ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಶನಿವಾರ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಶನಿವಾರ ಅಂಗಡಿ ಮುಂಗಟ್ಟುಗಳು ಹಾಗೂ ಸಾರ್ವಜನಿಕ ಓಡಾಟವನ್ನೂ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ನೀಡಿದ ಸಮಯವನ್ನೂ ಕೂಡ ಜಿಲ್ಲಾಡಳಿತ ಹಿಂಪಡೆದಿದೆ.
ಈಗಾಗಲೇ ರಾಜ್ಯದಲ್ಲಿ 64 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ. ಇಂದು ಒಂದೇ ದಿನ 9 ಪ್ರಕರಣ ಕರ್ನಾಟಕದಲ್ಲಿ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 7 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ. ಈ ಹಿನ್ನೆಲೆ ಸೋಂಕು ಹರಡುವುದನ್ನು ತಡೆಗಟ್ಟಲು ಮೆಡಿಕಲ್ ಸ್ಟೋರ್, ಆಸ್ಪತ್ರೆ ಸೇವೆ ಹಾಗೂ ಅಂಬುಲೆನ್ಸ್ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಸಂಪೂರ್ಣವಾಗಿ ಜಿಲ್ಲಾದ್ಯಂತ ಶನಿವಾರ ಸ್ಥಗಿತಗೊಳಿಸಲಾಗುತ್ತಿದೆ.