Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನುಷ್ಯತ್ವ ಇರೋರು ಜನ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ – ಫೇಸ್‌ಬುಕ್‌ನಲ್ಲಿ ರೋಹಿಣಿ ವಿರುದ್ಧ ರೂಪಾ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮನುಷ್ಯತ್ವ ಇರೋರು ಜನ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ – ಫೇಸ್‌ಬುಕ್‌ನಲ್ಲಿ ರೋಹಿಣಿ ವಿರುದ್ಧ ರೂಪಾ ಕಿಡಿ

Bengaluru City

ಮನುಷ್ಯತ್ವ ಇರೋರು ಜನ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ – ಫೇಸ್‌ಬುಕ್‌ನಲ್ಲಿ ರೋಹಿಣಿ ವಿರುದ್ಧ ರೂಪಾ ಕಿಡಿ

Public TV
Last updated: February 19, 2023 2:28 pm
Public TV
Share
9 Min Read
D Roopa Rohini sindhuri
SHARE

– ಅಧಿಕಾರಿಯಾಗಿ ರಾಜಕಾರಣಿಗಳ ಜೊತೆ ಸಂಧಾನ ಏಕೆ?
– ಕನ್ನಡದ ಹುಡುಗಿ ಶಿಲ್ಪಾನಾಗ್ (ಐಎಎಸ್) ಜೊತೆ ಜಗಳ ಯಾಕೆ?
– ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿ ಹೋಗಿದ್ದು ಹೇಗೆ?

ಮೈಸೂರು/ಬೆಂಗಳೂರು: ಐಎಎಸ್ ವರ್ಸಸ್ ಐಪಿಎಸ್ ಅಧಿಕಾರಿಗಳ ನಡುವಿನ ಕಿತ್ತಾಟ ತಾರಕಕ್ಕೇರಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಐಜಿಪಿ ಡಿ. ರೂಪಾ (D Roopa) ಸರಣಿ ಆರೋಪಗಳನ್ನ ಮಾಡಿದ್ದಾರೆ.

Contents
  • – ಅಧಿಕಾರಿಯಾಗಿ ರಾಜಕಾರಣಿಗಳ ಜೊತೆ ಸಂಧಾನ ಏಕೆ? – ಕನ್ನಡದ ಹುಡುಗಿ ಶಿಲ್ಪಾನಾಗ್ (ಐಎಎಸ್) ಜೊತೆ ಜಗಳ ಯಾಕೆ? – ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿ ಹೋಗಿದ್ದು ಹೇಗೆ?
  • LIVE TV

`ಮಾಜಿ ಸಚಿವ ಸಾ.ರಾ ಮಹೇಶ್ (Sa Ra Mahesh) ಜೊತೆ ರೋಹಿಣಿ ಸಿಂಧೂರಿ ಸಂಧಾನ’ ಶೀರ್ಷಿಕೆಯ ಯುಟ್ಯೂಬ್ ವೀಡಿಯೋ ಲಿಂಕ್‌ವೊಂದನ್ನು ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿರುವ ರೂಪಾ ಅವರು 19 ಸರಣಿ ಆರೋಪಗಳನ್ನ ಮಾಡಿದ್ದಾರೆ. ರೋಹಿಣಿ ಮಾಡಿರೊ ಅಕ್ರಮ ಕಾರ್ಯಕ್ಕೆ ನನ್ನ ಬಳಿ ಸಾಕ್ಷಿಗಳು ಇವೆ. ಅನೇಕ ಹಿರಿಯ ಐಎಎಸ್ ಅಧಿಕಾರಿಗಳಿಗೆ ಈಕೆಯ ಆಕ್ಷೇಪಾರ್ಹ ಚಿತ್ರ ಕಳಿಸಿದ್ದಾರೆ. ಈಗಲೂ ನನ್ನ ಬಳಿ ಆ ಫೋಟೊಗಳಿವೆ. ಚಾಮರಾಜನಗರಲ್ಲಿ ಆಕ್ಸಿಜನ್ ದುರಂತದಿಂದ 24 ಜನ ಸತ್ತಾಗ ಈಕೆಯ ಮೇಲೆ ತನಿಖೆ ನಡೆಸದೆ ಪಾರಾದ್ರು. ಕನ್ನಡದ ಹುಡುಗಿ ಐಎಎಸ್ ಶಿಲ್ಪಾನಾಗ್ ವಿರುದ್ಧ ಜಗಳ, ರಂಪ ಏತಕ್ಕೆ ಮಾಡಿದ್ರು? ಅಧಿಕಾರಿಯಾಗಿ ರಾಜಕಾರಣಿಗಳ ಜೊತೆ ಸಂಧಾನ ಏಕೆ ಎಂದೆಲ್ಲಾ ಪ್ರಶ್ನಿಸಿದ್ದಾರೆ.

ಅಲ್ಲದೇ ಕೋವಿಡ್ ನಿಂದ ಜನ ಸಾಯ್ತಿದ್ರೆ ಮಾನವೀಯತೆ ಇಲ್ಲದೇ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿದ್ದು ಸಾಬೀತಾಗಿದೆ. ಮನುಷ್ಯತ್ವ ಇರೋರು ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಾರ್ಚ್‌ನಲ್ಲಿ ದಶಪಥ ರಸ್ತೆ ಲೋಕಾರ್ಪಣೆ, 250 ರೂ. ಟೋಲ್ ನಿಗದಿ ಸಾಧ್ಯತೆ: ಪ್ರತಾಪ್ ಸಿಂಹ

Sa Ra Mahesh

ಫೇಸ್‌ಬುಕ್ ಪುಟದಲ್ಲಿ ರೂಪಾ ಆರೋಪಗಳೇನು?
ಇಂದಿನ ಸುದ್ದಿ, ಎಲ್ಲಾ ಕಡೆ viral ಆಗಿರೋದು, ರೋಹಿಣಿ ಸಿಂಧೂರಿ , ಸಾ.ರಾ. ಮಹೇಶ್, ಮಾನ್ಯ ಎಂಎಲ್ಎ ಅವರ ಬಳಿ ಸಂಧಾನಕ್ಕೆ ಹೋಗಿದ್ದರು ಅಂತ. ಸಂಧಾನಕ್ಕೆ ಹೋಗುವುದು ಅಂದರೆ ಅರ್ಥ ಏನು? ಯಾವ ಐಎಎಸ್ ಅಧಿಕಾರಿ ಕೂಡ ಎಂಎಲ್ಎ ಅಥವಾ ರಾಜಕೀಯ ವ್ಯಕ್ತಿಗಳ ಜೊತೆ, ತಾವು ನಿರ್ವಹಿಸಿದ ಕರ್ತವ್ಯ ನಿಮಿತ್ತ ಸಂಧಾನಕ್ಕೆ ಹೋಗಿದ್ದು ನಾನು ಇದೇ ಮೊದಲು ಕೇಳಿದ್ದು. ಹಾಗಾದರೆ, ರೋಹಿಣಿ ಸಿಂಧೂರಿ ಸಂಧಾನಕ್ಕೆ ಹೋಗಿದ್ದು ಯಾಕೆ? ಆಕೆ ಏನನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ? ತಮ್ಮ ಕರ್ತವ್ಯ ಲೋಪದ ಬಗ್ಗೆಯೋ, ತಮ್ಮ ಭ್ರಷ್ಟಾಚಾರ ಬಗ್ಗೆಯೋ ಏನು?

1. ಡಿಕೆ Ravi ias, ಸಂಭಾವಿತ ವ್ಯಕ್ತಿ. ಸಿಬಿಐ ರಿಪೋರ್ಟ್ ನಲ್ಲಿ ಅವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ limit cross ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.

2. ಮುಂದೆ ಸಿಇಒ ಮಂಡ್ಯ ಆದಾಗ ಈಕೆ ಕಟ್ಟಿಸಿದ toilets ಗಿಂತ ಹೆಚ್ಚು ತೋರಿಸಿ figures fudge ಮಾಡಿ ಕೇಂದ್ರ ಸರ್ಕಾರದ ಪ್ರಶಸ್ತಿ ತೆಗೆದುಕೊಂಡರು ಎಂಬ ಆರೋಪ ಕೇಳಿ ಬಂತು. ಅದರ ತನಿಖೆಯೇ ಆಗಲಿಲ್ಲ. ಇದನ್ನೂ ಓದಿ: ಸಿದ್ದು ತವರಲ್ಲಿ ಆಪರೇಷನ್ ಕಾಂಗ್ರೆಸ್- ಜೆಡಿಎಸ್, ಬಿಜೆಪಿ ಮುಖಂಡರ ನಿದ್ದೆಗೆಡಿಸಿದ ಡಿಕೆಶಿ ತಂತ್ರ

Shilpa Nag

3. ಚಾಮರಾಜನಗರದಲ್ಲಿ 24 ಜನರು Oxygen ಇಲ್ಲದೇ ಸತ್ತಾಗ, ಆಪಾದನೆಗಳು ಇವರ ಮೇಲೇ ನೇರವಾಗಿ ಬಂತು. ಅದರಿಂದ ಹೇಗೋ ಪಾರಾದರು.

4. ಕನ್ನಡದ ಹುಡುಗಿ ಶಿಲ್ಪಾ ನಾಗ್ ಐಎಎಸ್. ಅವರ ಜೊತೆ ಜಗಳ, ರಂಪ. ಏತಕ್ಕಾಗಿ? ಅಲ್ಲಿ ಯಾವುದೇ ಮೌಲ್ಯಾಧಾರಿತ ವಸ್ತು ವಿಷಯ ಇರಲಿಲ್ಲ. ಕೋಳಿ ಜಗಳ. ಶಿಲ್ಪಾ ಗೆ ಹೆಚ್ಚು ಕೆಲಸ ಮಾಡಿದ್ದು, ಹೆಚ್ಚು ಅವರ ಬಗ್ಗೆ ಪಾಸಿಟಿವ್ ಆಗಿ ಬರೆಯಲಾಯಿತು. ಅದನ್ನು ಸಹಿಸಿಕೊಳ್ಳಲಾಗದೆ ಶಿಲ್ಪಾ ಗೆ harrassment ಮಾಡಿದರು ಎಂದು ಕೆಲವರು ಹೇಳಿದರು. ಕಡೆಗೆ ಮೈಸೂರಲ್ಲಿ ಗೌಡ, journalists Shilpa nag ಅವರಿಗೆ ಜಾತಿ ಬೆಂಬಲ ನೀಡುತ್ತಿದ್ದಾರೆ ಎಂಬ ಮಟ್ಟಿಗೆ ಸ್ವತಃ ಇಲ್ಲದ ಜಾತೀಯತೆ ಮೈಸೂರಿನ ಜರ್ನಲಿಸ್ಟ್‌ಗಳಲ್ಲಿ ಬಿತ್ತಿದರು ಈಕೆ ಎಂದು ಅನೇಕರು ಹೇಳುತ್ತಾರೆ.

5. ಹರ್ಷ ಗುಪ್ತ ಐಎಎಸ್ ಅತ್ಯಂತ ಪ್ರಾಮಾಣಿಕ ಅಧಿಕಾರಿ. ಅವರ ಜೊತೆ ಜಗಳ. ಎಲ್ಲಾ ಐಎಎಸ್ ಅಧಿಕಾರಿಗಳಿಗೆ ಈ ವಿಷಯ ಗೊತ್ತಿದೆ.

Sa Ra Mahesh 2

6. ಮಣಿವಣ್ಣನ್ ಐಎಎಸ್ ಜೊತೆ ಲೇಬರ್/ ಕಾರ್ಮಿಕ ಇಲಾಖೆಯಲ್ಲಿ ಇದ್ದಾಗ ಜಗಳ ಮಾಡಿದ್ದು ಜಗಜನಿತ. ಮಣಿವಣ್ಣನ್ ಒಂದು ರೀತಿ ಅಜಾತಶತ್ರು. ಅಂಥದರಲ್ಲಿ…ಅವರ ಜೊತೆ ಜಗಳ.

7. ಡಿಕೆ ರವಿ ತೀರಿದ ಕೆಲ ತಿಂಗಳು ಮುಂಚೆ ಕನ್ನಡದ ಹುಡುಗ, N ಹರೀಶ್ ಐಪಿಎಸ್, ಈಕೆಯ batchmate. ಮದ್ವೆ ಆಗಿರಲಿಲ್ಲ. ಆತ ಈಕೆಗೆ ಕಾದು ಕಾದು ಆತ ಆತ್ಮಹತ್ಯೆ ಮಾಡಿಕೊಂಡದ್ದು ಎಂದು ಹಲವರು ಹೇಳಿದರೂ ನಾನು ಅದನ್ನು ನಂಬಲಿಲ್ಲ, ಈಗೂ ನಂಬಿಲ್ಲ.

8. ಸಾ.ರಾ.mahesh, ಎಂಎಲ್ಎ ಅವರ ಮೇಲೆ ಅನೇಕ ಆಪಾದನೆಗಳನ್ನು ಮಾಡಿದ ಈಕೆ ಒಂದನ್ನೂ prove ಮಾಡಲಿಲ್ಲ. ಅದಕ್ಕೇ ಸಂಧಾನಕ್ಕೆ ಹೋದರಾ?

9. ಮೈಸೂರು ಎಂಪಿ ಪ್ರತಾಪ್ ಸಿಂಹ ಮೇಲೆ ಕೂಡ ಅನೇಕರ ಬಳಿ ಈಕೆ prove ಮಾಡಲಾರದ allegations ಮಾಡಿದರು. ಅಂದರೆ, ಪ್ರತಾಪ್ ಸಿಂಹ ಅವರು private clinics ಗೆ Oxygen ಕೇಳುತ್ತಾ ತಮ್ಮ ಸ್ವಂತ ಲಾಭಕ್ಕೆ ನಿಂತಿದ್ದಾರೆ ಎಂಬ ನಿರಾಧಾರ ಆರೋಪ ಮಾಡಿದರು. ನಿಜ ಇದ್ದಿದ್ದೇ ಆದರೆ ಅದನ್ನು prove ಯಾಕೆ ಮಾಡಲಿಲ್ಲ?

Roopa

10. ಹಾಸನದಲ್ಲಿ ತನ್ನನ್ನು ಒಂದು ವರ್ಷದ ಒಳಗೆ ಎತ್ತಂಗಡಿ ಮಾಡಿದ ಸರ್ಕಾರದ ವಿರುದ್ಧ CAT/ Central administrative tribunal, ಇಲ್ಲಿ ದಾವೆ ಹೂಡಿದರು. ಆ ದಾವೆಗೆ application ಬರೆದು ಕೊಟ್ಟಿದ್ದೇ ನನ್ನ ಪತಿ, Munish moudgil ias. ನನ್ನೆದುರಿಗೆ ಬರೆದು ಆಕೆಗೆ, ಆಕೆಯ ತಂದೆಗೆ, ಲಾಯರ್ ಗೆ ಕಳಿಸಿದ್ದರು. ಆದರೆ ಈಕೆ, ಮೈಸೂರು ಡಿಸಿ ಆಗಿ ಹೋದದ್ದು ಹೇಗೆ? ತನಗಿಂತ ಕೇವಲ 29 ದಿನ ಮುಂಚೆ ಮೈಸೂರಿಗೆ ಡಿಸಿ ಎಂದು transfer ಆಗಿದ್ದ ಕನ್ನಡ ಹುಡುಗ ಶರತ್ ಅವರನ್ನು ಒಕ್ಕಲೆಬ್ಬಿಸಿದ್ದು ನ್ಯಾಯವೇ? ತನ್ನಂತೆ ಪರರು ಎಂಬ ಭಾವನೆ ಇಲ್ಲವೇಕೆ? 29 ದಿನದಲ್ಲಿ ಯಾವುದೇ ಕಳಂಕ, ಆರೋಪ ಇಲ್ಲದ ಶರತ್ ರನ್ನು replace ಮಾಡಿದ್ದು ಯಾವ high level influence ನಿಂದಾ?

11. Dr Ravishankar IAS ಈಕೆಯ ಮೇಲೆ ಪ್ರಿಲಿಮಿನರಿ inquiry ಯಲ್ಲಿ ತಪ್ಪುಮಾಡಿರುವುದು ಸಾಬೀತಾಗಿದೆ. ಮೈಸೂರಿನ ಡಿಸಿ ಮನೆ, ಹೆರಿಟೇಜ್ building ಅಂತಾ ಇದ್ದರೂ ಅಲ್ಲಿ ಟೈಲ್ಸ್ ಹಾಕಿದ್ದು, ಸ್ವಿಮ್ಮಿಂಗ್ ಪೂಲ್ ಮಾಡಿದ್ದು. ಮನುಷ್ಯತ್ವ ಇರೋರು covid ಸಮಯದಲ್ಲಿ ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರ? John was fiddling when Rome was burning ಅಂದ ಹಾಗೆ. Marie Antoinette ಎಂಬ ರಾಣಿ , ಜನರು bread ಇಲ್ಲದೆ ಸಾಯ್ತಿದ್ದಾರೆ ಅಂತ ಕೇಳಿಸಿಕೊಂಡಾಗ, bread ಇಲ್ಲದೆ ಇದ್ದರೆ ಏನು, ಜನರು cake ತಿನ್ನಲಿ ಅಂದಳಂತೆ. ಆ ರಾಣಿಯ ನೆನಪಾಯ್ತು.

12. ಹಿಂದೆ ನನಗೆ ಒಬ್ಬರು whatsapp ಮೆಸೇಜ್ ಮಾಡಿ ತಾವು ಇವರ ಪರವಾಗಿ ನಡೆಸುವ social media handling agency ಒಂದರಲ್ಲಿ ಕೆಲಸ ಮಾಡಿದ್ದು, ಈಗ ಆ ಕೆಲಸ ಬಿಟ್ಟಿದ್ದೇನೆ ಎಂದು ಹೇಳುತ್ತಾ, ಹೇಗೆ ಅಲ್ಲಿ ಈಕೆಯ ಪರವಾಗಿ ಸುದ್ದಿ, photos ,videos create ಮಾಡುತ್ತಾರೆ, ಹೇಗೆ ಈಕೆಯ ವಿರುದ್ಧ ಇರುವವರ ಟ್ರೋಲ್ ಮಾಡುವ content ಹಾಗೂ ಹ್ಯಾಂಡಲ್ ಗಳು ತಯಾರಾಗುತ್ತವೆ ಎಂಬುದು ಹೇಳಿದ್ದರು. ನಾನು ಅದನ್ನು ಫೇಸ್‌ಬುಕ್‌ನಲ್ಲಿಯೂ ಹಾಕಿದ್ದೆ.

Rohini sindhuri

13. ಈಕೆಯ ಮೇಲೆ ಅಗ್ಗದ ಬ್ಯಾಗ್ ಗಳನ್ನೂ ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಿರುವ ಕಂಪ್ಲೇಂಟ್‌ ಲೋಕಾಯುಕ್ತದಲ್ಲಿ register ಆಗಿದ್ದು, ಅದರ ತನಿಖೆ ಕೈಗೆತ್ತಿಕೊಳ್ಳಲು ಲೋಕಾಯುಕ್ತ ಈಗಾಗಲೇ ಸರ್ಕಾರಕ್ಕೆ ಬರೆದಿದೆ. ಆದರೂ ಸರ್ಕಾರ ಮಟ್ಟದಲ್ಲಿ ಕಾರಣ ಕೊಡದೆ ಆಕೆಯನ್ನು ತನಿಖೆಗೆ ಒಳಪಡಿಸಲು ಅನುಮತಿ reject/ ನಿರಾಕರಣೆ ಮಾಡಲಾಗಿದೆ. ಅದರ copy ನನ್ನ ಬಳಿ ಇದೆ. ಸಾಮಾನ್ಯವಾಗಿ ಅಧಿಕಾರಿಗಳಿಗೆ ಈ ರೀತಿಯ support ಇರುತ್ತದೆಯೇ?

14. ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ, ಒಂದಲ್ಲ, ಎರಡಲ್ಲ, ಅನೇಕರಿಗೆ ತನ್ನ not so decent ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಪಿಕ್ಸ್ ಗಳು ನನಗೆ ಸಿಕ್ಕಿವೆ. ಇದು private vishaya ಆಗುವುದಿಲ್ಲ. All India service conduct rules ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಪಿಕ್ಸ್ , ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾಸತ್ಯತೆ ಹೊರ ಬರಬೇಕಿದೆ.

15. ಮೊನ್ನೆ ಇವರ ಬಾವ ಮಧುಸೂಧನ್ ರೆಡ್ಡಿ ಅವರು, lucky Ali ಎಂಬ ಗಾಯಕರ ಜಾಗಕ್ಕೆ 20 – 30 ಜನ ಕರೆದುಕೊಂಡು ಹೋಗಿ ರೌಡಿಸಂ ಮಾಡಿರುವ ವಿಷಯ ಮಾಧ್ಯಮಗಳಲ್ಲಿ ಬಂತು. ಈಕೆಯು ತನ್ನ ಐಎಎಸ್ ಪ್ರಭಾವ ಬಳಸಿ ದುರುಪಯೋಗ ಮಾಡಿಕೊಂಡು ಇರುವುದಾಗಿ lucky Ali ಆರೋಪ ಮಾಡಿದರು. ವ್ಯಾಜ್ಯದ ಜಮೀನಿಗೆ 20-30 ಜನ ಕರೆದುಕೊಂಡು ಹೋಗಿ ಕಾನೂನು ಕೈಗೆ ತೆಗೆದುಕೊಳ್ಳಬಹುದು? ಈ ರೀತಿಯ ಬಂಡ ಧೈರ್ಯ ಎಲ್ಲಿಂದ ಬರುತ್ತದೆ? ಐಎಎಸ್ ಅಧಿಕಾರದಿಂದ?

16. ಇವರ ಗಂಡ , ಹಾಗೂ ಇವರ ಮಾವನವರು ( ಈಗ ತೀರಿ ಹೋಗಿದ್ದಾರಂತೆ) real estate ಬ್ಯುಸಿನೆಸ್ ನಡೆಸುತ್ತಾರೆ. ಅನೇಕ ಬಾರಿ ಸರ್ವೇ ಹಾಗೂ ಭೂ ದಾಖಲೆ ಕಚೇರಿಯ ಮೂಲಕ ತನ್ನ family business ಗೆ ಅಗತ್ಯ ಇರುವ ಅನೇಕ land related ಮಾಹಿತಿ , ಅಂದರೆ, ಒಂದು ಭೂಮಿಯ ಫೋಡಿ, ಇನ್ನೊಂದರ ಬಗ್ಗೆ ಅದು ವ್ಯಾಜ್ಯ ಇರುವ ಭೂಮಿಯೇ ಅಥವಾ ಖರೀದಿಸಲು ಯೋಗ್ಯವೇ ಎಂಬಂತಹ ಮಾಹಿತಿಗಳನ್ನು ತಮ್ಮ ಐಎಎಸ್ ಸ್ಥಾನ ಅಧಿಕಾರದಿಂದ ಪಡೆದು ಕೊಂಡಿರುವ ಮಾಹಿತಿ ದಾಖಲೆ ಸಮೇತ ಇದ್ದು, ಇದರ ಮೇಲೆ ಕ್ರಮ ಆಗುತ್ತದೆಯೇ? ನೋಡಬೇಕು.

17. ಅನೇಕ ಬಾರಿ ಸರ್ಕಾರ ಅಧಿಕಾರಿಗಳನ್ನು transfer ಮಾಡಿದಾಗ ಆ ಜಾಗದಲ್ಲಿ ಇದ್ದವರು ಕ್ಯಾಟ್/ಕೋರ್ಟ್ ಗೆ ಹೋಗುವುದು ಸಹಜ. ನಾನು 3 ವರ್ಷ ದೂರದ ಯಾದಗಿರಿಯಲ್ಲಿ ಕೆಲಸ ಮಾಡಿ ( senior most sp in the state, 2013 ರಲ್ಲೀ ನಾನು) ಬೆಂಗಳೂರಿಗೆ ವರ್ಗವಾದಾಗ, ಆ ಜಾಗದಲ್ಲಿ ಇದ್ದ ಅಧಿಕಾರಿ, ಪವಾರ್, ನನ್ನ ವರ್ಗಾವಣೆ ಪ್ರಶ್ನಿಸಿ ಕ್ಯಾಟ್ ಗೆ ಹೋದರು. ಆದರೆ, ರೋಹಿಣಿ ಸಿಂಧೂರಿಗೆ ಸಾಕ್ಷಾತ್ ಅಡ್ವೊಕೇಟ್ ಜನರಲ್ ಅವರೇ ಬಂದು ವಾದ ಮಾಡಿದರಲ್ಲ, ಮೈಸೂರು ಡಿಸಿ ವರ್ಗಾವಣೆ ವಿಷಯದಲ್ಲಿ, ಆ ಸೌಲಭ್ಯ ನನಗೇಕೆ ಸಿಗಲಿಲ್ಲ? ನನ್ನಂತಹ ಕನ್ನಡಿಗ ಅಧಿಕಾರಿಗಳು, ಹೇಗೆ ನಡೆಸಿಕೊಂಡರೂ ಸುಮ್ಮನೆ ಇರ್ತಾರೆ ಅಂತಲೇ? ಸ್ವತಃ ಅಡ್ವೊಕೇಟ್ ಜನರಲ್ ಹಾಜರಾಗಿ ವಾದ ಮಾಡಿದ್ದು ಈಕೆಗಲ್ಲದೇ ಮತ್ಯಾವ ಅಧಿಕಾರಿಗೂ ಈ ಸೌಲಭ್ಯ ಸಿಕ್ಕಿಲ್ಲ. ಯಾಕೆ ಈ ಮಲತಾಯಿ ಧೋರಣೆ?

18. ಈಕೆ ಪ್ರೊಬೇಷನರಿ ಅಂತ ಇದ್ದಾಗ, ಅಲ್ಲಿಯ ಡಿಸಿ ಹಾಗೂ ಅವರ ಪತ್ನಿ ನೆರೆಯ ಜಿಲ್ಲೆಯ ಡಿಸಿ, ಇವರಿಬ್ಬರ ಸಂಸಾರದಲ್ಲಿ ಹುಳಿ ಬಿದ್ದು ಅವರು ಬೇರ್ಪಟ್ಟಿದ್ದಾರೀಗ ಹಾಗೂ ಇದು ಈಕೆಯ ದೆಸೆಯಿಂದ ಎಂಬ ಮಾತು ಅನೇಕರ ಬಾಯಲ್ಲಿ ಕೇಳಿದ್ದೇನೆ.

19. ಜಾಲಹಳ್ಳಿ ಯಲ್ಲಿ ಈಕೆಯ( ಪತಿಯದ್ದು ಇದ್ದರೂ ಈಕೆಯದೂ ಆಗುತ್ತದೆ) ದೊಡ್ಡ ಮನೆ ಒಂದು ಕಟ್ಟುತ್ತಿದ್ದು, ಐಎಎಸ್ ಅಧಿಕಾರಿ ಸಲ್ಲಿಸಬೇಕಾದ immovable property returns ನಲ್ಲಿ ಈ ಮನೆಯ ಉಲ್ಲೇಖ ಇರದೆ, ಬೇರೆಲ್ಲಾ ಲಂಗು ಲೊಟ್ಟು property ಬಗ್ಗೆ ವರದಿ ಕೊಟ್ಟಿದ್ದಾರೆ. ಆ ಮನೆಗೆ ಕೋಟಿಗಟ್ಟಲೆ ಇಟಲಿ ಫರ್ನೀಚರ್, 26 ಲಕ್ಷದ ಜರ್ಮನ್ appliances ( ಅದನ್ನು duty free ಮಾಡಿಸಿಕೊಳ್ಳುವ ಬಗ್ಗೆ ಚರ್ಚೆ ಇರುವ, 6 lakhs ಕೇವಲ ಬಾಗಿಲಿನ hinges ಗೆ ಖರ್ಚು ಮಾಡಿರುವ ಬಗ್ಗೆ ಈಕೆ ಮಾಡಿರುವ ಚಾಟ್ ಗಳ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ. ಇದರ ಮೇಲೆ ಕೂಲಂಕಷ ತನಿಖೆ ಆಗುವ ಹಾಗೆ ನೋಡಬೇಕಿದೆ. ಇಷ್ಟೆಲ್ಲಾ ಆದ್ರೂ, ಯಾರು ಪ್ರತಿ ಬಾರಿ ಈಕೆಯನ್ನು ತನಿಖೆಗೂ ಒಳಪಡಿಸದೇ ಬಚಾವ್ ಮಾಡುತ್ತಾ ಇರುವುದು. ಈಕೆ ಯಾವುದೇ ಶಿಕ್ಷೆಯಿಲ್ಲದೆ ಪ್ರತಿ ಬಾರಿ ಬಚಾವ್ ಆಗಿರುವುದೇ? ಅಥವಾ ಕಿಂದರಿ ಜೋಗಿ ಮಾಡಿದ ರೀತಿಯಲ್ಲಿ ಸರ್ಕಾರದಲ್ಲಿ ಇರುವ ಪ್ರಭಾವಿಗಳು ಕಿಂದರಿ ಜೋಗಿಯ ಪಾಶಕ್ಕೆ ಸಿಲುಕಿದರೆ?

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengaluruD roopamysuruRohini SindhuriSa Ra maheshShilpa Nagಐಎಎಸ್ಕೊರೊನಾಡಿ ರೂಪಾಬೆಂಗಳೂರುಮೈಸೂರುರೋಹಿಣಿ ಸಿಂಧೂರಿಶಿಲ್ಪಾನಾಗ್ಸಾ ರಾ ಮಹೇಶ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
3 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
10 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
15 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?