Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತ ನಾಯಕ ಎಂ.ಅರವಿಂದ್ AAP ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಲಿತ ನಾಯಕ ಎಂ.ಅರವಿಂದ್ AAP ಸೇರ್ಪಡೆ

Bengaluru City

ದಲಿತ ನಾಯಕ ಎಂ.ಅರವಿಂದ್ AAP ಸೇರ್ಪಡೆ

Public TV
Last updated: March 9, 2022 9:12 pm
Public TV
Share
2 Min Read
aap m.aravinda
SHARE

ಬೆಂಗಳೂರು: ದಲಿತ ನಾಯಕ ಎಂ.ಅರವಿಂದ್‌ ಅವರು ಆಮ್‌ ಆದ್ಮಿ ಪಕ್ಷವನ್ನು (AAP) ಸೇರ್ಪಡೆಯಾದರು.

ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಅರವಿಂದ್‌ರವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಮೂರು ದಶಕಗಳಿಂದ ದಲಿತರು ಹಾಗೂ ಶೋಷಿತರ ಧ್ವನಿಯಾಗಿ ಹೋರಾಡುತ್ತಿರುವ ಎಂ.ಅರವಿಂದ್‌ ಅವರ ಸೇರ್ಪಡೆಯಿಂದ ರಾಜ್ಯದಲ್ಲಿ ಆಮ್‌ ಆದ್ಮಿ ಪಾರ್ಟಿಯು ಮತ್ತಷ್ಟು ಸದೃಢಗೊಂಡಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಕೆಲವು ಜಾತಿಗಳು ಹಾಗೂ ಧರ್ಮಗಳಿಗೆ ಸೀಮಿತವಾಗಿವೆ. ಆದರೆ ಎಎಪಿ ಜಾತಿ, ಧರ್ಮಗಳ ಭೇದವಿಲ್ಲದೇ ಎಲ್ಲರನ್ನೂ ಸಮಾನವಾಗಿ ನೋಡುತ್ತದೆ. ಒಬ್ಬ ಬಡ ದಲಿತನ ಮಗ ಹಾಗೂ ಉನ್ನತ ಅಧಿಕಾರಿಯ ಮಗ ಒಂದೇ ಶಾಲೆಯಲ್ಲಿ ಅಕ್ಕಪಕ್ಕ ಕುಳಿತು ಪಾಠ ಕಲಿಯುವಂತಾಗಬೇಕು ಎಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಕನಸು ಕಂಡಿದ್ದರು. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಅಂಬೇಡ್ಕರ್‌ ಕನಸನ್ನು ದೆಹಲಿಯ ಎಎಪಿ ಸರ್ಕಾರ ನನಸು ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಗೋವಾ ಮತದಾರರು ಕಾಂಗ್ರೆಸ್ ಸರ್ಕಾರ ತರಲು ಇಚ್ಛಿಸಿದ್ದಾರೆ: ಡಿ.ಕೆ ಶಿವಕುಮಾರ್

aap

ಎಂ.ಅರವಿಂದ್‌ ಮಾತನಾಡಿ, ಪಾರದರ್ಶಕತೆ, ಜನಪರ ಕಾಳಜಿ, ಸಮಾನತೆಯಲ್ಲಿ ನಂಬಿಕೆ ಹೊಂದಿರುವ ಹಾಗೂ ಇದನ್ನು ದೆಹಲಿಯಲ್ಲಿ ಸಾಧಿಸಿ ತೋರಿಸಿರುವ ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ದಲಿತರ ಪ್ರಗತಿ ಸಾಧ್ಯ. ಪಕ್ಷವು ಕರ್ನಾಟಕದಲ್ಲಿ ಬಲಗೊಂಡು ಶೀಘ್ರವೇ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಇಲ್ಲದಿದ್ದರೆ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಮಾಡಿ ದಲಿತರು, ಬಡವರು, ಶೋಷಿತರು ಕಷ್ಟದಲ್ಲಿಯೇ ಬದುಕುವಂತೆ ಮಾಡುತ್ತವೆ ಎಂದು ತಿಳಿಸಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷರಾದ ಮೋಹನ್‌ ದಾಸರಿ ಮಾತನಾಡಿ, ರಾಜ್ಯವನ್ನಾಳಿದ ಮೂರೂ ಪಕ್ಷಗಳಿಂದ ದಲಿತರು ಸೇರಿದಂತೆ ಯಾರಿಗೂ ಏನೂ ಲಾಭವಿಲ್ಲ. ಅವೆಲ್ಲವೂ ತಮ್ಮ ನಾಯಕರ ಜೇಬು ತುಂಬಿಸಿಕೊಳ್ಳುವುದಕ್ಕಾಗಿಯೇ ಇರುವ ಪಕ್ಷಗಳು. ಇದನ್ನು ಅರ್ಥ ಮಾಡಿಕೊಂಡು ಎಲ್ಲ ವರ್ಗಗಳ ಜನರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸರ್ಕಾರ ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ: ಎಚ್‍ಡಿಕೆ

Arvind Kejriwal 1

1990ರ ದಶಕದಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳ ಅಧ್ಯಕ್ಷರಾಗಿ ಸಮಾಜಮುಖಿ ಕೆಲಸ ಆರಂಭಿಸಿದ ಎಂ.ಅರವಿಂದ್‌ ಅವರು ನಂತರ ಭೀಮ್‌ ಮಾರ್ಚ್ ಸಂಘಟನೆ ಹಾಗೂ ಸಮತಾ ಸೈನಿಕ ದಳದ ಉನ್ನತ ಹುದ್ದೆ ಅಲಂಕರಿಸಿ ದಲಿತರ ಹಕ್ಕುಗಳಿಗಾಗಿ ಹೋರಾಡಿದ್ದರು. 1996ರಲ್ಲಿ ರಾಮ್ ವಿಲಾಸ್‌ ಪಾಸ್ವಾನ್‌ ಜೊತೆ ಗುರುತಿಸಿಕೊಂಡು, ಅವರ ನೇತೃತ್ವದ ದಲಿತ ಸೇನಾದ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಭೂಮಿಯಿಲ್ಲದವರಿಗೆ ಭೂಮಿ ಕೊಡಿಸುವ ಹೋರಾಟಗಾರರಾಗಿ, ಎಸ್‌ಸಿ-ಎಸ್‌ಟಿ ವಿಚಕ್ಷಣಾ ಸಮಿತಿಯ ಸದಸ್ಯರಾಗಿ, ರೈಲ್ವೆ ನೇಮಕಾತಿ ಮಂಡಳಿಯ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಕೊರೊನಾ ಸಮಯದಲ್ಲಿ ಕಲಘಟಗಿ, ಅಳ್ನಾವರ ಮತ್ತು ಧಾರವಾಡ ತಾಲೂಕುಗಳಲ್ಲಿ ಉಚಿತ ವೈದ್ಯಕೀಯ ನೆರವು ಕಲ್ಪಿಸಿ ನೆರವಾಗಿದ್ದರು.

ಎಎಪಿಯ ಮುಖಂಡರಾದ ನಂಜಪ್ಪ ಕಾಳೇಗೌಡ, ಜಗದೀಶ್‌ ವಿ ಸದಂ, ವಿಜಯ್‌ ಶಾಸ್ತ್ರಿಮಠ್‌, ದರ್ಶನ್‌ ಜೈನ್‌, ಬಿ.ಟಿ.ನಾಗಣ್ಣ ಮತ್ತಿತರ ನಾಯಕರು, ಅರವಿಂದ್‌ ಅವರ ಆಪ್ತರು ಹಾಗೂ ಎಎಪಿ ಕಾರ್ಯಕರ್ತರು ಭಾವಹಿಸಿದ್ದರು. ಇದನ್ನೂ ಓದಿ: ಕನ್ನಡದಲ್ಲಿ ಮಾತಾಡೋಕೆ ಹೇಳಿ, ನಮಗೆ ಏನೂ ಅರ್ಥ ಆಗ್ತಿಲ್ಲ: ಪರಿಷತ್‌ ಕಲಾಪದಲ್ಲಿ ಗಲಾಟೆ

TAGGED:aapbengaluruDalit Leaderm.aravindಎಂ.ಅರವಿಂದ್‌ಎಎಪಿದಲಿತ ನಾಯಕಬೆಂಗಳೂರು
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
18 seconds ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
6 minutes ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
33 minutes ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
1 hour ago
Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
2 hours ago
Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?