Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿಗೆ ದಲಿತರು ಅಭಿವೃದ್ಧಿ, ಆಡಳಿತದ ಪಾಲುದಾರರು- ಸಿ.ಟಿ.ರವಿ

Public TV
Last updated: December 7, 2021 8:15 pm
Public TV
Share
3 Min Read
ct ravi bjp
SHARE

ಬೆಂಗಳೂರು: ದಲಿತರು ನಮಗೆ ಕೇವಲ ಮತಬ್ಯಾಂಕ್ ಅಲ್ಲ. ಅವರು ದೇಶದ ಅಭಿವೃದ್ಧಿಯ ಮತ್ತು ಆಡಳಿತದ ಪಾಲುದಾರರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಹೇಳಿದ್ದಾರೆ.

ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್ ನಲ್ಲಿ ಇಂದು ರಾಷ್ಟ್ರೀಯ ಮತ್ತು ರಾಜ್ಯ ಎಸ್ ಸಿ ಮೋರ್ಚಾ ಪ್ರಮುಖರ ಜೊತೆ ಸಂವಾದ ನಡೆಸಿದ ಅವರು, ಪ್ರತಿಯೊಬ್ಬರೂ ಸ್ವಾಭಿಮಾನ ಮತ್ತು ಸ್ವಾವಲಂಬನೆಯಿಂದ ಬದುಕಬೇಕೆಂಬ ಆಶಯ ಬಿಜೆಪಿಯದು. ಇದಕ್ಕಾಗಿಯೇ ಬಿಜೆಪಿಯು ಅಂಬೇಡ್ಕರರ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದೆ ಎಂದು ವಿವರಿಸಿದರು. ಮೊದಲನೇ ಭಾರತರತ್ನ ಪ್ರಶಸ್ತಿಯೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಿಗಬೇಕಿತ್ತು. ಇತಿಹಾಸದಲ್ಲಿ ಕೊಡಬೇಕಾದ ನ್ಯಾಯವನ್ನು ಕಾಂಗ್ರೆಸ್ ಪಕ್ಷ ಅವರಿಗೆ ನೀಡಲಿಲ್ಲ ಎಂದು ಅವರು ಆಕ್ಷೇಪಿಸಿದರು.

ದಲಿತರು ನಮಗೆ ಕೇವಲ ಮತಬ್ಯಾಂಕ್ ಅಲ್ಲ. ಅವರು ದೇಶದ ಅಭಿವೃದ್ಧಿಯ ಮತ್ತು ಆಡಳಿತದ ಪಾಲುದಾರರು.
ರಾಜ್ಯ ಎಸ್ ಸಿ ಮೋರ್ಚಾ ಹಾಗೂ ಪ್ರಮುಖರ ಜೊತೆ ಸಂವಾದ ನಡೆಸಲಾಯಿತು. @BJP4Karnataka SC ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿಯವರು @BJP4India) @BJPSCMorcha ರಾಷ್ಟ್ರೀಯ ಕಾರ್ಯದರ್ಶಿಗಳಾದ ಎಂ. ಕುಮಾರ್ ಭಾಗವಹಿಸಿದ್ದರು. pic.twitter.com/S1UsOCWbcm

— C T Ravi ???????? ಸಿ ಟಿ ರವಿ (@CTRavi_BJP) December 7, 2021

ನವೆಂಬರ್ 26 ಸಂವಿಧಾನ ದಿನ. ಸಂವಿಧಾನ ಎಂದರೆ ಡಾ. ಅಂಬೇಡ್ಕರರ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಅದನ್ನು ಮರೆಮಾಚುವ ಕೆಲಸ ಮಾಡಲಾಯಿತು. ನವೆಂಬರ್ 26 ಅನ್ನು ತೆರೆಗೆ ಸರಿಸುವ ಕೆಲಸ ನಡೆದಿತ್ತು. ಅಂಬೇಡ್ಕರ್ ಅವರನ್ನು ಸೋಲಿಸಿದ ಕಜ್ರೋಳ್ಕರ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಕೊಡಲಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ದಿಲ್ಲಿಯಲ್ಲಿ ಕಳೆದ 1 ವರ್ಷದಿಂದ ನಡೆಯುತ್ತಿದ್ದ ರೈತರ ಪ್ರತಿಭಟನೆ ವಾಪಸ್‌?

ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರಕಾರವು ಡಾ. ಅಂಬೇಡ್ಕರ್ ಅವರ ಪಂಚಧಾಮಗಳನ್ನು ಪಂಚ ತೀರ್ಥ ಎಂದು ಘೋಷಿಸಿ ಅಭಿವೃದ್ಧಿ ಪಡಿಸಿದೆ. ಅವರು ಹುಟ್ಟಿದ ಜಾಗ ಮಧ್ಯಪ್ರದೇಶದ ಮಹುವಾ, ಬ್ಯಾರಿಸ್ಟರ್ ಪದವಿ ಪಡೆಯುವ ವೇಳೆ ವಾಸವಿದ್ದ ಲಂಡನ್‍ನ ಮನೆಯನ್ನು ಗುರುತಿಸಿ ಖರೀದಿಸಿ ಸ್ಮಾರಕವಾಗಿ ಪರಿವರ್ತನೆ, ದೆಹಲಿಯ ಆಲಿಪುರ್ ರಸ್ತೆಯಲ್ಲಿ ಅವರು ಸಂವಿಧಾನ ಕರ್ತೃವಾಗಿ ವಾಸವಿದ್ದ ಮನೆಯಲ್ಲಿ ಸ್ಮಾರಕ, ಕರ್ಮಭೂಮಿ ನಾಗಪುರ ಮತ್ತು ಅಂತ್ಯಸಂಸ್ಕಾರ ನಡೆದ ಮುಂಬೈ- ಈ ಪಂಚಸ್ಥಳಗಳನ್ನು ಪಂಚಧಾಮವಾಗಿ ಅಭಿವೃದ್ಧಿಪಡಿಸುವ ಕೆಲಸವನ್ನು ಮೋದಿಯವರ ನೇತೃತ್ವದಲ್ಲಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದ ಅರ್ಹ ವ್ಯಕ್ತಿಗಳಿಗೆ ನ್ಯಾಯ ಕೊಡುವ ಕೆಲಸವನ್ನೂ ಮಾಡಲಾಗಿದೆ ಎಂದು ಹೇಳಿದರು.

ಒಂದು ಕುಟುಂಬದ ಹಿತಾಸಕ್ತಿಗಾಗಿ ನೇತಾಜಿಗೆ ಅನ್ಯಾಯ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು. ನೇತಾಜಿ ಅವರಿಗೆ ನ್ಯಾಯ ಕೊಡುವ ಕೆಲಸ ನಡೆದಿದೆ. ಸರ್ದಾರ್ ವಲ್ಲಭಭಾಯಿ ಪಟೇಲರನ್ನು ಮರೆಗೆ ಸರಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದ್ದು, ಅವರಿಗೆ ಗೌರವ ಕೊಡಲು ಏಕತಾ ಪ್ರತಿಮೆ ಸ್ಥಾಪಿಸಲಾಗಿದೆ. ಸಂವಿಧಾನ ದಿವಸ್ ಆಚರಣೆ, ಪಂಚತೀರ್ಥಗಳ ಅಭಿವೃದ್ಧಿ ಮೂಲಕ ಡಾ. ಅಂಬೇಡ್ಕರರಿಗೆ ಗೌರವ ಸಮರ್ಪಿಸುವ ಕಾರ್ಯ ನಡೆದಿದೆ. ಬಿಜೆಪಿ ಕಾರ್ಯಕರ್ತರು ತಮ್ಮ ಹೃದಯದಲ್ಲಿ ಅಂಬೇಡ್ಕರರನ್ನು ಇಟ್ಟುಕೊಂಡು ಗೌರವಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಕೆಂಪು ಟೋಪಿ ಧರಿಸಿದವರು ಉತ್ತರಪ್ರದೇಶಕ್ಕೆ ಅಪಾಯಕಾರಿ: ಮೋದಿ

SIDDARAMAIAH 3

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದವರು ರಾಜಕಾರಣದಲ್ಲಿರುವ ದಲಿತರನ್ನು ಹೊಟ್ಟೆಪಾಡಿಗಾಗಿ ರಾಜಕೀಯದಲ್ಲಿದ್ದಾರೆ ಎನ್ನುವ ಮಾತೇ ಅವರ ಮನಸ್ಸಿನಲ್ಲಿರುವ ದಲಿತ ವಿರೋಧಿ ಭಾವನೆಗೆ ಸಾಕ್ಷಿಯಾಗಿದೆ. ಬಡವರಿಗೆ ಬಲ ತುಂಬಬೇಕು, ದಲಿತರಿಗೆ ಬಲ ಕೊಡಬೇಕೆಂಬ ಡಾ. ಅಂಬೇಡ್ಕರರ ಕನಸನ್ನು ನನಸು ಮಾಡಲು ಪ್ರಧಾನಿ ಮೋದಿಯವರ ಜನಧನ್, ಆಯುಷ್ಮಾನ್‌ ಭಾರತ, ಸ್ಟಾರ್ಟಪ್, ಮುದ್ರಾ ಸೇರಿದಂತೆ ಪ್ರತಿಯೊಂದು ಯೋಜನೆಗಳು ನನಸು ಮಾಡುತ್ತಿವೆ ಎಂದು ವಿಶ್ಲೇಷಿಸಿದರು.

ನಾವು ಪ್ರತಿಯೊಬ್ಬರನ್ನೂ ಸ್ವಾವಲಂಬಿಯನ್ನಾಗಿ ಮಾಡಿ ಅವರ ಸಾಮರ್ಥ್ಯದ ಕ್ಷಮತೆಯನ್ನು ಹೆಚ್ಚು ಮಾಡಿ ಜನನಾಯಕರಾಗಿ ರೂಪುಗೊಳ್ಳುವಂತೆ ಬೆಳೆಸುತ್ತೇವೆ. ರಾಜಕೀಯ ಅಧಿಕಾರ ಅಂದರೆ ವಂಶಪಾರಂಪರ್ಯದ ಆಡಳಿತ ಅಲ್ಲ. ರಾಜಕೀಯ ಅಧಿಕಾರ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು ಎಂಬುದೇ ಬಿಜೆಪಿ ಗುರಿಯಾಗಿದೆ. ಆದರೆ, ದುರ್ದೈವದ ಸಂಗತಿ ಎಂದರೆ ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ವಂಶಪಾರಂಪರ್ಯದ ಆಡಳಿತವನ್ನಾಗಿ ಪರಿವರ್ತಿಸಿದ ಕುಖ್ಯಾತಿ ಕಾಂಗ್ರೆಸ್‍ಗೆ ಸೇರುತ್ತದೆ ಎಂದು ವಿವರಿಸಿದರು.

CONGRESS 3

ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಸಿ.ಟಿ. ರವಿ ಅವರು ರಾಷ್ಟ್ರೀಯ ಎಸ್‍ಸಿ ಮೋರ್ಚಾದ ಪ್ರಭಾರಿಗಳೂ ಆಗಿದ್ದಾರೆ. ಅವರ ನೇತೃತ್ವದಲ್ಲಿ ಇಡೀ ರಾಷ್ಟ್ರದಲ್ಲಿ ಪರಿಶಿಷ್ಟ ಜಾತಿಗಳು ಒಗ್ಗೂಡುವ ಮತ್ತು ಬಲಿಷ್ಠವಾಗಿ ಬಿಜೆಪಿಯನ್ನು ಕಟ್ಟುವ ಕೆಲಸದಲ್ಲಿ ಎಲ್ಲರೂ ಮುಂದಾಗಿದ್ದೇವೆ ಎಂದರು.

ಕರ್ನಾಟಕದಲ್ಲಿ ಎಸ್‍ಸಿ ಮೋರ್ಚಾವು ತನ್ನ ಸಂಘಟನೆಯನ್ನು ಗಟ್ಟಿಗೊಳಿಸಿದೆ. ಕಾಂಗ್ರೆಸ್ ಪಕ್ಷವು ದಲಿತರನ್ನು ದಾರಿ ತಪ್ಪಿಸುವ ಕೆಲಸ ಮಾಡಿತ್ತು. ಅವರನ್ನು ಮತಬ್ಯಾಂಕ್ ಮಾಡಿಕೊಂಡು, ಅವರನ್ನು ಜೀತದಾಳುಗಳಂತೆ ನಡೆಸಿಕೊಂಡಿತ್ತು ಎಂದು ಅವರು ಆಕ್ಷೇಪಿಸಿದರು. ಬಿಜೆಪಿ ದಲಿತ ವಿರೋಧಿ, ಸಂವಿಧಾನ ವಿರೋಧಿ, ಅಂಬೇಡ್ಕರರ ವಿರೋಧಿ ಎಂದು ಕಾಂಗ್ರೆಸ್ ಹೇಳುತ್ತಿತ್ತು. ವಿದ್ಯಾವಂತರಾದ ದಲಿತರಿಗೆ ಕಾಂಗ್ರೆಸ್ ಮಾಡಿದ ಅನ್ಯಾಯದ ಅರಿವಾಗಿದೆ. ಇದರ ಪರಿಣಾಮದಿಂದ ದಲಿತರು ತಮ್ಮ ದಾರಿಯನ್ನು ಬದಲಿಸಿಕೊಂಡಿದ್ದಾರೆ. ಇವತ್ತು ನಮ್ಮ ಜನಾಂಗಗಳು ಬಿಜೆಪಿ ಪರವಾಗಿ ನಿಂತಿವೆ ಎಂದು ತಿಳಿಸಿದರು. ಎಸ್‍ಸಿ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಗಳಾದ ಎಂ. ಕುಮಾರ್, ಪದಾಧಿಕಾರಿಗಳು, ಮುಖಂಡರು ಸಂವಾದದಲ್ಲಿ ಭಾಗವಹಿಸಿದ್ದರು.

TAGGED:bjpcongressCT Ravidalitಅಂಬೇಡ್ಕರ್ಕಾಂಗ್ರೆಸ್ದಲಿತರುಬಿಜೆಪಿರಾಜಕೀಯಸಿಟಿ ರವಿ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
9 hours ago
Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
1 day ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
1 day ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago

You Might Also Like

Farmers stage a day night protest in front of Jamkhandi Sugars Factory demanding payment of sugarcane bill 1
Bagalkot

ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಜಮಖಂಡಿ ಶುಗರ್ಸ್ ಫ್ಯಾಕ್ಟರಿ ಮುಂದೆ ರೈತರ ಅಹೋರಾತ್ರಿ ಧರಣಿ

Public TV
By Public TV
8 minutes ago
ED Conducts Raids At Residence Of DCCB Chief Manjunath Gowda In Multicrore Loan Fraud Shivamogga bengaluru
Bengaluru City

ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್‌ – 13.91 ಕೋಟಿ ಆಸ್ತಿ ಮುಟ್ಟುಗೋಲು

Public TV
By Public TV
30 minutes ago
KP Agrahara Sucide 1
Bengaluru City

ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

Public TV
By Public TV
36 minutes ago
Manjunath Bhandari
Dakshina Kannada

ಸುಹಾಸ್ ಶೆಟ್ಟಿ ಹತ್ಯೆಯಂತೆಯೇ ಅಶ್ರಫ್, ರಹಿಮಾನ್ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಮಂಜುನಾಥ ಭಂಡಾರಿ

Public TV
By Public TV
1 hour ago
Axiom 4 Mission carrying Indian Astronaut Shubhanshu Shukla delayed again postponed to June 11 1
Latest

Axiom-4 Mission | ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಮುಂದೂಡಿಕೆ

Public TV
By Public TV
1 hour ago
Kodagu Home
Districts

`ಪಬ್ಲಿಕ್ ಟಿವಿ’ ಮನವಿಗೆ ಮಿಡಿದ ಹೃದಯ – ರುಂಡ ಕತ್ತರಿಸಿದ ಬಾಲಕಿ ಕುಟುಂಬಕ್ಕೆ ಹೊಸ ಮನೆ ಹಸ್ತಾಂತರಿಸಿದ ಮಂತರ್ ಗೌಡ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?