ಪ್ರಚಾರದ ವೇಳೆ ಹಸುವಿನ ಹಾಲು ಕರೆದ `ಯಜಮಾನ’

Public TV
1 Min Read
darshan cow

ಮಂಡ್ಯ: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೆಆರ್ ಪೇಟೆ ಸೋಮನಹಳ್ಳಿಯಲ್ಲಿ ಹಸುವಿನ ಹಾಲು ಕರೆಯುವ ಮೂಲಕ ನೆರೆದವರ ಗಮನ ಸೆಳೆದಿದ್ದಾರೆ.

ಪ್ರಚಾರದ ವೇಳೆ ಅಭಿಮಾನಿ ಚಂದ್ರು ಅವರ ಮನೆಗೆ ಡಿ ಬಸ್ ಆಗಮಿಸಿದ್ದರು. ಈ ವೇಳೆ ಅಲ್ಲಿದ್ದ ಹಸುವಿನ ಹಾಲು ಕರೆದು ಅಭಿಮಾನಿಗಳ ಮನ ಗೆದ್ದಿದ್ದಾರೆ. ದಚ್ಚು ಸ್ವಲ್ಪವು ಮುಜುಗರ ಮಾಡಿಕೊಳ್ಳದೇ ಜನರ ನಡುವೆ ಖುಷಿಯಿಂದ ಹಸುವಿನ ಹಾಲು ಕರೆದು ಅವರು ಯಾವುದರಲ್ಲೂ ಕಮ್ಮಿ ಇಲ್ಲ ಅನ್ನೋದನ್ನ ಸಾಬೀತು ಮಾಡಿದರು.

mnd darshan 3

ಈ ಅಪರೂಪ ದೃಶ್ಯ ನೋಡಲು ಅಭಿಮಾನಿಗಳು ತಾ ಮುಂದು ನಾ ಮುಂದು ಎಂದು ಮುಗಿಬಿದ್ದಿದ್ದು, ದರ್ಶನ್ ಅವರು ಹಸುವಿನ ಕಾಲು ಕರೆಯುತ್ತಿರುವುದನ್ನು ನೋಡಿದ್ದಾರೆ. ಅದರಲ್ಲೂ ಕೆಲವರು ಈ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದುಕೊಂಡು ಡಿ ಬಾಸ್‍ಗೆ ಜೈಕಾರ ಹಾಕಿದರು.

Share This Article
Leave a Comment

Leave a Reply

Your email address will not be published. Required fields are marked *