Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ಹೊಸ ಮಾರ್ಗಸೂಚಿಗಳು ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ಹೊಸ ಮಾರ್ಗಸೂಚಿಗಳು ಪ್ರಕಟ

Corona

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ಹೊಸ ಮಾರ್ಗಸೂಚಿಗಳು ಪ್ರಕಟ

Public TV
Last updated: September 1, 2021 11:01 pm
Public TV
Share
4 Min Read
Mangaluru 1
SHARE

ಮಂಗಳೂರು: ಸರ್ಕಾರದ ಆದೇಶ ಹಾಗೂ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಕೆಲವು ನಿರ್ಬಂಧಗಳನ್ನು ಜಾರಿ ಮಾಡಿದ್ದಾರೆ.

mangaluru mng dc medium

ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವಂತೆ ಚಾಲ್ತಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತವಾಗಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಪಾಸ್ ಎಂದು ಪರಿಗಣಿಸುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ

CORONA

ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳಿಗೆ ಮಾತ್ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ, ವಿವಾಹ ಅಥವಾ ಕೌಟುಂಬಿಕ ಕಾರ್ಯಗಳನ್ನು ಗರಿಷ್ಟ 50 ಜನರ ಪರಿಮಿತಿಗೊಳಪಟ್ಟು ಸ್ಥಳೀಯ ಆಡಳಿತದ ಪ್ರಾಧಿಕಾರಗಳಿಂದ ಪೂರ್ವಾನುಮತಿಯೊಂದಿಗೆ ಆಯೋಜಿಸಲು ಅನುಮತಿಸಿದೆ. ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಆದೇಶಿಸಲಾಗಿದೆ. ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ಎಲ್ಲಾ ವಿದ್ಯಾರ್ಥಿಗಳ 72 ಗಂಟೆಗಳಿಗಿಂತ ಮುಂಚಿತವಾಗಿ ಆರ್ ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶವಿರುತ್ತದೆ. ಈ ಮಾರ್ಗಸೂಚಿಯು ಕೇರಳದಿಂದ ಜಿಲ್ಲೆಗೆ ಉದ್ಯೋಗದ ಸಲುವಾಗಿ ಅಥವಾ ಭೇಟಿ ಕಾರಣಕ್ಕಾಗಿ ಆಗಮಿಸುವ ಪ್ರತಿಯೊಬ್ಬರಿಗೆ ಅನ್ವಯವಾಗಲಿದೆ, ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಸಂದರ್ಭದಲ್ಲಿ ಕಡ್ಡಾಯವಾಗಿ ಆರ್‍ ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸತಕ್ಕದ್ದು ಹಾಗೂ ತಮ್ಮ ಸಿಬ್ಬಂದಿ ಆರ್‍ ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರುವುದನ್ನು ಖಾತ್ರಿಪಡಿಸಿಕೊಳ್ಳುವ ಜವಬ್ದಾರಿಯು ಆಯಾ ಸಂಸ್ಥೆಗೆ ಸೇರಿರುತ್ತದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

Mangaluru Border 1

ರಾತ್ರಿ ಕರ್ಫ್ಯೂ ಮಾರ್ಗಸೂಚಿಗಳು
ಸಾರ್ವಜನಿಕರ ಸಂಚಾರವನ್ನು ಆ.31ರಿಂದ ಜಾರಿಯಾಗುವಂತೆ ಮುಂದಿನ ಆದೇಶದ ವರೆಗೆ ಪ್ರತಿ ದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಅತ್ಯಾವಶ್ಯಕ ಹಾಗೂ ತುರ್ತು ಸಂದರ್ಭಗಳನ್ನು ಹೊರತು ಪಡಿಸಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು ಮತ್ತು ಅವರ ಪರಿಚಾರಕರು ಅಥವಾ ವ್ಯಕ್ತಿಗಳಿಗೆ ಸಂಚರಿಸಲು ಅನುಮತಿ ಇದೆ. ರಾತ್ರಿ ವೇಳೆಯಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿರುವಂತಹ ಎಲ್ಲಾ ಕೈಗಾರಿಕೆಗಳು ಅಥವಾ ಕಂಪನಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ ಇರುತ್ತದೆ. ಅಂತಹ ಸಂಸ್ಥೆಗಳ ನೌಕರರ ಸಂಚಾರಕ್ಕೆ, ಅವರ ಸಂಬಂಧಪಟ್ಟ ಸಂಸ್ಥೆ, ಕಂಪನಿಯು ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿ ಪ್ರಯಾಣಿಸಲು ಅನುಮತಿಸಲಾಗಿದೆ. ಇದನ್ನೂ ಓದಿ: ಇನ್ಸ್‌ಪೆಕ್ಟರ್‌ ಮಗನ ಸೈಕಲ್ ಕದ್ದ ಗ್ಯಾಂಗ್‍- ಜನ್ಮ ಜಾಲಾಡಿದ ಪೊಲೀಸರು

Mangaluru Border 3

ದೂರವಾಣಿ ಸಂಪರ್ಕ ಮತ್ತು ಅಂತರ್ಜಾಲ ಸೇವೆ ಒದಗಿಸುವ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಅವರ ಸಂಬಂಧಪಟ್ಟ ಸಂಸ್ಥೆ, ಕಂಪನಿಯು ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿ ಪ್ರಯಾಣಿಸಲು ಅನುಮತಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳ ಕಂಪನಿಗಳು, ಸಂಸ್ಥೆಯ ಅತ್ಯಾವಶ್ಯಕ ಸಿಬ್ಬಂದಿ, ನೌಕರರು ಮಾತ್ರ ಕಚೇರಿಯಿಂದ ಕಾರ್ಯನಿರ್ವಹಿಸಬೇಕು, ಉಳಿದ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.

Mangaluru Fishing Harbor

ಔಷಧ ಮಳಿಗೆಗಳು ಸೇರಿದಂತೆ ವೈದ್ಯಕೀಯ, ತುರ್ತು ಮತ್ತು ಅತ್ಯಾವಶ್ಯಕ ಸೇವೆಗಳು ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ, ಉಳಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಖಾಲಿ ವಾಹನಗಳು ಸೇರಿದಂತೆ, ಟ್ರಕ್‍ಗಳು, ಸರಕು ಸಾಗಣೆ ವಾಹನಗಳು ಅಥವಾ ಯಾವುದೇ ಸರಕು ಸಾಗಣೆ ವಾಹನಗಳ ಮೂಲಕ ಎಲ್ಲಾ ಬಗೆಯ ಸರಕುಗಳನ್ನು ಸಾಗಿಸುವುದಕ್ಕೆ ಯಾವುದೇ ನಿಬರ್ಂಧವಿಲ್ಲ. ಇ-ವಾಣಿಜ್ಯ ಕಂಪನಿಗಳಿಂದ ಸರಕುಗಳ ಹೋಮ್ ಡೆಲಿವರಿಗೆ ಮತ್ತು ಅವುಗಳ ಕಾರ್ಯಾಚರಣೆಗಳಿಗೆ ಅನುಮತಿ ನೀಡಲಾಗಿದೆ. ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಲಾಗಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲು ವಿಮಾನ ನಿಲ್ದಾಣಗಳಿಗೆ, ಬಸ್ ಟರ್ಮಿನಲ್, ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಧೀಕೃತ ಪ್ರಯಾಣ ದಾಖಲೆ ಅಥವಾ ಟಿಕೆಟ್ ಅನ್ನು ಪ್ರದರ್ಶಿಸಿದ ನಂತರವೇ ಅಂತಹ ಸಂಚಾರಕ್ಕೆ ಅನುಮತಿ ನೀಡಲಾಗುವುದು.

ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿಗಳು:
ಅತ್ಯಾವಶ್ಯಕ ಮತ್ತು ತುರ್ತು ಕಾರ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ಸಂಜೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ತುರ್ತು, ಅತ್ಯವಶ್ಯಕ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು ಮತ್ತು ಅವುಗಳ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಅರ್ಧ ಗಂಟೆ ಥರ್ಮಾಕೋಲ್ ಸಹಾಯದಿಂದ ಈಜು – ಬದುಕುಳಿದ ಮೀನುಗಾರ

Mangaluru 2

ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು ಮತ್ತು ಪ್ರಾಣಿಗಳ ಮೇವನ್ನು ಮಾರಾಟ ಮಾಡುವ ಅಂಗಡಿಗಳು, ಬೀದಿ ಬದಿ ವ್ಯಾಪಾರಸ್ಥರು, ನ್ಯಾಯಬೆಲೆ ಅಂಗಡಿಗಳು, ಮದ್ಯದಂಗಡಿಗಳು ಮತ್ತು ಮಳಿಗೆಗಳು ಪಾರ್ಸೆಲ್ ಕೊಂಡು ಹೋಗಲು ಮಾತ್ರವೇ ಅವಕಾಶ ನೀಡಲಾಗಿದೆ. ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದು, ಈ ಅವಧಿಯಲ್ಲಿ ಎಲ್ಲಾ ಸಾಮಗ್ರಿಗಳನ್ನು ಹೋಮ್ ಡೆಲಿವೆರಿ ಮಾಡಬೇಕು. ಈ ಎಲ್ಲಾ ಕಾರ್ಯಾಚರಣೆಗಳು ಕೋವಿಡ್-19ರ ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್ ಮತ್ತು ಹೊಟೇಲ್‍ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿ ನೀಡಲು ಮಾತ್ರ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:CoronaCoronavirusCovid 19DCkarnatakaMangaluruPublic TVRajendra KVಕರ್ಫ್ಯೂಕೊರೊನಾಕೊರೊನಾ ವೈರಸ್ಕೋವಿಡ್ 19ಜಿಲ್ಲಾಧಿಕಾರಿಪಬ್ಲಿಕ್ ಟಿವಿಮಾರ್ಗಸೂಚಿರಾಜೇಂದ್ರ.ಕೆ.ವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
2 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
2 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?