Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅದ್ಧೂರಿ ಸ್ವಾಗತದೊಂದಿಗೆ ಗೊಲ್ಲರಹಟ್ಟಿ ಪ್ರವೇಶಿಸಿದ ಸಂಸದ ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅದ್ಧೂರಿ ಸ್ವಾಗತದೊಂದಿಗೆ ಗೊಲ್ಲರಹಟ್ಟಿ ಪ್ರವೇಶಿಸಿದ ಸಂಸದ ನಾರಾಯಣಸ್ವಾಮಿ

Karnataka

ಅದ್ಧೂರಿ ಸ್ವಾಗತದೊಂದಿಗೆ ಗೊಲ್ಲರಹಟ್ಟಿ ಪ್ರವೇಶಿಸಿದ ಸಂಸದ ನಾರಾಯಣಸ್ವಾಮಿ

Public TV
Last updated: September 23, 2019 5:37 pm
Public TV
Share
3 Min Read
tmk narayanaswamy
SHARE

ತುಮಕೂರು: ದಲಿತರಿಗೆ ಪ್ರವೇಶ ನಿರಾಕರಿಸಿ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮಕ್ಕೆ ಇಂದು ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಅದ್ಧೂರಿ ಸ್ವಾಗತದೊಂದಿಗೆ ಪ್ರವೇಶಿಸಿದ್ದಾರೆ.

ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೆ ಈ ಹಿಂದೆ ಸಂಸದರು ದಲಿತ ಸಮುದಾಯಕ್ಕೆ ಸೇರಿದವರೆಂದು ಗ್ರಾಮದ ಒಳಗೆ ಪ್ರವೇಶಿಸಲು ಗ್ರಾಮಸ್ಥರು ನಿರಾಕರಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಹಲವು ಸ್ವಾಮೀಜಿಗಳು ಸಹ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇಂದು ಗೊಲ್ಲರಹಟ್ಟಿಗೆ ಸಂಸದ ನಾರಾಯಣಸ್ವಾಮಿಯವರನ್ನು ಆಹ್ವಾನಿಸಿ, ಅದ್ಧೂರಿ ಸ್ವಾಗತ ಕಾರ್ಯಕ್ರಮ ನಡೆಸಲಾಯಿತು.

vlcsnap 2019 09 23 17h05m15s170

ಸ್ವಾಗತ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಸದ ನಾರಾಯಣಸ್ವಾಮಿ, ಗೊಲ್ಲರಹಟ್ಟಿಯಲ್ಲಿ ನಡೆದ ಘಟನೆ ಉದ್ದೇಶ ಪೂರ್ವಕವಾಗಿ ನಡೆದಿಲ್ಲ. ಕೆಲವರು ಈ ಘಟನೆಯಿಂದ ನಮ್ಮ ನಡುವೆ ಕಂದಕ ನಿರ್ಮಾಣ ಮಾಡಿ ರಾಜಕೀಯ ಲಾಭ ಪಡೆಯಲು ಹೊರಟಿದ್ದಾರೆ. ಅಭಿವೃದ್ಧಿ ವಂಚಿತ ಗೊಲ್ಲರಹಟ್ಟಿ ಗ್ರಾಮಗಳ ಸಮೀಕ್ಷೆ ಮಾಡಲು ಬಂದಿದ್ದೆ. ಹಸಿವಿಗೆ ಜಾತಿ ಇಲ್ಲ. ಶಿಕ್ಷಣದ ಹಸಿವು ಇರಬಹುದು. ಆದರೆ ಹಸಿವಿಗೆ ಮಾನವೀಯತೆಯ ಸ್ಪರ್ಶ ಕೊಡಬೇಕು. ನಾನು ಆಗಮಿಸಿದ ಸಂದರ್ಭದಲ್ಲಿ ಇಲ್ಲಿಯ ಜನರು ಹಠ, ದಬ್ಬಾಳಿಕೆಯಿಂದ ಮಾತನಾಡಲಿಲ್ಲ. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದು ಸಂಸದ ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದರು.

ಇಂತಹ ಕೆಲಸ ಸ್ವಾಮೀಜಿಗಳಿಂದ ಹಿಡಿದು ಎಲ್ಲ ವರ್ಗದ ಜನರಿಂದ ನಡೆಯಬೇಕು. ನಾವುಗಳು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಮುಖ್ಯವಾಹಿನಿಯಿಂದ ಹಿಂದೆ ಇದ್ದರೆ ಅಂಥ ಸಮಾಜವನ್ನು ಮುಖ್ಯವಾಹಿನಿಗೆ ತರಬೇಕು. ನಾನು ಪ್ರಗತಿಪರ ಚಿಂತಕ, ಸಮಾಜ ಸುಧಾರಣೆ ಮಾಡುವುದು ನನ್ನ ಗುರಿ. ಯಾರಿಗೆ ಯಾವ ಯೋಜನೆ ಸಿಗಬೇಕೋ ಅಂತಹವರಿಗೆ ಅದು ತಲುಪಲೇಬೇಕೆಂಬುದು ನನ್ನ ಆದ್ಯತೆ. ಹೀಗಾಗಿ ಗ್ರಾಮಕ್ಕೆ ಆಗಮಿಸಿದ್ದೆ. ಆದರೆ ಅನೇಕ ಕಡೆ ಈ ಘಟನೆ ದುರುಪಯೋಗವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

vlcsnap 2019 09 23 17h17m59s131

ದ್ವೇಷ ಹುಟ್ಟಿಸುವ ಕೆಲಸ ಆಗುತ್ತಿದೆ. ಈ ಬೆಳವಣಿಗೆ ದೇಶಕ್ಕೆ ಕಂಟಕ. ಹೀಗಾಗಿ ಸ್ವಾಮೀಜಿಗಳ ಬಳಿ ಮಾತನಾಡಿದ್ದೆ. ಸಮಾಜದ ನಡುವೆ ಇಂತಹ ಕಂದಕ ನೋಡಿಕೊಂಡು ಇರುವವರು ನಿಜವಾದ ಅಪರಾಧಿ. ಅಂಥ ಸಮಾಜವನ್ನು ಎಚ್ಚರಿಸುವವನೇ ನಿಜವಾದ ದಾರ್ಶನಿಕ, ನಿಜವಾದ ಸ್ವಾಮೀಜಿ. ಈ ಘಟನೆಯಿಂದ ಗೊಲ್ಲ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಈ ಗ್ರಾಮದ ಹಿರಿಯರಿಗೆ ವಂದಿಸುತ್ತೇನೆ. ದೇಶ ಕಟ್ಟಲು ಎಲ್ಲರ ಸಹಕಾರ ಬೇಕು. ಮೋದಿ ಅಥವಾ ಅಮಿತ್ ಶಾ ಮಾತ್ರ ದೇಶ ಕಟ್ಟಿಲ್ಲ ಅಥವಾ ಇಂದಿರಾ ಗಾಂಧಿ ಮಾತ್ರ ದೇಶ ಕಟ್ಟಿಲ್ಲ. ದೇಶದ 120 ಕೋಟಿ ಜನರು ದೇಶ ಕಟ್ಟಲು ಪಾಲುದಾರರು ಎಂದು ತಿಳಿಸಿದರು.

ಈ ಹಿಂದೆ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೆ ಸಂಸದ ಎ.ನಾರಾಯಣಸ್ವಾಮಿ ಅವರು ಪ್ರವೇಶಿಸದಂತೆ ಅಡ್ಡಿಪಡಿಸಲಾಗಿತ್ತು. ಇಂದು ಗೊಲ್ಲರಹಟ್ಟಿಯಲ್ಲಿ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದ್ದಾರೆ. ತಳಿರು ತೋರಣ ಕಟ್ಟಿ ಹಬ್ಬದ ವಾತಾವರಣ ನಿರ್ಮಿಸಿ ಸಂಸದರನ್ನು ಬರಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದರ ಜೊತೆಗೆ ಶ್ರೀ ಈಶ್ವರನಂದಪುರಿ ಸ್ವಾಮಿಜಿ, ಶ್ರೀ ಕೃಷ್ಣ ಯಾದವನಾಂದ ಸ್ವಾಮಿಜಿ, ಡಾ. ಶ್ರೀ ಶಾಂತವೀರ ಸ್ವಾಮೀಜಿ, ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮಿಜಿ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಎಸ್‍ಪಿ ಕೆ.ವಂಶಿಕೃಷ್ಣ, ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.

vlcsnap 2019 09 23 17h03m13s229

ಏನಿದು ಘಟನೆ?
ಗುಡಿಸಲು ಮುಕ್ತ ಯೋಜನೆ ರೂಪಿಸಲು ಗ್ರಾಮಕ್ಕೆ ಆಗಮಿಸಿದ್ದ ಚಿತ್ರದುರ್ಗ ಬಿಜೆಪಿ ಸಂಸದ ನಾರಾಯಣಸ್ವಾಮಿಗೆ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯ ಒಳಗಡೆ ಬಿಡದೇ ಗ್ರಾಮಸ್ಥರು ತಡೆ ಹಾಕಿದ್ದರು.

ಖಾಸಗಿ ಕಂಪನಿಗಳ ತಂಡದೊಂದಿಗೆ ಊರಿಗೆ ಬಂದಿದ್ದ ಸಂಸದ ನಾರಾಯಣಸ್ವಾಮಿ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೂ ಭೇಟಿ ಕೊಟ್ಟಿದ್ದರು. ಈ ವೇಳೆ ಎದುರಾದ ಗೊಲ್ಲರಟ್ಟಿ ನಿವಾಸಿಗಳು ಹಟ್ಟಿಯ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿ, ಅಲ್ಲಿಯೇ ಕುರ್ಚಿ ಹಾಕಿ ಕೂರಲು ಮನವಿ ಮಾಡಿಕೊಂಡಿದ್ದರು. ಯಾವುದೇ ಕಾರಣಕ್ಕೂ ನಿಮ್ಮ ಜನಾಂಗದವರು ಹಟ್ಟಿಯೊಳಗಡೆ ಹೋಗಬಾರದು ಎಂದು ಪಟ್ಟು ಹಿಡಿದಿದ್ದರು. ಸಂಸದ ನಾರಾಯಣಸ್ವಾಮಿ ಎಷ್ಟೇ ಮನವೊಲಿಸಿದರೂ ಗೊಲ್ಲರಹಟ್ಟಿ ನಿವಾಸಿಗಳು ಒಳಗೆ ಬಿಟ್ಟುಕೊಂಡಿರಲಿಲ್ಲ. ನೀವು ಗೊಲ್ಲರಹಟ್ಟಿ ಪ್ರವೇಶ ಮಾಡಿದರೆ ಕೇವಲ ನಮಗೆ ಮಾತ್ರ ಅಲ್ಲ, ನಿಮಗೂ ಕೆಟ್ಟದಾಗುತ್ತದೆ. ಬಲವಂತಾಗಿ ನುಗ್ಗಿದವರಿಗೆ, ಸುಳ್ಳು ಹೇಳಿ ಒಳಗೆ ಬಂದಿದ್ದ ಹಲವರಿಗೆ ಅನಾಹುತ ಉಂಟಾಗಿದೆ. ಆ ಅನಾಹುತ ನಿಮಗೆ ಆಗುವುದು ಬೇಡ ಎಂದು ನಾರಾಯಣಸ್ವಾಮಿಯವರಿಗೆ ಸಮಾಧಾನಪಡಿಸಿದ್ದರು.

TMK MP CAST AV 4

ನೂರಾರು ವರ್ಷದ ಹಿಂದೆ ಗೊಲ್ಲರ ಚಿತ್ರಲಿಂಗೇಶ್ವರ ದೇವರು-ಹರಿಜನರ ದೇವರ ನಡುವೆ ಕೆಟ್ಟ ಘಟನೆ ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವ ಹರಿಜನರನ್ನೂ ಬಿಟ್ಟುಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಕಥೆ ಕಟ್ಟಿದ್ದರು. ಇಷ್ಟೆಲ್ಲ ಅವಮಾನ ಸಹಿಸಿಕೊಂಡು ಸಂಸದ ನಾರಾಯಣಸ್ವಾಮಿ ಸೌಜನ್ಯದಿಂಲೇ ಅರ್ಧ ಗಂಟೆ ಕಾರಿನಲ್ಲೇ ಕುಳಿತುಕೊಂಡಿದ್ದರು.

ನಾನು ಅತಿಹೆಚ್ಚು ಗೊಲ್ಲರ ಮತದಿಂದ ಗೆದ್ದು ಬಂದಿದ್ದೆನೆ. ಅವರ ಸಮುದಾಯಕ್ಕೆ ಏನಾದರೊಂದು ಒಳ್ಳೆಯದು ಮಾಡಬೇಕು ಎಂದು ಬಂದಿದ್ದೇನೆ. ಈ ಒಂದು ಕಾರಣಕ್ಕೆ ನೀವು ಅವಮಾನ ಮಾಡಿದರೂ ಸುಮ್ಮನಿದ್ದೇನೆ ಎಂದು ಸೌಜನ್ಯದಿಂದ ವರ್ತಿಸಿದ್ದರು. ಗೊಲ್ಲರಹಟ್ಟಿ ಒಳಗೆ ಹೋದ ತಂಡದ ಸದಸ್ಯರು ಹೊರಗೆ ಬರುವವರೆಗೂ ಸುಮಾರು ಅರ್ಧ ಗಂಟೆಗಳ ಕಾಲ ಸಂಸದರು ಕಾರಿನಲ್ಲಿ ಕುಳಿತು, ಬಳಿಕ ತಂಡದ ಜತೆ ವಾಪಾಸ್ ಹೋಗಿದ್ದರು.

TAGGED:blockdalitsGollarahattiMP NarayanaswamyPublic TVtumkurvillagersಗೊಲ್ಲರಹಟ್ಟಿಗ್ರಾಮಸ್ಥರುತುಮಕೂರುದಲಿತರುನಿರ್ಬಂಧಪಬ್ಲಿಕ್ ಟಿವಿಸಂಸದ ನಾರಾಯಣಸ್ವಾಮಿ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

DK Suresh
Bengaluru City

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಸರಿ ಇಲ್ಲ, ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ: ಡಿಕೆಸು

Public TV
By Public TV
11 minutes ago
DK Shivakumar and delegation
Bengaluru City

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Public TV
By Public TV
25 minutes ago
Suryakumar Yadav
Cricket

ಭಾರತ – ಪಾಕಿಸ್ತಾನ ಮಧ್ಯೆ ಮತ್ತೆ ಅಮೆರಿಕ!

Public TV
By Public TV
45 minutes ago
PHAKEERA ARREST
Crime

ದಾವಣಗೆರೆ | 28 ವರ್ಷದ ಹಿಂದೆ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌!

Public TV
By Public TV
50 minutes ago
Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
1 hour ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?