Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Home » Latest » ಅದ್ಧೂರಿ ಸ್ವಾಗತದೊಂದಿಗೆ ಗೊಲ್ಲರಹಟ್ಟಿ ಪ್ರವೇಶಿಸಿದ ಸಂಸದ ನಾರಾಯಣಸ್ವಾಮಿ
Karnataka

ಅದ್ಧೂರಿ ಸ್ವಾಗತದೊಂದಿಗೆ ಗೊಲ್ಲರಹಟ್ಟಿ ಪ್ರವೇಶಿಸಿದ ಸಂಸದ ನಾರಾಯಣಸ್ವಾಮಿ

Public TV
Last updated: 2019/09/23 at 5:37 PM
Public TV
Share
3 Min Read
SHARE

ತುಮಕೂರು: ದಲಿತರಿಗೆ ಪ್ರವೇಶ ನಿರಾಕರಿಸಿ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮಕ್ಕೆ ಇಂದು ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಅದ್ಧೂರಿ ಸ್ವಾಗತದೊಂದಿಗೆ ಪ್ರವೇಶಿಸಿದ್ದಾರೆ.

ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೆ ಈ ಹಿಂದೆ ಸಂಸದರು ದಲಿತ ಸಮುದಾಯಕ್ಕೆ ಸೇರಿದವರೆಂದು ಗ್ರಾಮದ ಒಳಗೆ ಪ್ರವೇಶಿಸಲು ಗ್ರಾಮಸ್ಥರು ನಿರಾಕರಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಹಲವು ಸ್ವಾಮೀಜಿಗಳು ಸಹ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇಂದು ಗೊಲ್ಲರಹಟ್ಟಿಗೆ ಸಂಸದ ನಾರಾಯಣಸ್ವಾಮಿಯವರನ್ನು ಆಹ್ವಾನಿಸಿ, ಅದ್ಧೂರಿ ಸ್ವಾಗತ ಕಾರ್ಯಕ್ರಮ ನಡೆಸಲಾಯಿತು.

ಸ್ವಾಗತ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಸದ ನಾರಾಯಣಸ್ವಾಮಿ, ಗೊಲ್ಲರಹಟ್ಟಿಯಲ್ಲಿ ನಡೆದ ಘಟನೆ ಉದ್ದೇಶ ಪೂರ್ವಕವಾಗಿ ನಡೆದಿಲ್ಲ. ಕೆಲವರು ಈ ಘಟನೆಯಿಂದ ನಮ್ಮ ನಡುವೆ ಕಂದಕ ನಿರ್ಮಾಣ ಮಾಡಿ ರಾಜಕೀಯ ಲಾಭ ಪಡೆಯಲು ಹೊರಟಿದ್ದಾರೆ. ಅಭಿವೃದ್ಧಿ ವಂಚಿತ ಗೊಲ್ಲರಹಟ್ಟಿ ಗ್ರಾಮಗಳ ಸಮೀಕ್ಷೆ ಮಾಡಲು ಬಂದಿದ್ದೆ. ಹಸಿವಿಗೆ ಜಾತಿ ಇಲ್ಲ. ಶಿಕ್ಷಣದ ಹಸಿವು ಇರಬಹುದು. ಆದರೆ ಹಸಿವಿಗೆ ಮಾನವೀಯತೆಯ ಸ್ಪರ್ಶ ಕೊಡಬೇಕು. ನಾನು ಆಗಮಿಸಿದ ಸಂದರ್ಭದಲ್ಲಿ ಇಲ್ಲಿಯ ಜನರು ಹಠ, ದಬ್ಬಾಳಿಕೆಯಿಂದ ಮಾತನಾಡಲಿಲ್ಲ. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದು ಸಂಸದ ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದರು.

ಇಂತಹ ಕೆಲಸ ಸ್ವಾಮೀಜಿಗಳಿಂದ ಹಿಡಿದು ಎಲ್ಲ ವರ್ಗದ ಜನರಿಂದ ನಡೆಯಬೇಕು. ನಾವುಗಳು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಮುಖ್ಯವಾಹಿನಿಯಿಂದ ಹಿಂದೆ ಇದ್ದರೆ ಅಂಥ ಸಮಾಜವನ್ನು ಮುಖ್ಯವಾಹಿನಿಗೆ ತರಬೇಕು. ನಾನು ಪ್ರಗತಿಪರ ಚಿಂತಕ, ಸಮಾಜ ಸುಧಾರಣೆ ಮಾಡುವುದು ನನ್ನ ಗುರಿ. ಯಾರಿಗೆ ಯಾವ ಯೋಜನೆ ಸಿಗಬೇಕೋ ಅಂತಹವರಿಗೆ ಅದು ತಲುಪಲೇಬೇಕೆಂಬುದು ನನ್ನ ಆದ್ಯತೆ. ಹೀಗಾಗಿ ಗ್ರಾಮಕ್ಕೆ ಆಗಮಿಸಿದ್ದೆ. ಆದರೆ ಅನೇಕ ಕಡೆ ಈ ಘಟನೆ ದುರುಪಯೋಗವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದ್ವೇಷ ಹುಟ್ಟಿಸುವ ಕೆಲಸ ಆಗುತ್ತಿದೆ. ಈ ಬೆಳವಣಿಗೆ ದೇಶಕ್ಕೆ ಕಂಟಕ. ಹೀಗಾಗಿ ಸ್ವಾಮೀಜಿಗಳ ಬಳಿ ಮಾತನಾಡಿದ್ದೆ. ಸಮಾಜದ ನಡುವೆ ಇಂತಹ ಕಂದಕ ನೋಡಿಕೊಂಡು ಇರುವವರು ನಿಜವಾದ ಅಪರಾಧಿ. ಅಂಥ ಸಮಾಜವನ್ನು ಎಚ್ಚರಿಸುವವನೇ ನಿಜವಾದ ದಾರ್ಶನಿಕ, ನಿಜವಾದ ಸ್ವಾಮೀಜಿ. ಈ ಘಟನೆಯಿಂದ ಗೊಲ್ಲ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಈ ಗ್ರಾಮದ ಹಿರಿಯರಿಗೆ ವಂದಿಸುತ್ತೇನೆ. ದೇಶ ಕಟ್ಟಲು ಎಲ್ಲರ ಸಹಕಾರ ಬೇಕು. ಮೋದಿ ಅಥವಾ ಅಮಿತ್ ಶಾ ಮಾತ್ರ ದೇಶ ಕಟ್ಟಿಲ್ಲ ಅಥವಾ ಇಂದಿರಾ ಗಾಂಧಿ ಮಾತ್ರ ದೇಶ ಕಟ್ಟಿಲ್ಲ. ದೇಶದ 120 ಕೋಟಿ ಜನರು ದೇಶ ಕಟ್ಟಲು ಪಾಲುದಾರರು ಎಂದು ತಿಳಿಸಿದರು.

ಈ ಹಿಂದೆ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೆ ಸಂಸದ ಎ.ನಾರಾಯಣಸ್ವಾಮಿ ಅವರು ಪ್ರವೇಶಿಸದಂತೆ ಅಡ್ಡಿಪಡಿಸಲಾಗಿತ್ತು. ಇಂದು ಗೊಲ್ಲರಹಟ್ಟಿಯಲ್ಲಿ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದ್ದಾರೆ. ತಳಿರು ತೋರಣ ಕಟ್ಟಿ ಹಬ್ಬದ ವಾತಾವರಣ ನಿರ್ಮಿಸಿ ಸಂಸದರನ್ನು ಬರಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದರ ಜೊತೆಗೆ ಶ್ರೀ ಈಶ್ವರನಂದಪುರಿ ಸ್ವಾಮಿಜಿ, ಶ್ರೀ ಕೃಷ್ಣ ಯಾದವನಾಂದ ಸ್ವಾಮಿಜಿ, ಡಾ. ಶ್ರೀ ಶಾಂತವೀರ ಸ್ವಾಮೀಜಿ, ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮಿಜಿ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಎಸ್‍ಪಿ ಕೆ.ವಂಶಿಕೃಷ್ಣ, ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.

ಏನಿದು ಘಟನೆ?
ಗುಡಿಸಲು ಮುಕ್ತ ಯೋಜನೆ ರೂಪಿಸಲು ಗ್ರಾಮಕ್ಕೆ ಆಗಮಿಸಿದ್ದ ಚಿತ್ರದುರ್ಗ ಬಿಜೆಪಿ ಸಂಸದ ನಾರಾಯಣಸ್ವಾಮಿಗೆ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯ ಒಳಗಡೆ ಬಿಡದೇ ಗ್ರಾಮಸ್ಥರು ತಡೆ ಹಾಕಿದ್ದರು.

ಖಾಸಗಿ ಕಂಪನಿಗಳ ತಂಡದೊಂದಿಗೆ ಊರಿಗೆ ಬಂದಿದ್ದ ಸಂಸದ ನಾರಾಯಣಸ್ವಾಮಿ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೂ ಭೇಟಿ ಕೊಟ್ಟಿದ್ದರು. ಈ ವೇಳೆ ಎದುರಾದ ಗೊಲ್ಲರಟ್ಟಿ ನಿವಾಸಿಗಳು ಹಟ್ಟಿಯ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿ, ಅಲ್ಲಿಯೇ ಕುರ್ಚಿ ಹಾಕಿ ಕೂರಲು ಮನವಿ ಮಾಡಿಕೊಂಡಿದ್ದರು. ಯಾವುದೇ ಕಾರಣಕ್ಕೂ ನಿಮ್ಮ ಜನಾಂಗದವರು ಹಟ್ಟಿಯೊಳಗಡೆ ಹೋಗಬಾರದು ಎಂದು ಪಟ್ಟು ಹಿಡಿದಿದ್ದರು. ಸಂಸದ ನಾರಾಯಣಸ್ವಾಮಿ ಎಷ್ಟೇ ಮನವೊಲಿಸಿದರೂ ಗೊಲ್ಲರಹಟ್ಟಿ ನಿವಾಸಿಗಳು ಒಳಗೆ ಬಿಟ್ಟುಕೊಂಡಿರಲಿಲ್ಲ. ನೀವು ಗೊಲ್ಲರಹಟ್ಟಿ ಪ್ರವೇಶ ಮಾಡಿದರೆ ಕೇವಲ ನಮಗೆ ಮಾತ್ರ ಅಲ್ಲ, ನಿಮಗೂ ಕೆಟ್ಟದಾಗುತ್ತದೆ. ಬಲವಂತಾಗಿ ನುಗ್ಗಿದವರಿಗೆ, ಸುಳ್ಳು ಹೇಳಿ ಒಳಗೆ ಬಂದಿದ್ದ ಹಲವರಿಗೆ ಅನಾಹುತ ಉಂಟಾಗಿದೆ. ಆ ಅನಾಹುತ ನಿಮಗೆ ಆಗುವುದು ಬೇಡ ಎಂದು ನಾರಾಯಣಸ್ವಾಮಿಯವರಿಗೆ ಸಮಾಧಾನಪಡಿಸಿದ್ದರು.

ನೂರಾರು ವರ್ಷದ ಹಿಂದೆ ಗೊಲ್ಲರ ಚಿತ್ರಲಿಂಗೇಶ್ವರ ದೇವರು-ಹರಿಜನರ ದೇವರ ನಡುವೆ ಕೆಟ್ಟ ಘಟನೆ ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವ ಹರಿಜನರನ್ನೂ ಬಿಟ್ಟುಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಕಥೆ ಕಟ್ಟಿದ್ದರು. ಇಷ್ಟೆಲ್ಲ ಅವಮಾನ ಸಹಿಸಿಕೊಂಡು ಸಂಸದ ನಾರಾಯಣಸ್ವಾಮಿ ಸೌಜನ್ಯದಿಂಲೇ ಅರ್ಧ ಗಂಟೆ ಕಾರಿನಲ್ಲೇ ಕುಳಿತುಕೊಂಡಿದ್ದರು.

ನಾನು ಅತಿಹೆಚ್ಚು ಗೊಲ್ಲರ ಮತದಿಂದ ಗೆದ್ದು ಬಂದಿದ್ದೆನೆ. ಅವರ ಸಮುದಾಯಕ್ಕೆ ಏನಾದರೊಂದು ಒಳ್ಳೆಯದು ಮಾಡಬೇಕು ಎಂದು ಬಂದಿದ್ದೇನೆ. ಈ ಒಂದು ಕಾರಣಕ್ಕೆ ನೀವು ಅವಮಾನ ಮಾಡಿದರೂ ಸುಮ್ಮನಿದ್ದೇನೆ ಎಂದು ಸೌಜನ್ಯದಿಂದ ವರ್ತಿಸಿದ್ದರು. ಗೊಲ್ಲರಹಟ್ಟಿ ಒಳಗೆ ಹೋದ ತಂಡದ ಸದಸ್ಯರು ಹೊರಗೆ ಬರುವವರೆಗೂ ಸುಮಾರು ಅರ್ಧ ಗಂಟೆಗಳ ಕಾಲ ಸಂಸದರು ಕಾರಿನಲ್ಲಿ ಕುಳಿತು, ಬಳಿಕ ತಂಡದ ಜತೆ ವಾಪಾಸ್ ಹೋಗಿದ್ದರು.

TAGGED: block, dalits, Gollarahatti, MP Narayanaswamy, Public TV, tumkur, villagers, ಗೊಲ್ಲರಹಟ್ಟಿ, ಗ್ರಾಮಸ್ಥರು, ತುಮಕೂರು, ದಲಿತರು, ನಿರ್ಬಂಧ, ಪಬ್ಲಿಕ್ ಟಿವಿ, ಸಂಸದ ನಾರಾಯಣಸ್ವಾಮಿ
Share this Article
Facebook Twitter Whatsapp Whatsapp Telegram
Share

Latest News

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!
By Public TV
ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌
By Public TV
ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು
By Public TV
ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ
By Public TV
ಮೆಕ್ಸಿಕೋ ವಲಸಿಗರ ಕೇಂದ್ರದಲ್ಲಿ ಭೀಕರ ಅಗ್ನಿ ದುರಂತ – 39 ಮಂದಿ ಸಾವು
By Public TV
ಬಸ್ ಮೇಲಿಂದ ಕಲಾವಿದರಿಗೆ ಹಣ ಎಸೆದ ಡಿಕೆಶಿ
By Public TV

You Might Also Like

Latest

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!

Public TV By Public TV 6 hours ago
Big Bulletin

ಬಿಗ್ ಬುಲೆಟಿನ್ 28 March 2023 ಭಾಗ-1

Public TV By Public TV 6 hours ago
Big Bulletin

ಬಿಗ್ ಬುಲೆಟಿನ್ 28 March 2023 ಭಾಗ-2

Public TV By Public TV 6 hours ago
Big Bulletin

ಬಿಗ್ ಬುಲೆಟಿನ್ 28 March 2023 ಭಾಗ-3

Public TV By Public TV 6 hours ago
Follow US
Go to mobile version
Welcome Back!

Sign in to your account

Lost your password?