ದಕ್ಷಿಣಕನ್ನಡ, ಉಡುಪಿ, ಮೂಡಿಗೆರೆಯಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ

Public TV
2 Min Read
cyar cyclone

– ಇನ್ನೊಂದು ವಾರದಲ್ಲಿ ಮತ್ತೆರಡು ಸೈಕ್ಲೋನ್

ಬೆಂಗಳೂರು: ಇಷ್ಟು ದಿನ ಮಳೆಯಬ್ಬರ ಆಯ್ತು. ಇನ್ನೊಂದು ವಾರ ಚಂಡಮಾರುತದ ಭೀತಿ. ಇಂದು ದಕ್ಷಿಣ, ಉತ್ತರ ಕನ್ನಡ ಕರಾವಳಿ ಜಿಲ್ಲೆಗಳು, ಮಹಾರಾಷ್ಟ್ರದ ಕೊಂಕಣ ಮತ್ತು ಗೋವಾ ತೀರ ಪ್ರದೇಶಗಳಿಗೆ ಕ್ಯಾರ್ ಚಂಡಮಾರುತ ಅಪ್ಪಳಿಸಲಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ, ಉಡುಪಿ ಜಿಲ್ಲೆ ಹಾಗೂ ಮೂಡಿಗೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಎದ್ದಿದ್ದು, ಕರಾವಳಿಗೆ ಹಿಂಗಾರು ಅಪ್ಪಳಿಸುವ ಭೀತಿ ಎದುರಾಗಿದೆ.

ಕ್ಯಾರ್ ಚಂಡಮಾರುತ ಗಾಳಿ ಮಳೆ ಹೊತ್ತು ತರುತ್ತಿದೆ. ಈ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಮೌಖಿಕ ಆದೇಶ ಹೊರಡಿಸಿದ್ದಾರೆ.

cyar 1 1

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಮೀನುಗಾರರಿಗೆ, ನದಿ ಬದಿಯ ಜನ ನೀರಿಗಿಳಿಯದಂತೆ ಸೂಚಿಸಿದೆ. ಜಿಲ್ಲೆಯಾದ್ಯಂತ ಇಂದು ಬೆಳಗ್ಗೆಯವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅದು ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ.

ಇತ್ತ ಗೋವಾದ ಬೇತುಲ್‍ನಲ್ಲಿ ಅಲೆಯಬ್ಬರಕ್ಕೆ ಮುಳುಗ್ತಿದ್ದ ದೋಣಿಯಲ್ಲಿದ್ದವರನ್ನ ರಕ್ಷಣೆ ಮಾಡಲಾಗಿದೆ. ಮುರುಡೇಶ್ವರ ಕಡಲ ತೀರದಲ್ಲಿ ಅಂಗಡಿಗಳಿಗೆ ಸಮುದ್ರದ ಅಲೆ ನುಗ್ಗಿ ವಸ್ತುಗಳೆಲ್ಲ ಕೊಚ್ಚಿಕೊಂಡು ಹೋಗಿದೆ. ಗುರುವಾರದಿಂದಲೇ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದ್ದು, ಸಮುದ್ರದಲ್ಲಿ ಅಲೆಗಳು ಅಬ್ಬರಿಸುತ್ತಿವೆ. ಸಮುದ್ರ ಕೊರೆತ ಉಂಟಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ನಿನ್ನೆ ಸಂಜೆಯಿಂದಲೇ ಬಿರುಗಾಳಿ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

cyar 1 3 e1571968005553

ಕ್ಯಾರ್ ಚಂಡಮಾರುತ ಬಳಿಕ ಅಕ್ಟೋಬರ್ 27ರಂದು ಬಂಗಾಳಕೊಲ್ಲಿಯಲ್ಲಿ ಸೃಷ್ಟಿ ಆಗುವ ಮಹಾ ಚಂಡಮಾರುತ ಅಪ್ಪಳಿಸಿದ್ದು, ತಮಿಳುನಾಡು ಮತ್ತು ಪುದುಚೇರಿ, ಕೇರಳದಲ್ಲಿ ರಣ ಮಳೆ ನಿರೀಕ್ಷಿಸಲಾಗಿದೆ. ಅಕ್ಟೋಬರ್ 27ರಂದು ಹಿಂದೂಮಹಾಸಾಗರದಲ್ಲಿ ಸೃಷ್ಟಿ ಆಗಲಿರುವ ಬುಲ್‍ಬುಲ್ ಹೆಸರಿನ ಮತ್ತೊಂದು ಚಂಡಮಾರುತ ನವೆಂಬರ್ 1 ಅಥವಾ 2ರಂದು ಬಂಗಾಳಕೊಲ್ಲಿಯಲ್ಲಿ ರೌದ್ರರೂಪ ಪಡೆದುಕೊಳ್ಳುವ ಸಾಧ್ಯತೆ ಇದ್ದು, ಆಗ ಮತ್ತೆ ಭಾರೀ ಮಳೆ ಆಗುವ ಸಾಧ್ಯತೆ ಇದೆ.

Share This Article
Leave a Comment

Leave a Reply

Your email address will not be published. Required fields are marked *