ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೀನ್ಯಾದಿಂದ ಹಿಂತಿರುಗಿದ ಮೇಲೆ ಅಭಿಮಾನಿಗಳಿಂದ ಸರ್ಪ್ರೈಸ್ ಸಿಕ್ಕಿದೆ.
ಇತ್ತೀಚೆಗೆ ದರ್ಶನ್ ‘ರಾಬರ್ಟ್’ ಚಿತ್ರೀಕರಣದಿಂದ ಬ್ರೇಕ್ ಪಡೆದುಕೊಂಡು ವೈಲ್ಡ್ ಲೈಫ್ ಫೋಟೋಗ್ರಫಿಗಾಗಿ ಕೀನ್ಯಾಗೆ ತೆರೆಳಿದ್ದರು. ಈ ವೇಳೆ ಕೀನ್ಯಾದ ಕಾಡಿನಲ್ಲಿ ಪ್ರಾಣಿ-ಪಕ್ಷಿಗಳ ಫೋಟೋವನ್ನು ಸೆರೆಹಿಡಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಹೀಗಾಗಿ ಅಭಿಮಾನಿಗಳು ಭಾನುವಾರ ತಮ್ಮ ನೆಚ್ಚಿನ ನಟನನ್ನು ನೋಡಲು ಅವರ ಮನೆ ಮುಂದೆ ಜಮಾಯಿಸಿದ್ದರು.
ಭಾನುವಾರ ರಜೆಯಿದ್ದ ಕಾರಣ ದರ್ಶನ್ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಇದ್ದರು. ಹೀಗಾಗಿ ಅಭಿಮಾನಿಗಳು ಅವರನ್ನು ಮನೆ ಮುಂದೆ ಕಾಯುತ್ತಿದ್ದರು. ಅಭಿಮಾನಿಗಳು ಕಾಯುತ್ತಿರುವುದನ್ನು ತಿಳಿದ ದರ್ಶನ್ ಅವರು ಹೊರಗೆ ಬಂದು ಅವರನ್ನು ಮಾತನಾಡಿಸಿದ್ದಾರೆ. ಅಲ್ಲದೆ ಅವರ ಜೊತೆ ಸ್ವಲ್ಪ ಸಮಯ ಕಳೆದಿದ್ದಾರೆ.
ದರ್ಶನ್ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದರು. ಇದೇ ವೇಳೆ ಕೆಲವು ಅಭಿಮಾನಿಗಳು ಅವರ ವಾಹನದ ಮೇಲೆ ದರ್ಶನ್ ಅವರ ಆಟೋಗ್ರಾಫ್ ಹಾಕಿಸಿಕೊಂಡು ಸಂತೋಷಪಟ್ಟಿದ್ದಾರೆ.
ದರ್ಶನ್ ಸಂತಸದಿಂದ ತಮ್ಮನ್ನು ನೋಡಲು ಬಂದ ಅಭಿಮಾನಿಗಳನ್ನು ಮಾತನಾಡಿಸಿ ಅವರ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ. ಸದ್ಯ ಅಭಿಮಾನಿಗಳು ದರ್ಶನ್ ಅವರ ಜೊತೆ ಕಾಲಕಳೆದ ಕ್ಷಣಗಳನ್ನು ವಿಡಿಯೋ ಮಾಡಿ ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ.
ಸದ್ಯ ಕೀನ್ಯಾದಿಂದ ವಾಪಸ್ ಆಗಿರುವ ದರ್ಶನ್ ಅಕ್ಟೋಬರ್ 2ರಿಂದ ಮತ್ತೆ ಚಿತ್ರೀಕರಣಕ್ಕೆ ಹೋಗಲಿದ್ದಾರೆ. `ರಾಬರ್ಟ್’ ಸಿನಿಮಾದ ಮುಂದಿನ ಹಂತದ ಚಿತ್ರೀಕರಣ ಉತ್ತರ ಭಾರತದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದು, ದರ್ಶನ್ಗೆ ಜೋಡಿಯಾಗಿ ಆಶಾ ಭಟ್ ಕಾಣಿಸಿಕೊಳ್ಳುತ್ತಿದ್ದಾರೆ.
Today Exclusive Video..
ಇಂದು ತೂಗುದೀಪ ನಿಲಯದ ಮುಂದೆ ನೆಚ್ಚಿನ ಆರಾಧ್ಯ ದೈವ #ಡಿಬಾಸ್ ಅವರನ್ನು ಭೇಟಿಯಾಗಲು ಬಂದ ಅಭಿಮಾನಿಗಳ ಸಾಗರ????????????????#ChallengingStarDarshan#DBoss@dasadarshan pic.twitter.com/jZIMxJMAuP
— Darshan Thoogudeepa Fans – CSDSK (@CSDSK1) September 29, 2019