Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ- ಕಾಂಗ್ರೆಸ್ ಪಕ್ಷ ವಂಚಕರ ಸಂತೆ: ಛಲವಾದಿ ನಾರಾಯಣಸ್ವಾಮಿ

Public TV
Last updated: August 2, 2023 4:46 pm
Public TV
Share
4 Min Read
Chalavadi Narayanaswamy
SHARE

ಬೆಂಗಳೂರು: ಸಿದ್ದರಾಮಯ್ಯರಿಂದ (Siddaramaiah) ದಲಿತರಿಗೆ ಮಹಾ ಮೋಸ ಆಗುತ್ತಿದೆ. ಕಾಂಗ್ರೆಸ್ (Congress) ಪಕ್ಷವೇ ವಂಚಕರ ಸಂತೆ ಎಂದು ಬಿಜೆಪಿ (BJP) ರಾಜ್ಯ ಎಸ್‌ಸಿ (SC) ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಟೀಕಿಸಿದರು.

ಮಲ್ಲೇಶ್ವರಂನಲ್ಲಿರುವ (Malleshwaram) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಕಡೆ ವರ್ಗಾಯಿಸಲು ನೆರವಾಗುವ ಮೂಲಕ ದಲಿತರ ಸಂಹಾರದ ನೀಚ ಕೆಲಸಕ್ಕೆ ಮಹದೇವಪ್ಪ ಮತ್ತು ಪ್ರಿಯಾಂಕ್ ಖರ್ಗೆ (Priyank Kharge) ಸಹಕಾರ ಮಾಡಿದ್ದಾರೆ. ಅವರಿಗೆ ಸ್ವಾಭಿಮಾನ ಇದ್ದರೆ ರಾಜೀನಾಮೆ ಎಸೆದು ಹೊರಕ್ಕೆ ಬರಲಿ. ಇಲ್ಲವಾದರೆ ಕಾಂಗ್ರೆಸ್ ದಲಿತ ನಾಯಕರು ಧ್ವನಿರಹಿತರು ಮತ್ತು ಬೋನ್‌ಲೆಸ್ ಎಂದು ಕರೆಯಬೇಕಾದೀತು ಎಂದು ನುಡಿದರು. ಇದನ್ನೂ ಓದಿ: ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

SIDDARAMAIAH 5

ನಾನು ಕೆಲವು ದಿನಗಳ ಹಿಂದೆ ಮಾಡಿದ್ದ ಆಪಾದನೆ ಪ್ರಮುಖವಾಗಿ ಪ್ರಕಟವಾಗಿರಲಿಲ್ಲ. ಈಗ ಅದು ಮಾಧ್ಯಮಗಳಿಂದಾಗಿ ಪ್ರಚಾರ ಪಡೆದಿದೆ. ಬಜೆಟ್‌ನ 24.1% ಹಣವನ್ನು ಎಸ್‌ಸಿ, ಎಸ್‌ಟಿ ಶ್ರೇಯೋಭಿವೃದ್ಧಿಗೆ ಬಳಸಲು ಸಿದ್ದರಾಮಯ್ಯನವರು ಒತ್ತಾಯಿಸಿದ್ದರು. ಎಸ್‌ಸಿ ಎಸ್‌ಪಿ, ಟಿಎಸ್‌ಪಿಯ ಹಣವನ್ನು 2013ರಲ್ಲಿ 7ಡಿ ನಿಯಮಾವಳಿ ಮೂಲಕ ಬೇರೆಡೆಗೆ ವರ್ಗಾಯಿಸುತ್ತಿದ್ದರು. ಬಸವರಾಜ ಬೊಮ್ಮಾಯಿಯವರು 7ಡಿ ರದ್ದು ಮಾಡಲು ಮುಂದಾಗಿದ್ದರು. ಈಗ 7 ಡಿ ರದ್ದಾಗಿದೆಯೇ ಎಂದು ಅವರೇ ಹೇಳಲಿ ಎಂದು ಸಿದ್ದರಾಮಯ್ಯನವರಿಗೆ ಸವಾಲೆಸೆದರು.

ಬಿಜೆಪಿ 40% ಕಮಿಷನ್ ನಿಲ್ಲಿಸುವ ಮೂಲಕ ಗ್ಯಾರಂಟಿ ಯೋಜನೆ ಜಾರಿ, ಅಭಿವೃದ್ಧಿ ಮಾಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದರು. 3 ಲಕ್ಷ ಕೋಟಿ ಬಜೆಟ್‌ನಲ್ಲಿ 40% ಎಂದರೆ 1.20 ಲಕ್ಷ ಕೋಟಿ ಉಳಿಯಲಿಲ್ಲವೇ? ಗ್ಯಾರಂಟಿಗೆ 50 ಸಾವಿರ ಕೋಟಿ ರೂ. ಬಳಸಿದರೆ 70 ಸಾವಿರ ಕೋಟಿ ರೂ. ಉಳಿಯುವುದಿಲ್ಲವೇ? ಅದನ್ನು ಅವರು ಅಭಿವೃದ್ಧಿಗೆ ಬಳಸಬೇಕಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮುಸ್ಲಿಂ ಮತಗಳಿಂದ ಜೆಡಿಎಸ್‌ಗೆ ಈ ಬಾರಿ ಸೋಲಾಗಿಲ್ಲ: ಸಿಎಂ ಇಬ್ರಾಹಿಂ

ಶೋಷಿತರಿಗೆ ಶಿಕ್ಷಣ, ಉದ್ಯೋಗ, ಆರೋಗ್ಯದ ಸೌಕರ್ಯ, ಶೋಷಣೆರಹಿತ ಘನತೆಯ ಬದುಕು ಬೇಕು. ನಿಮ್ಮ ಬಿಟ್ಟಿ ಅಲ್ಲ. 24.1% ಎಂದು ಮೀಸಲಿಟ್ಟು, ಅದನ್ನೆಲ್ಲ ಬೇರೆ ಇಲಾಖೆಗೆ ಕೊಟ್ಟು ದಲಿತರಿಗೆ ಕೆಟ್ಟ ಹೆಸರನ್ನು ತರುತ್ತೀರಿ. ನಾವು ಪೌರಕಾರ್ಮಿಕರನ್ನು ಖಾಯಂ ಮಾಡಿದ್ದೆವು. ನಾವು ದಲಿತರಿಗೆ ನ್ಯಾಯ ಕೊಟ್ಟಿದ್ದೇವೆ. ದಲಿತರ ಸಮಸ್ಯೆ ಮತ್ತು ವಿಚಾರ ಬಂದಾಗ ಹಕ್ಕು ಕೇಳುವ ಕೆಲಸ ಮಾಡಬೇಕು. ಇಲ್ಲವಾದರೆ ರಾಜೀನಾಮೆ ಕೊಟ್ಟು ಹೊರಕ್ಕೆ ಬನ್ನಿ ಎಂದು ಆಗ್ರಹಿಸಿದರು.

ಆಪತ್ತು ಬಂದಾಗ ಕಾಂಗ್ರೆಸ್ ಪಕ್ಷ ದಲಿತರ ಕಾರ್ಡ್ ಬಳಸುತ್ತದೆ. 2006ರಲ್ಲಿ ಖರ್ಗೆಯವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಬಳಿಕ ಪರಮೇಶ್ವರರನ್ನು ಅಧ್ಯಕ್ಷರನ್ನಾಗಿ ಮಾಡಿದ್ದರು. ಅಧಿಕಾರ ಬಂದಾಗಲೂ ದಲಿತರನ್ನು ಸಿಎಂ ಮಾಡಲಿಲ್ಲ. ಬದಲಾಗಿ ಪಕ್ಷಕ್ಕೆ ವಲಸೆ ಬಂದ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿದ್ದರು ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮೂರನೇ ಪರ್ಯಾಯ ಶಕ್ತಿ ಸ್ಥಾಪನೆಗೆ ಮುಸ್ಲಿಂ ಸಂಘಗಳ ಪ್ರವಾಸ- ಸಿಎಂ ಇಬ್ರಾಹಿಂ

ಎಐಸಿಸಿಯಲ್ಲಿ ಅಧ್ಯಕ್ಷರನ್ನಾಗಿ ಖರ್ಗೆಯವರನ್ನು ಮಾಡಿದ್ದು ಇದೇ ಕಾರಣಕ್ಕೆ. ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಾಕಿದವರು ಅಮಾಯಕರು ಎಂದು ಹೇಳಿದ್ದು, ದಲಿತ ವಿರೋಧಿಯಲ್ಲವೇ ಎಂದು ಪ್ರಶ್ನೆ ಕೇಳಿದರು. ಕೆಲವು ದಲಿತ ನಾಯಕರು ಮತ್ತು ಸಂಘಟನೆಗಳು ಪ್ಯಾಕೇಜ್ ಸಂಘಟನೆಗಳಂತಿವೆ. ದಲಿತರಿಗೆ ಅನ್ಯಾಯ ಕಂಡರೂ ಸುಮ್ಮನಿರುವ ಅವರ ಸ್ವರ ಎಲ್ಲಿ ಅಡಗಿದೆ ಎಂದು ಕೇಳಿದರು.

ಕಾಮಾಲೆ ಕಣ್ಣಿನಿಂದ ಪಕ್ಷಗಳನ್ನು ನೋಡದಿರಿ ಎಂದು ದಲಿತ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ ಅವರು, ಪ್ಯಾಕೇಜ್ ಬೆಂಬಲ ನೀಡದಿರಿ ಎಂದು ತಿಳಿಸಿದರು. ಕೆಲವು ದಲಿತ ಸಂಘಟನೆಗಳಿಗೆ ಕಾಂಗ್ರೆಸ್‌ನ ಸುಳ್ಳುಗಳೂ ಸತ್ಯ ಎನಿಸುತ್ತಿದೆ. ಕಾಂಗ್ರೆಸ್ ಸುಡುವ ಮನೆ. ದಲಿತರಿಗೆ ಭವಿಷ್ಯ ಇಲ್ಲ ಎಂದು ಡಾ. ಅಂಬೇಡ್ಕರರು ಹೇಳಿದ್ದರು. ಕೆಲವು ದಲಿತ ಸಂಘಟನೆಗಳ ಈಗಿನ ನಡೆ ಬಾಬಾಸಾಹೇಬ ಅಂಬೇಡ್ಕರರಿಗೆ ಮಾಡಿದ ಅಪಚಾರ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟಿದ್ದಕ್ಕೆ ಪಶ್ಚಾತ್ತಾಪ ಇಲ್ಲ, ಐ ಲವ್ ಮೋದಿ : ಸಿಎಂ ಇಬ್ರಾಹಿಂ

ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆದಿದೆ. ಬೆಲೆ ಏರಿಕೆ ಎಂದು ಬೊಮ್ಮಾಯಿ ಸರ್ಕಾರ ಬಂದಾಗ ಬೊಬ್ಬಿಡುತ್ತಿದ್ದ ಕಾಂಗ್ರೆಸ್ಸಿಗರು ವಸ್ತುಗಳ ಬೆಲೆ ಗಗನದಿಂದ ಆಚೆಗೆ ಹೋದ ಬಗ್ಗೆ ಚರ್ಚಿಸಲಿ ಮತ್ತು ಕಾರಣ ತಿಳಿಸಲಿ. ಹಾಲು, ವಿದ್ಯುತ್, ಹೋಟೆಲ್ ತಿಂಡಿ ತಿನಿಸು ಸೇರಿ ಎಲ್ಲ ಬೆಲೆ ಹೆಚ್ಚಾಗಿದೆ. ಕಾಂಗ್ರೆಸ್ ಬೆಲೆ ಮಾತ್ರ ಹೆಚ್ಚಾಗಿಲ್ಲ ಎಂದು ಟೀಕಿಸಿದರು.

ಈ ಸರ್ಕಾರವು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಲೇ ಬಂತು. ವರ್ಗಾವಣೆ ದಂಧೆಯ ಪಾಲು ಕೇಳಲು ದೆಹಲಿ ಸಭೆ ನಡೆದಿದೆ. ಮುಂದಿನ ಚುನಾವಣೆಗೆ ಡಬ್ಬ ತುಂಬಿಸಲು ಸಭೆ ನಡೆಸಲಾಗುತ್ತಿದೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುನ್ನಡೆದಿದೆ. ಎರಡೇ ತಿಂಗಳಲ್ಲಿ ಸಿದ್ದರಾಮಯ್ಯನವರ ಸರ್ಕಾರ ಕೆಟ್ಟ ಸರ್ಕಾರ ಎಂಬ ಹೆಸರು ಪಡೆದಿದೆ ಎಂದು ದೂರಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್: ಪ್ರಮೋದ್ ಮುತಾಲಿಕ್ ಕಿಡಿ

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಜಗದೀಶ್, ಬೆಂಗಳೂರು ನಗರ ಜಿಲ್ಲೆ ಎಸ್‌ಸಿ ಮೋರ್ಚಾ ಅಧ್ಯಕ್ಷ ಎಚ್‌ವಿ ಮಂಜುನಾಥ್ ಉಪಸ್ಥಿತರಿದ್ದರು. ಇದನ್ನೂ ಓದಿ: ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿದ್ದಾರೆ: ಖಂಡ್ರೆ, ಖರ್ಗೆ ಬಗ್ಗೆ ಆರಗ ಜ್ಞಾನೇಂದ್ರ ಅವಹೇಳನ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bjpchalavadi narayanaswamycongressdalitssiddaramaiahಕಾಂಗ್ರೆಸ್ಛಲವಾದಿ ನಾರಾಯಣಸ್ವಾಮಿದಲಿತಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Darshan Bengaluru Airport
ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
Bengaluru City Cinema Latest Main Post Sandalwood
SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories

You Might Also Like

Explosive Blast
Crime

Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

Public TV
By Public TV
23 minutes ago
Thailand Cambodia conflict
Latest

ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

Public TV
By Public TV
44 minutes ago
Rajasthan Jhalawar School Roof Collapse
Crime

Rajasthan | ಶಾಲಾ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು – ಐವರು ಶಿಕ್ಷಕರ ಅಮಾನತು

Public TV
By Public TV
1 hour ago
head master raichuru
Latest

ಮದ್ಯಪಾನ ಮಾಡಿ ಶಾಲಾ ಅಡುಗೆ ಕೋಣೆ ಮುಂದೆ ಮಲಗಿದ್ದ ಮುಖ್ಯ ಶಿಕ್ಷಕ ಅಮಾನತು

Public TV
By Public TV
3 hours ago
Madanayakanahalli Jewellery Shop Theft
Bengaluru City

Bengaluru | ಬಾಗಿಲು ಮುಚ್ಚುವ ವೇಳೆ ಗನ್ ಹಿಡಿದು ಬಂದು ಚಿನ್ನದಂಗಡಿ ದರೋಡೆ

Public TV
By Public TV
3 hours ago
Rain Holiday Students 2
Chikkamagaluru

ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?