ದಲಿತ ಕುಟುಂಬಗಳಿಗೆ ಅನ್ನಭಾಗ್ಯ ಅಕ್ಕಿ ರದ್ದು- ಸೊಪ್ಪು ತಿಂದು ಕೊರೆಯುವ ಚಳಿಯಲ್ಲೂ ಪ್ರತಿಭಟನೆ

Public TV
1 Min Read
CKB

ಚಿಕ್ಕಬಳ್ಳಾಪುರ: ಅನ್ನಭಾಗ್ಯದ ಅಕ್ಕಿಗಾಗಿ ದಲಿತ ಸಮುದಾಯದ ಜನ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಗ್ರಾಮ ತೊರೆದು ಬಂದು ಸೊಪ್ಪು ಸೆದೆ ತಿನ್ನುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚೌಡದೇನಹಳ್ಳಿಯ ದಲಿತರು ವಿನೂತನವಾಗಿ ಪ್ರತಿಭಟಿಸಿದ್ದಾರೆ.

CKB 2
ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಅಂತ ದಲಿತರಿಗೆ ಸಿಗಬೇಕಾದ ಪಡಿತರ ಚೀಟಿ ರದ್ದು ಪಡಿಸಲಾಗಿತ್ತು. ಹೀಗಾಗಿ ಅಲ್ಲಿನ ಗ್ರಾಮದ ಜನ ಕಳೆದ ಒಂದು ವರ್ಷದಿಂದ ಪಡಿತರ ಸಿಗದೆ ಪರದಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೀಗ ಗ್ರಾಮ ತೊರೆದು ಗ್ರಾಮದ ಹೊರವಲಯದಲ್ಲೇ ವಾಸ್ತವ್ಯ ಹೂಡಿ ಪ್ರತಿಭಟನೆ ಮಾಡಿದ್ದಾರೆ. ತಮಗೆ ಸಿಗಬೇಕಾದ ಸೌಲಭ್ಯಗಳು ಒದಗಿಸುವಂತೆ ಆಗ್ರಹಿಸಿ ಕಳೆದ ರಾತ್ರಿಯಿಡೀ ಕೊರೆಯುವ ಚಳಿಯನ್ನು ಲೆಕ್ಕಿಸದೇ ದಲಿತ ಕುಟುಂಬಗಳು ಪ್ರತಿಭಟನೆ ನಡೆಸಿವೆ.

CKB 4

CKB 8

CKB 10

CKB 11

CKB 12

CKB 13

CKB 14

Share This Article
Leave a Comment

Leave a Reply

Your email address will not be published. Required fields are marked *