ಬೆಂಗಳೂರು: ಐಶ್ವರ್ಯ ಗೌಡ (Aishwarya Gowda) ಪ್ರಕರಣದಲ್ಲಿ ಇಡಿ ಸಮನ್ಸ್ ಬಂದಿದ್ದು, ಗುರುವಾರ ವಿಚಾರಣೆಗೆ ಬರಲು ಹೇಳಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ (DK Suresh) ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಮಧ್ಯಾಹ್ನ 12:30ಕ್ಕೆ ಇಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ. ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ ಅವರು ಸಮನ್ಸ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಶ್ವರ್ಯಗೌಡ ವಂಚನೆ ಕೇಸ್ – ಡಿ.ಕೆ.ಸುರೇಶ್ಗೆ ED ಸಮನ್ಸ್
ಸಮನ್ಸ್ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು. ಗುರುವಾರ ವಿಚಾರಣೆಗೆ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಖಿಕವಾಗಿ ತಿಳಿಸಿದ್ದೇನೆ. ಈಗ ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದ್ವೇಷ ಭಾಷಣದ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ – ಗೃಹ ಸಚಿವರಿಗೆ ಪತ್ರ
ನಾನು ಯಾವುದೇ ಅಕೌಂಟ್ ಟ್ರಾನ್ಸಾಕ್ಷನ್ ನಡೆಸಿರಲಿಲ್ಲ. ಅವರು ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅನ್ನೋ ಹೆಸರಲ್ಲಿ ಹೀಗೆಲ್ಲ ಮಾಡಿದ್ದಾರೆ ಎಂದು ಗೊತ್ತಾದಾಗ ನಾನೇ ದೂರು ಕೊಟ್ಟಿದ್ದೇನೆ. ಇಡಿಯವರು 7 ರಿಂದ 8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಅದನ್ನ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.