ಕುಟುಂಬ ಸಮೇತ ಅಸ್ಸಾಂನ ಕಾಮಾಕ್ಯ ದೇವಿಯ ಹರಕೆ ತೀರಿಸಿದ ದರ್ಶನ್

Public TV
1 Min Read
Darshan to Kamakya Devi Temple

ಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

ರಾಜ್ಯದಲ್ಲಿ ಡಿ-ಫ್ಯಾನ್ಸ್, ರಮ್ಯಾ ಮತ್ತು ಒಳ್ಳೆ ಹುಡ್ಗ ಪ್ರಥಮ್ ವಿಷಯಗಳ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ನಟ ದರ್ಶನ್ ಕಾಮಾಕ್ಯ ದೇವಿ ಮೊರೆ ಹೋಗಿದ್ದಾರೆ.ಇದನ್ನೂ ಓದಿ: ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷಿö್ಮ ಇದೇ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ತೆರಳಿ ಹರಕೆ ಹೊತ್ತಿದ್ದರು. ಜೊತೆಗೆ ಕೆಲವೇ ದಿನಗಳಲ್ಲಿ ಸುಪ್ರೀಂ ತೀರ್ಪು ಬರುವ ಸಾಧ್ಯತೆಯಿದ್ದು, ದರ್ಶನ್ ಆತಂಕದಲ್ಲಿದ್ದಾರೆ. ಹೀಗಾಗಿ ಹರಕೆ ತೀರಿಸಲು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ.

ಕಳೆದ ವಾರ ಸುಪ್ರೀಂ ಕೋರ್ಟ್ನಲ್ಲಿ, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ವಾದ-ಪ್ರತಿವಾದಗಳು ನಡೆದಿದ್ದು, ಒಂದು ವಾರದಲ್ಲಿ ತೀರ್ಪು ನೀಡುವುದಾಗಿ ಕೋರ್ಟ್ ತಿಳಿಸಿತ್ತು. ಇನ್ನೂ ನಟಿ ರಮ್ಯಾ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿದಿದ್ದು, ಒಳ್ಳೆ ಹುಡ್ಗ ಪ್ರಥಮ್ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್: ಹನುಮಾನ್ ಹುಡುಗನ ಚಿತ್ರ

Share This Article