ಇವತ್ತಿಂದ ಈಕೆ ನನ್ನ ಅರ್ಧಾಂಗಿ – ಇದು ಸತ್ಯ..ಸತ್ಯ ಮಹಿಳೆಗೆ ಮದುವೆ ಅಭಯಕೊಟ್ಟ ದೈವನರ್ತಕ

Public TV
2 Min Read
KARWAR Daiva Narthaka 1

ಕಾರವಾರ: ಅಂಕೋಲಕ್ಕೆ ತನ್ನ ವೈಯಕ್ತಿಕ ಸಮಸ್ಯೆ ನಿವಾರಣೆಗೆ ಕಾಲಭೈರವ ದೇವರ ಬಳಿ ಬಂದಿದ್ದ ಬೆಳಗಾವಿ (Belagavi) ಮೂಲದ ಮಹಿಳೆಗೆ (Women) ಮದುವೆಯಾಗುವುದಾಗಿ ದೈವ ನರ್ತಕ (Daiva Narthaka) ಅಭಯವಿತ್ತ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ (Uttara Kannada Ankola) ಅಂಬಾರಕೊಡ್ಲೆನಲ್ಲಿ ನಡೆದಿದೆ.

KARWAR Daiva Narthaka 2

ಏನಿದು ಘಟನೆ?
ಬೆಳಗಾವಿಯ ಮಹಿಳೆಯೊಬ್ಬರು ಕೌಟುಂಬಿಕ ಸಮಸ್ಯೆಯನ್ನು ಹೇಳಿಕೊಂಡು ಅಂಕೋಲದಲ್ಲಿರುವ ಕಾಲಭೈರವ ದೇವರ ಸನ್ನಿದಾನಕ್ಕೆ ಬಂದಿದ್ದಾರೆ. ಬಂದು ತಮ್ಮ ಸಮಸ್ಯೆಯನ್ನು ದೈವದ ನರ್ತಕನ ಬಳಿ ಹೇಳಿಕೊಂಡಿದ್ದಾರೆ. ಈ ವೇಳೆ ಅವನ ಅರ್ಧಾಂಗಿ ಅವನಿಗೆ ಕೈಕೊಟ್ಟು 10 ವರ್ಷವಾಯಿತು. ಆದ್ರೂ ಒಬ್ಬಂಟಿಯಾಗಿ ಈ ಸ್ಥಳದಲ್ಲಿ ಸಾಧನೆ ಮಾಡುತ್ತಿದ್ದಾನೆ. ಆದ್ರೆ ನಾನು ಮಹಾ ಕಾಳಿಯಾಗಿ, ದುರ್ಗಿಯಾಗಿ ಒಂದು ನಿರ್ಧಾರ ಮಾಡುತ್ತಿದ್ದೇನೆ. ಇದು ಸಂಪೂರ್ಣವಾಗಿ ಬಹಿರಂಗ ಪಡಿಸುತ್ತಿದ್ದೇನೆ. ಇವತ್ತಿನಿಂದ ಈ ಬಾಲಕಿ ಈ ಬಾಲಕನ ಅರ್ಧಾಂಗಿಯಾಗಿ ಸಂಪೂರ್ಣ ಅರ್ಧನಾರೇಶ್ವರಿಯಾಗಿ ಈ ಬಾಲಕನ ಹೃದಯದಲ್ಲಿ ಮನೆ ಮಾಡಿರುತ್ತಾಳೆ. ಇದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ಈ ಬಾಲಕಿಯೇ ಈ ಬಾಲಕನ ಮುಂದಿನ ಮಡದಿ. ಕೊನೆಯ ಉಸಿರು ಇರುವವರೆಗೆ ಶೀಲವಂತವಳಾಗಿ ಯಾವುದೇ ಹೀನವಾಗದ ರೀತಿಯಲ್ಲಿ ಮರ್ಯಾದೆ ಮುಖಾಂತರವಾಗಿ ಈ ಬಾಲಕನ ಒಟ್ಟಿಗೆ ಬೆಳೆಯುತ್ತಾಳೆ. ಇಂದು ಇಲ್ಲವೇ ನಾಳೆ ಧರ್ಮಸ್ಥಳ, ಮಂತ್ರಾಲಯ, ಈ ಮೂರು ಸ್ಥಳದಲ್ಲಿ ಒಂದು ಸ್ಥಳದಲ್ಲಿ ಈ ಬಾಲಕಿಗೆ ತಾಳಿ ಬೀಳುತ್ತದೆ ಎಂದು ನುಡಿದಿದ್ದಾನೆ. ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ಜ್ಯೂನಿಯರ್ ಆರ್ಟಿಸ್ಟ್ ಬಲಿ : ತಾಯಿಯ ಆರೋಪ

ಈ ದೈವನರ್ತಕನ ಅಭಯದ ಮಾತಿನ ವೀಡಿಯೋ ತುಣುಕು ಇದೀಗ ಎಲ್ಲೇಡೆ ವೈರಲ್ ಆಗುತ್ತಿದೆ. ಈ ನಡುವೆ ದೈವ ನರ್ತಕ ಪಾತ್ರಿಗೆ ಮದುವೆಯಾಗಿ ಹೆಂಡತಿ ಬಿಟ್ಟು ಹೋಗಿದ್ದಾಳೆ. ವಿವಾಹಿತ ಮಹಿಳೆಗೂ ಗಂಡ ಬಿಟ್ಟಿರುವ ಮಾಹಿತಿ ಈತನಿಗೆ ಮೊದಲೇ ತಿಳಿದಿತ್ತು. ಹಾಗಾಗಿ ಈತ ಮೋಸ ಮಾಡಲು ಮುಂದಾಗಿದ್ದಾನೆ ಎಂಬ ಆರೋಪಗಳು ಸ್ಥಳೀಯರಿಂದ ಕೇಳಿ ಬರುತ್ತಿದೆ. ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಪ್ರಾಂಶುಪಾಲನ ವಿರುದ್ಧ ರೇಪ್ ಕೇಸ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *