ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳ ಮೂಲಕ ವಿಶಿಷ್ಟ ಕಥಾನಕಗಳ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ನಿರ್ದೇಶಕ ಹೇಮಂತ್ ಎಂ ರಾವ್ (Hemanth M Rao), ಈಗ ತಮ್ಮ ಮುಂದಿನ ಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ (666 Operation Dream Theatre) ಮೂಲಕ ಮತ್ತೊಮ್ಮೆ ನಿರ್ದೇಶನದ ಹಾದಿಯಲ್ಲಿ.
ಧನಂಜಯ ಕೆ.ಎ (Daali Dhananjaya) ಅವರ ಅಭಿನಯದಲ್ಲಿ ಮೂಡಿಬರಲಿರುವ ಈ ಚಿತ್ರವು, 70ರ ದಶಕದ ಶೈಲಿ ಚಿತ್ರದ ವೈಶಿಷ್ಟ್ಯತೆಯಾಗಿದೆ, ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್ ಅವರ ಶಕ್ತಿಯುತ ಪಾತ್ರ, ಪ್ರೇಕ್ಷಕರ ಮನಸ್ಸಿನಲ್ಲಿ ಸಂಚಲನ ಮೂಡಿಸಲಿದೆ. ಇದನ್ನೂ ಓದಿ: Exclusive | ಲಕ್ಷ ಲಕ್ಷ ಹಣ ವಂಚನೆ ಆರೋಪ – ನನ್ನ ಹೆಸರು ಹಾಳು ಮಾಡುವ ಉದ್ದೇಶ ಬಿಟ್ಟು ಬೇರೆನಿಲ್ಲ: ಗೋಲ್ಡ್ ಸುರೇಶ್
ಈ ಚಿತ್ರವನ್ನು ಡಾ. ವೈಶಾಖ್ ಜೆ.ಗೌಡ ಅವರು ವೈಶಾಖ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡದಲ್ಲಿ ಚರಣ್ ರಾಜ್ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಮತ್ತು ವಿಶ್ವಾಸ್ ಕಾಶ್ಯಪ್ ಕಲಾ ನಿರ್ದೇಶನವನ್ನು ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಹೊಸ ಸಿನಿಮಾದ ರಗಡ್ ಲುಕ್ನಲ್ಲಿ ಕಾಣಿಸಿಕೊಂಡ ಅಜಯ್ ರಾವ್