ನ ಪರವಾಗಿ ಹೋರಾಟ ಮಾಡಿದ್ರು. ಪಾದಯಾತ್ರೆ ನಡೆಸಿ ರಾಜ್ಯಕ್ಕೆ ಸಂದೇಶ ಕೊಟ್ಟರು. ನಾನು ಎಲ್ಲರ ಮನೆಗೆ ಹೋಗಿ ವೈಯಕ್ತಿಕವಾಗಿ ಭೇಟಿ ಆಗುವುದಕ್ಕೆ ಆಗುವುದಿಲ್ಲ. ಹಾಗಾಗಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು, ರಾಜ್ಯದ ಜನಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

DKShi

ನಾನೇನು ತಪ್ಪು ಮಾಡಿಲ್ಲ, ನನಗೆ ಅನ್ಯಾಯವಾಗಿದೆ ಅಂತ ಜನ ಬೀದಿಗಿಳಿದರು. ಕೃತಜ್ಞತೆ ಸಲ್ಲಿಸುವುದು ನನ್ನ ಕರ್ತವ್ಯ, ಹಾಗಾಗಿ ಭೇಟಿ ನೀಡಿದ್ದೇನೆ. ದಸರಾ ಹಬ್ಬದ ವೇಳೆ ತಂದೆ ಸಮಾಧಿಗೆ ಪೂಜೆ ಸಲ್ಲಿಸಲು ಆಗಿರಲಿಲ್ಲ. ಸೋಮವಾರ ತಂದೆ ಸಮಾಧಿಗೆ, ಕುಟುಂಬದ ಹಿರಿಯರಿಗೆ ಪೂಜೆ ಸಲ್ಲಿಸುತ್ತೇನೆ. ಮೈಸೂರಿಗೆ ಹೋಗಿ ಅಲ್ಲಿಯೂ ದೇವಸ್ಥಾನ, ಹಿರಿಯರ ಭೇಟಿ ಮಾಡಲಿದ್ದೇನೆ. ನನ್ನಿಂದ ನನ್ನ ಸ್ನೇಹಿತರ, ಸಂಬಂಧಿಕರ ಮನೆ ಮೇಲೂ ಐಟಿ ರೇಡ್ ಆಗಿತ್ತು. ಅವರ ಮನೆಗಳಿಗೆ ಹೋಗಿ ಮಾತನಾಡುತ್ತೇನೆ, ಧೈರ್ಯ ತುಂಬುತ್ತೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಹೇಳಿದ್ದೇನು?:
ಕಾವೇರಿ ನಿವಾಸದಲ್ಲಿ ಕುಳಿತು ಸಿದ್ದರಾಮಯ್ಯ ತಮ್ಮ ಆಪ್ತರ ಜೊತೆಗೆ ಮಾತನಾಡುತ್ತಿದ್ದರು. ಈ ವೇಳೆ ಹುಣಸೂರು ಮಂಜುನಾಥ್ ಅವರು ಮಾತು ಆರಂಭಿಸಿ, ಲಿಂಗಾಯತ ಕಮ್ಯೂನಿಟಿ ಬಿಜೆಪಿ ಮೇಲೆ ಸ್ವಲ್ಪ ಡಿಸ್ಟರ್ಬ್ ಆಗಿದ್ದಾರೆ ಸರ್ ಎಂದರು. ಆಗ ಸಿದ್ದರಾಮಯ್ಯ, ಲಿಂಗಾಯತರು ಯಡಿಯೂರಪ್ಪಗೆ ಮೊದಲಿನ ತರ ಇರಲ್ಲಾ. ಒಕ್ಕಲಿಗರು ಕುಮಾರಸ್ವಾಮಿಗೆ ಮೊದಲಿನ ತರ ಇರಲ್ಲಾ ಎಂದಿದ್ದರು.

Siddu Main App

ಈ ಮಧ್ಯೆ ಧ್ವನಿಗೂಡಿಸಿದ ಪಿರಿಯಾಪಟ್ಟಣ ವೆಂಕಟೇಶ್, ಅದು ಸರಿ. ಆದರೆ ಎನ್ ಕ್ಯಾಶ್ ಮಾಡಿಕೊಳ್ಳೋಕೆ ನಮ್ಮವರೆ ತಯಾರಿಲ್ವಲ್ಲ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಕರೆಕ್ಟ್ ಎಂದು ಹೇಳಿದ್ದರು.

ಮಾತು ಮುಂದುರಿಸಿದ ವೆಂಕಟೇಶ್ ಅವರು, ಡಿ.ಕೆ.ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿಯುತ್ತಾರೆ ಅಂದ್ರೆ ಏನರ್ಥ ಎಂದು ಪ್ರಶ್ನಿಸಿದರು. ಆಗ ಸಿದ್ದರಾಮಯ್ಯನವರು, ಅದು ಹೌದು, ಏನು ಅರ್ಥ? ಬರುವಾಗ ಜೆಡಿಎಸ್ ಕಾಂಗ್ರೆಸ್ ಬಾವುಟ ಹಿಡಿದುಕೊಂಡು ಬಂದ್ರು ಏನ್ ಹೇಳೋದು. ಏನು ಅರ್ಥ ಎಂದು ಅಸಮಾಧಾನ ಹೊರ ಹಾಕಿದರು. ಇದಕ್ಕೆ ಪಿರಿಯಾಪಟ್ಟಣ ವೆಂಕಟೇಶ್, ಏನ್ ಹೇಳೋದು ಎಂದು ಕುಟುಕಿದ್ದರು.

ನಾನು ನಿನ್ನೆ ಗದಗ್‍ನಲ್ಲಿ ಹೇಳಿ ಬಂದಿದ್ದೇನೆ. ಜೆಡಿಎಸ್‍ನವರ ಸಹವಾಸ ಇನ್ನು ಇಲ್ಲಾ ಅಂದಿದ್ದೀನೆ ಎಂದು ಸಿದ್ದರಾಮಯ್ಯ ಧ್ವನಿಗೂಡಿಸಿದರು. ಈ ವೇಳೆ ವೆಂಕಟೇಶ್ ಅವರು, ನೀವೆಲ್ಲಾ ಸ್ಟಿಕ್ಕಾನ್ ಆಗಬೇಕು. ಏನು ಆಗುತ್ತೋ ಆಗ್ಲಿ ಎಂದರು. ಆಗ ಸಿದ್ದರಾಮಯ್ಯನವರು ಕೂಡ, ಏನು ಆಗುತ್ತೋ ಆಗ್ಲಿ ಎಂದು ಗುಡುಗಿದ್ದರು.

TAGGED:d k shivakumarhd kumaraswamyjdsPublic TVsiddaramaiahvideoಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States
Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood

You Might Also Like

CT Ravi 1
Bengaluru City

ಸಿಎಂ‌ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

Public TV
By Public TV
2 minutes ago
Ramalinga Reddy 1
Bengaluru City

ಧರ್ಮಾಧಿಕಾರಿಗಳ ವಿರುದ್ಧ ಯಾರೂ ಇಲ್ಲ: ರಾಮಲಿಂಗಾರೆಡ್ಡಿ

Public TV
By Public TV
2 minutes ago
Sharanagouda Kandakur
Bengaluru City

ʻಧರ್ಮಸ್ಥಳದ ಮಂಜುನಾಥನನ್ನು ರಕ್ಷಿಸಿʼ – ವಿಧಾನಸೌಧಕ್ಕೆ ಪೋಸ್ಟರ್ ಹಿಡಿದು ಬಂದ ಜೆಡಿಎಸ್ ಶಾಸಕ

Public TV
By Public TV
24 minutes ago
KRS Dam
Districts

ಉತ್ತಮ ಮಳೆಯಿಂದ KRSಗೆ ಒಳ ಹರಿವು ಹೆಚ್ಚಳ – 80,000 ಕ್ಯೂಸೆಕ್ ನೀರು ನದಿಗೆ

Public TV
By Public TV
25 minutes ago
Vijayendra 1
Bengaluru City

ಸರ್ಕಾರದ ವಿರುದ್ಧ ಕೇಸರಿ ಪಡೆ ʻಧರ್ಮʼ ಯುದ್ಧ – ಷಡ್ಯಂತ್ರದ ಹಿಂದಿರೋರು ಯಾರು? – ಅಪಪ್ರಚಾರಕರ ವಿರುದ್ಧ ಕ್ರಮಕ್ಕೆ ಆಗ್ರಹ

Public TV
By Public TV
52 minutes ago
Security forces
Latest

ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟ – ಓರ್ವ ಪೊಲೀಸ್ ಸಾವು, ಮೂವರಿಗೆ ಗಾಯ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?