ರಾಜಸ್ಥಾನದಲ್ಲಿ ಒಂದಾದ ಡಿಕೆಶಿ-ಎಂಬಿಪಾ

1 Min Read

ಬೆಂಗಳೂರು: ಕಾಂಗ್ರೆಸ್‌ ನಾಯಕರ ಜಗಳ ಬೀದಿಗೆ ಬಂದಿದ್ದೆ ತಡ ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಮಾಜಿ ಸಚಿವ ಎಂಬಿ ಪಾಟೀಲ್‌ ಒಂದಾಗಿದ್ದಾರೆ.

ರಾಜಸ್ಥಾನ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಚಿಂಥನ ಮಂಥನ ಸಭೆಯಲ್ಲಿ ಇಬ್ಬರು ನಾಯಕರು ಒಟ್ಟಿಗೆ ಇರುವ ಫೋಟೋ ಲಭ್ಯವಾಗಿದೆ. ಇಬ್ಬರು ಯಾವುದೋ ವಿಷಯಕ್ಕೆ ಮಾತನಾಡಿಕೊಂಡು ಹೆಗಲ ಮೇಲೆ ಕೈ ಹಾಕಿಕೊಂಡು ಆತ್ಮೀಯವಾಗಿರುವ ಫೋಟೋ ಸಿಕ್ಕಿದೆ. ಇದನ್ನೂ ಓದಿ: ಕಾಳಿ ಸ್ವಾಮಿಗೆ ಮಸಿ ಬಳೆದಿದ್ದು ಅಕ್ಷಮ್ಯ ಅಪರಾಧ: ಮುತಾಲಿಕ್

ರಮ್ಯಾ ಟ್ವೀಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಯಾರು ಪ್ರತಿಕ್ರಿಯೆ ನೀಡದಂತೆ ಹೈಕಮಾಂಡ್‌ ಕೈ ನಾಯಕರಿಗೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ನಾಯಕರು ಭಿನ್ನಮತ ಶಮನ ಮಾಡುವ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *