Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿ.ಕೆ ಶಿವಕುಮಾರ್

Bengaluru City

ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿ.ಕೆ ಶಿವಕುಮಾರ್

Public TV
Last updated: June 2, 2025 9:54 pm
Public TV
Share
5 Min Read
D K Shivakumar
SHARE

ಬೆಂಗಳೂರು: ಮಕ್ಕಳಲ್ಲಿ ಎಳೆ ವಯಸ್ಸಿನಲ್ಲಿ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ, ಗುಣಮಟ್ಟದ ಗಾಳಿ ಬಗ್ಗೆ ಅರಿವು ಮೂಡಿಸಲು ಜಿಬಿಎ ವ್ಯಾಪ್ತಿಯ ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ರಚನೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D K Shivakumar) ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಜೂ. 5ರಂದು ವಿಶ್ವ ಪರಿಸರ ದಿನ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಹವಾಮಾನ ಕಾರ್ಯಯೋಜನೆ(Climate action plan) ಕ್ಲಬ್ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಓರ್ವ ಶಿಕ್ಷಕರು ಹಾಗೂ ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಕ್ಲಬ್ ರಚಿಸಲಾಗುವುದು. ಇವರಿಗೆ ಅಗತ್ಯವಾದ ಪ್ರಮಾಣಪತ್ರ, ಬ್ಯಾಡ್ಜ್‌ಗಳನ್ನು ನಾವು ನೀಡುತ್ತೇವೆ. ದೇಶದಲ್ಲಿ ಮುಂಬೈ, ಚೆನ್ನೈ ಹಾಗೂ ಬೆಂಗಳೂರು ಮೂರು ನಗರಗಳು ಹವಾಮಾನ ಕಾರ್ಯ ಯೋಜನೆಯಲ್ಲಿ ತೊಡಗಿಸಿಕೊಂಡಿವೆ. ಇದರ ಭಾಗವಾಗಿ ನಾವು ಹೊಸ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ – ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ

ಜಿಬಿಎ ವ್ಯಾಪ್ತಿಯಲ್ಲಿ 6 ಸಾವಿರ ಶಾಲೆಗಳಿದ್ದು, ಇದರಲ್ಲಿ 4500 ಖಾಸಗಿ ಹಾಗೂ 1,500 ಸರ್ಕಾರಿ ಶಾಲೆಗಳಿವೆ. ಈ ಎಲ್ಲಾ ಶಾಲೆಗಳು ಈ ಯೋಜನೆಯಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ. ಇದಕ್ಕೆ ಈಗಾಗಲೇ 650 ಶಾಲೆಗಳು ಹಾಗೂ ಪಿಯು ಕಾಲೇಜುಗಳು ಒಪ್ಪಿಗೆ ನೀಡಿವೆ. ಈಗಾಗಲೇ 18 ಕ್ಲಬ್ ಗಳು ರಚನೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ | ಜೂ.9ರಂದು ಸರ್ವಪಕ್ಷಗಳ ನಿಯೋಗ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ

ಈ ಕ್ಲಬ್‌ಗಳನ್ನು ರಚಿಸಲು ಸಾರ್ವಜನಿಕ ಸಂಘ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು. ಇವುಗಳ ನೋಂದಣಿಗೆ 6ರಂದು ವೆಬ್‌ಸೈಟ್ ಅನಾವರಣಗೊಳಿಸಲಾಗುವುದು. ಇದರಲ್ಲಿ ಭಾಗವಹಿಸುವವರಿಗೆ ಬ್ಲೂ, ಗ್ರೀನ್ ಅವಾರ್ಡ್‌ಗಳನ್ನು ನೀಡಲಾಗುವುದು. ಈ ಕ್ಲಬ್‌ಗಳು ಹಸಿರು ಇಂಧನ, ಘನ ತ್ಯಾಜ್ಯ ನಿರ್ವಹಣೆ, ಗಾಳಿ ಗುಣಮಟ್ಟ, ತ್ಯಾಜ್ಯ ನೀರು, ಮಳೆನೀರು, ನಗರ ಯೋಜನೆ, ವಿಪತ್ತು ನಿರ್ವಹಣೆ ವಿಚಾರಗಳು ಒಳಗೊಂಡಿರುತ್ತದೆ. ಈ ವಿಚಾರಗಳ ಮೇಲೆ ಪ್ರಶಸ್ತಿಯನ್ನು ನೀಡಲಾಗುವುದು. 175 ಮಂದಿ, ಸಂಘ ಸಂಸ್ಥೆಗಳು ಈ ಪ್ರಶಸ್ತಿಗೆ ಆಯ್ಕೆಯಾಗಿವೆ. ಈ ಪ್ರಶಸ್ತಿ ಆಯ್ಕೆಗೆ 15 ತೀರ್ಪುಗಾರರ ತಂಡವನ್ನು ನೇಮಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 15 ಜನರ ವಿರುದ್ಧ ಎಫ್‌ಐಆರ್; ಕೇಸ್ ವಾಪಸ್ ಪಡೆಯಲು ಬಿಜೆಪಿ ಒತ್ತಾಯ

ಜೂನ್ 6ರಂದು ಸಂಜೆ ನೆಹರೂ ತಾರಾಲಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ವಸ್ತು ಪ್ರದರ್ಶನವನ್ನು ನಾವು ಆಯೋಜಿಸಿದ್ದೇವೆ. ಮುಂದಿನ ದಿನಗಳಲ್ಲಿ ಈ ಕ್ಲಬ್ ಮೂಲಕ ರಸಪ್ರಶ್ನೆ, ಚರ್ಚಾ ಸ್ಪರ್ಧೆ ಆಯೋಜಿಸಿ, ಮಕ್ಕಳಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುವುದು.ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರಿಗೆ ಇಲಾಖೆಯಲ್ಲಿ ಸಾವಿರಾರು ಬಸ್ ಖರೀದಿ ಮಾಡಲಾಗಿದೆ. ಇನ್ನು ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡಲಾಗುತ್ತಿವೆ. ನಾನು ಬೆಂಗಳೂರು ಸಚಿವನಾದ ಬಳಿಕ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಶಾಲೆಗಳ ಸಹಯೋಗದಲ್ಲಿ ಮಕ್ಕಳ ಕೈಯಲ್ಲಿ ಮರ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜೂನ್ 6ರಂದು ಸ್ವಚ್ಛ ಬೆಂಗಳೂರು ಯೋಜನೆ ಹಾಗೂ ಕಾರ್ಯಯೋಜನೆ ಘೋಷಣೆ ಮಾಡಲಾಗುವುದು. ಬೆಂಗಳೂರಿನಲ್ಲಿರುವ ಕಸವನ್ನು ಒಂದು ಬಾರಿಗೆ ತೆಗೆಯಬೇಕು ಎಂದು ತೀರ್ಮಾನಿಸಲಾಗಿದೆ. ಕಸವಿರುವ ಜಾಗದ ಬಗ್ಗೆ ಸಾರ್ವಜನಿಕರು ಜಿಬಿಎ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು. ಈ ಮಾಹಿತಿ ಬಂದ ನಂತರ ಅಧಿಕಾರಿಗಳು ಕಸ ವಿಲೇವಾರಿ ಮಾಡಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ

ಇನ್ನು ರಸ್ತೆ ಬದಿಯಲ್ಲಿ ಕಸ ತಂದು ಸುರಿಯುವುದನ್ನು ತಪ್ಪಿಸಲು ಹೆಚ್ಚು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಇನ್ನು ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ ಕೈಗೊಂಡಿದ್ದೇವೆ. 2023-24ನೇ ಸಾಲಿನಲ್ಲಿ 19 ಹೊಸ ಪಾರ್ಕ್ ಅಭಿವೃದ್ಧಿ ಮಾಡಿ, 47 ಪಾರ್ಕ್‌ಗಳನ್ನು ಮೇಲ್ದರ್ಜೆಗೆ ಏರಿಸಿದ್ದೇವೆ. 19 ಕೆರೆಗಳ ಅಭಿವೃದ್ಧಿ ಮಾಡಿ, 40 ಕೆರೆಗಳಿಗೆ ಬೇಲಿ ಹಾಕಲಾಗಿದೆ. ಇದಕ್ಕಾಗಿ 34.50 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೆರೆಗಳ ಅಭಿವೃದ್ಧಿಗೆ 55 ಕೋಟಿ ರೂ. ವೆಚ್ಚ ಮಾಡುತ್ತಿದ್ದು, ಜುಲೈ ವೇಳೆಗೆ 4 ಕೆರೆಗಳ ಅಭಿವೃದ್ಧಿ ಪೂರ್ಣಗೊಳ್ಳಲಿದೆ. 2025-26ನೇ ಸಾಲಿನಲ್ಲಿ ಉದ್ಯಾನವನಗಳ ಮೇಲ್ದರ್ಜೆಗೆ ಏರಿಸಲು 80 ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕೆರೆಗಳ ಅಭಿವೃದ್ಧಿಗೆ 250 ಕೋಟಿ ಮೀಸಲಿಡಲಾಗಿದೆ. ನ್ಯಾಯಾಲಯದ ನಿರ್ದೇಶನ ಮೇರೆಗೆ ನಗರದಲ್ಲಿ ಮರಗಣತಿ ಮಾಡಲು ತೀರ್ಮಾನಿಸಿದ್ದು, ಮಹದೇವಪುರ ಹಾಗೂ ಬೊಮ್ಮನಹಳ್ಳಿಯಲ್ಲಿ ಪ್ರಾಯೋಗಿಕ ಯೋಜನೆ ಮಾಡಲಾಗಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಒಂದೊಂದು ವಾರ್ಡ್‌ಗೆ 1 ಕೋಟಿ ರೂ. ಮೀಸಲಿಟ್ಟು ಬೆಂಗಳೂರು ಗ್ರೀನ್ ವಾರ್ಡ್ ಆಗಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ

ಈ ಕ್ಲಬ್ ಗಳ ಕಾರ್ಯಚಟುವಟಿಕೆ ಮೇಲ್ವಿಚಾರಣೆ ಇದರ ಮೇಲ್ವಿಚಾರಣೆಗೆ ಅಧಿಕಾರಿಗಳ ತಂಡ ನೇಮಿಸಲಾಗಿದೆ. ವಿಶೇಷ ಆಯುಕ್ತರು ಇದರ ಭಾಗವಾಗಿರುತ್ತಾರೆ. ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರ ತಂಡ ಕೂಡ ಇದರಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ನೂರಾರು ಶಾಲೆಗಳನ್ನು ನೋಂದಣಿ ಮಾಡಲಾಗಿದೆ ಎಂದರು.

ವಾಹನಗಳ ಹೊಗೆಯಿಂದ ವಾಯುಮಾಲಿನ್ಯ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಅವರು, ಇದಕ್ಕಾಗಿ ನಾವು ಸಾರಿಗೆ ಇಲಾಖೆ ಒಳಪಡಿಸಿಕೊಂಡಿದ್ದೇವೆ. ಮೊದಲು ಸಾರಿಗೆ ಇಲಾಖೆ ಬಸ್‌ಗಳ ಸಮಸ್ಯೆ ಬಗೆಹರಿಸಲಿದ್ದೇವೆ. ಎಲೆಕ್ಟ್ರಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

ಮರಗಣತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾವು 6.50 ಲಕ್ಷ ಮರಗಳನ್ನು ಗುರುತಿಸಿದ್ದೇವೆ. ಕಸದ ಸಮಸ್ಯೆ ಹೆಚ್ಚಾಗಿದ್ದು, ಮಾರ್ಷಲ್‌ಗಳು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಾರ್ಷಲ್‌ಗಳು ಅವರ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 1.50 ಕೋಟಿ ಜನಸಂಖ್ಯೆ ಇದೆ. ಇಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ. ಅವರಲ್ಲಿ ಜಾಗೃತಿ ಮೂಡಿಸಬೇಕು. ಕಸ ಎಸೆದರೆ ವಿಧಿಸುವ ದಂಡ ಏರಿಕೆ ಮಾಡಲು ಚಿಂತಿಸುತ್ತಿದ್ದೇವೆ. ಖಾಲಿ ನಿವೇಶನಗಳ ಮಾಲೀಕರಿಗೆ ತಮ್ಮ ನಿವೇಶನ ಸ್ವಚ್ಛವಾಗಿಟ್ಟುಕೊಳ್ಳಲು ಸೂಚಿಸಲಾಗುವುದು. ನಗರದಲ್ಲಿ ನಿತ್ಯ 6 ಸಾವಿರ ಟನ್ ಕಸ ಉತ್ಪತ್ತಿಯಾಗುತ್ತಿದೆ ಎಂದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

ಜಿಬಿಎ ಬೌಂಡರಿ ನಿಗದಿ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಇರುವ ವ್ಯಾಪ್ತಿಯನ್ನೇ ಮಾಡಲು ಅಧಿಸೂಚನೆ ಹೊರಡಿಸಿದ್ದೇವೆ. ಇದು ಅಂತಿಮವಾಗಿದೆ. ಈ ವಿಚಾರವಾಗಿ ಸಚಿವರು ಹಾಗೂ ಸರ್ವಪಕ್ಷ ಶಾಸಕರು ಅನೇಕ ಸಲಹೆ ನೀಡಿದ್ದಾರೆ. ಈ ವಿಚಾರವಾಗಿ ಕೆಲವರ ಬಗ್ಗೆ ಮಾತನಾಡಬೇಕಿದ್ದು, ಎರಡು 3 ದಿನಗಳಲ್ಲಿ ಎಷ್ಟು ಪಾಲಿಕೆ ಮಾಡಬೇಕು ಎಂದು ತೀರ್ಮಾನಿಸಿ, ಇದಕ್ಕೆ ಅಂತಿಮ ರೂಪ ನೀಡಬೇಕು. ಈ ಪಾಲಿಕೆಗಳ ಚುನಾವಣೆ ನಡೆಸಬೇಕು. ನಂತರ ಯಾವ ಯಾವ ಪ್ರದೇಶಗಳನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಾಗುವುದು ಎಂದು ಹೇಳಿದರು.

TAGGED:bengaluruclimate action pland k shivakumarSwachh Bengaluruಡಿ.ಕೆ.ಶಿವಕುಮಾರ್ಬೆಂಗಳೂರುಹವಾಮಾನ ಕಾರ್ಯಯೋಜನೆ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories

You Might Also Like

Bengaluru City

ರಾಜ್ಯದ ಹವಾಮಾನ ವರದಿ 03-02-2026

Public TV
By Public TV
1 minute ago
NGO Deccan Heritage Foundation interested in development of Lakkundi Gadag 2
Districts

ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ

Public TV
By Public TV
4 minutes ago
money robbery
Crime

ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ

Public TV
By Public TV
5 minutes ago
Pune Porsche crash
Court

ಪುಣೆ ಪೋರ್ಷೆ ಅಪಘಾತ ಪ್ರಕರಣ – ರಕ್ತದ ಮಾದರಿ ಬದಲಿಸಿದ್ದ ಆರೋಪಿಗಳಿಗೆ ಜಾಮೀನು

Public TV
By Public TV
15 minutes ago
R Ashoka
Bengaluru City

ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ: ಅಶೋಕ್‌ ಲೇವಡಿ

Public TV
By Public TV
34 minutes ago
Bengaluru Bharathinagar Death
Bengaluru City

Bengaluru | ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?