ಪ್ರಚಾರದ ನಡುವೆಯೂ ಮುಖ್ಯ ವ್ಯಕ್ತಿಯನ್ನು ನೆನೆದ ದರ್ಶನ್

Public TV
1 Min Read
DARSHAN MONEY copy

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರವಾಗಿ ಪ್ರಚಾರ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಪ್ರಚಾರದ ನಡುವೆಯೂ ಅವರು ವರನಟ ಡಾ. ರಾಜ್‍ಕುಮಾರ್ ಅವರನ್ನು ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ.

ದರ್ಶನ್ ತಮ್ಮ ಟ್ವಿಟ್ಟರಿನಲ್ಲಿ, “ಕಲೆಯನ್ನೇ ಉಸಿರಾಗಿಸಿಕೊಂಡು ಕನ್ನಡ ಚಿತ್ರರಂಗಕ್ಕೆ ಆಲದ ಮರದ ನೆರಳಿನಂತೆ ನೆರವಾದ ಅಣ್ಣಾವ್ರ ಪುಣ್ಯ ತಿಥಿ ಇಂದು. ಸದಾ ನಮ್ಮೊಂದಿಗೆ ಡಾ|| ರಾಜ್” ಎಂದು ರಾಜ್‍ಕುಮಾರ್ ಅವರ ಫೋಟೋ ಹಾಕಿಕೊಂಡಿದ್ದಾರೆ.

ಶುಕ್ರವಾರ ವರನಟ ಡಾ. ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಡೀ ಕುಟುಂಬ ಅಭಿಮಾನಿಗಳ ಜೊತೆ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಿದ್ದರು. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಏಪ್ರಿಲ್ 24ರಂದು ಉಡುಗೊರೆ ರೂಪದಲ್ಲಿ `ಅಪ್ಪನ ಅಂಗಿ’ ಸಿನಿಮಾ ಸೆಟ್ಟೇರಲಿದೆ.

ಶುಕ್ರವಾರ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ಮೂವರು ಸೋದರರು ಕುಟುಂಬ ಸಮೇತರಾಗಿ ತಂದೆ-ತಾಯಿಯ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಮನೆಯಲ್ಲಿಯೂ ಅಭಿಮಾನಿಗಳ ಜೊತೆಯಲ್ಲಿ ರಾಜ್‍ಕುಮಾರ್ ಮಕ್ಕಳು ಪೂಜೆ ಸಲ್ಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *