ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ.
ಪಿಎಸ್ಐ ನೇಮಕಾತಿ ಪ್ರಕರಣದ ವಿಚಾರಣೆ ವೇಳೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ ದರ್ಶನ್ಗೌಡನನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು ಇಂದು ಬಂಧಿಸಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್ಸ್ಸ್ಟೇಬಲ್ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್ನನ್ನು ಬಂಧಿಸಿದ್ದಾರೆ.
ಪ್ರತ್ಯೇಕವಾಗಿ ಮೂರು ಕೇಸ್ ದಾಖಲಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬೆಂಗಳೂರಿನ ರಾಮಮೂರ್ತಿನಗರ, ಕೋರಮಂಗಲ ಠಾಣೆ, ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರತ್ಯೇಕ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: PSI ಹಗರಣದಲ್ಲಿ ಸಚಿವರ ಹೆಸರು ಥಳಕು – 80 ಲಕ್ಷ ಲಂಚ ಪಡೆದಿದ್ರಾ ಅಶ್ವತ್ಥ್ ನಾರಾಯಣ್ ಸಹೋದರ?
ಪರೀಕ್ಷೆಯಲ್ಲಿ 9ನೇ ರ್ಯಾಂಕ್ ಪಡೆದಿದ್ದ ದರ್ಶನ್ ಗೌಡ ಈ ಹಿಂದಿನ ವಿಚಾರಣೆಯಲ್ಲಿ ಸಚಿವ ಅಶ್ವಥ್ ನಾರಾಯಯಣ ಸಹೋದರ ಸತೀಶ್ ಅವರ ಹೆಸರನ್ನು ಹೇಳಿದ್ದ ಎಂದು ವರದಿಯಾಗಿತ್ತು. ಈ ವಿಚಾರ ಬೆಳಕಿಗೆ ಬಂದಂತೆ ಕಾಂಗ್ರೆಸ್ ನಾಯಕರು ಅಶ್ವಥ್ ನಾರಾಯಣ ಮೇಲೆ ಮುಗಿಬಿದ್ದು ಟೀಕೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಪಿಎಸ್ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ