ತುಮಕೂರು: ನಟ ದರ್ಶನ್ ಅವರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಶ್ರೀಗಳು ಶಿವೈಕೈವಾದ ಸೋಮವಾರವೇ ಗಣ್ಯರು ಬಂದು ಮಠಕ್ಕೆ ಅಂತಿಮ ದರ್ಶನ ಪಡೆದಿದ್ದರು. ಇಂದು ಕೂಡ ಭಕ್ತರು ಲಕ್ಷಾನುಗಟ್ಟಲೆ ಬಂದು ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಶ್ರೀಗಳ ಅಗಲಿಕೆಯಿಂದ ಸ್ಯಾಂಡಲ್ವುಡ್ ಸ್ಟಾರ್ ಗಳು ಕೂಡ ಕಂಬನಿ ಮಿಡಿದಿದ್ದರು. ಕಳೆದ ದಿನವೇ ನಟ ಪುನೀತ್ ರಾಜ್ಕುಮಾರ್ ಶ್ರೀಗಳ ಅಂತಿಮ ದರ್ಶನ ಪಡೆದಿದ್ದರು.
ಕಾಯಕಯೋಗಿ, ಶತಾಯುಷಿ, ನಡೆದಾಡುವ ದೇವರು
ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದ @dasadarshan 🙏 pic.twitter.com/B82dk2BfNy— Darshan Fans – KKDFA (@DarshanFanz) January 22, 2019
ಇಂದು ಬೆಳಗ್ಗೆ ನಟ ದರ್ಶನ್ ಅವರು ಮಠಕ್ಕೆ ಬಂದು ಶ್ರೀಗಳು ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಅಲ್ಲಿದ್ದ ಹಿರಿಯ ಸ್ವಾಮೀಜಿಗಳ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದು, ಕಿರಿಯ ಸ್ವಾಮೀಜಿ ಅವರನ್ನು ಮಾತನಾಡಿಸಿದ್ದಾರೆ. ನಟ ದರ್ಶನ್ ಮಾತ್ರವಲ್ಲದೇ ನಟ ಇಂದ್ರಜೀತ್ ಲಂಕೇಶ್ ಕೂಡ ಬಂದು ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ.
ಸೋಮವಾರ ಶ್ರೀಗಳು ಶಿವೈಕ್ಯ ಮಾಹಿತಿ ತಿಳಿದ ದರ್ಶನ್, “ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಇಹಲೋಕ ತ್ಯಜಿಸಿರುವುದು ಬಹಳ ನೋವಿನ ಸಂಗತಿ. ಇಷ್ಟು ದಿನ ಭಕ್ತರ ದರ್ಶನಕ್ಕೆ ಅವರಿದ್ದರು, ಈಗ ದೈಹಿಕವಾಗಿ ನಮ್ಮನ್ನು ಅಗಲಿದರೂ ಎಲ್ಲರ ಮನೆ ಮನಗಳಲ್ಲಿ ಅವರು ಭದ್ರವಾಗಿ ನೆಲೆಸಿದ್ದಾರೆ” ಎಂದು ಟ್ವೀಟ್ ಮಾಡಿ ಶ್ರೀಗಳು ಫೋಟೋ ಹಾಕಿ ಸಂತಾಪ ಸೂಚಿಸಿದ್ದರು.
ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಇಹಲೋಕ ತ್ಯಜಿಸಿರುವುದು ಬಹಳ ನೋವಿನ ಸಂಗತಿ. ಇಷ್ಟು ದಿನ ಭಕ್ತರ ದರ್ಶನಕ್ಕೆ ಅವರಿದ್ದರು, ಈಗ ದೈಹಿಕವಾಗಿ ನಮ್ಮನ್ನು ಅಗಲಿದರೂ ಎಲ್ಲರ ಮನೆ ಮನಗಳಲ್ಲಿ ಅವರು ಭದ್ರವಾಗಿ ನೆಲೆಸಿದ್ದಾರೆ pic.twitter.com/liyxAOPvEo
— Darshan Thoogudeepa (@dasadarshan) January 21, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv