Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?

Belgaum

ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?

Public TV
Last updated: August 27, 2024 8:11 am
Public TV
Share
3 Min Read
Darshan Hindalaga jail Belagavi
SHARE

– ನಟೋರಿಯಸ್ ಕೈದಿಗಳನ್ನಿರಿಸಲು 36 ಕತ್ತಲೆ ಕೋಣೆ

ಬೆಳಗಾವಿ: ಕೊಲೆ ಆರೋಪಿ ದರ್ಶನ್‌ಗೆ (Darshan) ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ್&ಗ್ಯಾಂಗ್‌ಗೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಅನ್ನು ನಟೋರಿಯಸ್ ಕೈದಿಗಳು ಇರುವ ಬೆಳಗಾವಿಯ (Belagavi) ಹಿಂಡಲಗಾ ಜೈಲಿಗೆ (Hindalaga Jail)  ಶಿಫ್ಟ್ ಮಾಡುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಕೊಲೆ ಆರೋಪಿ, ಕಿಲ್ಲಿಂಗ್ ಸ್ಟಾರ್ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಜಾಲಿ ಲೈಫ್ ನಡೆಸುತ್ತಿದ್ದಾರೆ. ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವ ಫೋಟೋ ಮತ್ತು ವೀಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪರಪ್ಪನ ಅಗ್ರಹಾರದ ಕರಾಳ ಮುಖ ಮತ್ತೊಮ್ಮೆ ಬಯಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿಯಾಗಿ ಬದುಕುತ್ತಿದ್ದ ದರ್ಶನ್ ಹಾಗೂ ಗ್ಯಾಂಗ್‌ಗೆ ಸಂಕಷ್ಟ ಫಿಕ್ಸ್ ಆಗಿದೆ. ಹಿಂಡಲಗಾ ಜೈಲಿನ `ಅಂಧೇರಿ’ ಸೆಲ್‌ಗಳಿಗೆ ಈ ಗ್ಯಾಂಗ್ ಶಿಫ್ಟ್ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ – ಇಂದು ನಗರದಲ್ಲಿ ಟ್ರಾಫಿಕ್‌ ಸಮಸ್ಯೆಯಾಗುವ ಸಾಧ್ಯತೆ

darshan wilson garden naga

ಕರ್ನಾಟಕದ ಜೈಲುಗಳು ಅಂದರೆ ನೆನಪಾಗೋದೇ ಬೆಂಗಳೂರಿನ ಬಳಿ ಇರುವ ಪರಪ್ಪನ ಅಗ್ರಹಾರ ಮತ್ತು ಬೆಳಗಾವಿಯ ಹಿಂಡಲಗಾ ಜೈಲು ಅಥವಾ ಹಿಂಡಲಗಾ ಕೇಂದ್ರ ಕಾರಾಗೃಹ. ಸ್ಟಾರ್ ಎನಿಸಿಕೊಂಡವರು, ಪ್ರಭಾವಿಗಳು ಈ ಜೈಲುಗಳ ಊಟ ಉಂಡ ಎಷ್ಟೋ ಉದಾಹರಣೆಗಳಿವೆ. ಇದೀಗ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರದಿಂದ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಫೋಟೋ ಹಾಗೂ ವೀಡಿಯೋ ವೈರಲ್ ಬೆನ್ನಲ್ಲೇ ದರ್ಶನ್ ಮತ್ತು ಗ್ಯಾಂಗ್ ಅನ್ನು ಅನ್ಯ ಜಿಲ್ಲೆಯ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸೂಚನೆ ನೀಡಿದ್ದಾರೆ. ಒಂದು ವೇಳೆ ಕೊಲೆ ಆರೋಪಿ ದರ್ಶನ್ ಬೆಳಗಾವಿ ಜೈಲಿಗೆ ದಾಖಲಾದರೆ ಹಿಂಡಲಗಾ ಜೈಲು ಸೇರಿದ ಮೊದಲ ನಟ ಎಂಬ ಕುಖ್ಯಾತಿಗಳಿಸಲಿದ್ದಾರೆ. ಸ್ವಾತಂತ್ರ‍್ಯ ಹೋರಾಟಗಾರರು, ರಾಜಕೀಯ ಕೈದಿಗಳು ಇತರೆ ಕೈದಿಗಳು ಈ ಜೈಲಿನಲ್ಲಿದ್ದರು. ಇದನ್ನೂ ಓದಿ: Bengaluru | ನಟ ದರ್ಶನ್‌ಗೆ ಜೈಲಲ್ಲಿ ರೌಡಿಗಳ ನಂಟು – ದರ್ಶನ್‌ ಮೇಲೆ‌ ಮತ್ತೆರಡು ಎಫ್‌ಐಆರ್‌!

Darshan 03

ರಾಜ್ಯದಲ್ಲಿ ಗಲ್ಲಿಗೇರಿಸುವ ಏಕೈಕ ಜೈಲು ಎಂದರೆ ಬೆಳಗಾವಿ ಹಿಂಡಲಗಾ ಜೈಲು. ನಟೋರಿಯಸ್ ಕೈದಿಗಳನ್ನು ಇಡಲು 36 ಕತ್ತಲು ಕೋಣೆಯ ವ್ಯವಸ್ಥೆ ಬೆಳಗಾವಿ ಜೈಲಿನಲ್ಲಿದೆ. ಅದರಲ್ಲಿ 15 ಕೋಣೆಗಳು ಖಾಲಿ ಇದೆ. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವರು ಸೆರೆವಾಸ ಅನುಭವಿಸಿದ್ದಾರೆ. ಇದನ್ನೂ ಓದಿ: ಮೋದಿ ಉದ್ಘಾಟಿಸಿದ್ದ ಶಿವಾಜಿ ಮಹರಾಜ್‌ ಪ್ರತಿಮೆ 1 ವರ್ಷ ಪೂರ್ಣಗೊಳ್ಳುವ ಮುನ್ನವೇ ಕುಸಿತ!

ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಫ್ಟ್ ಮಾಡಿದರೆ ಆಗುವ ಸಾಧಕಬಾಧಕ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಈ ಮಧ್ಯೆ ಜೈಲಿನಲ್ಲಿನ ಸೆಕ್ಯುರಿಟಿ ಕುರಿತು ಕೂಡ ಮಾಹಿತಿ ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಗುಡ್ & ಬ್ಯಾಡ್ ಟಚ್ ಸೆಷನ್‌ನಲ್ಲಿ ಕರಾಳ ಅನುಭವ ಬಿಚ್ಚಿಟ್ಟ ವಿದ್ಯಾರ್ಥಿನಿ – ಮುಂದಾಗಿದ್ದೇನು?

ಒಟ್ಟಿನಲ್ಲಿ ಬೆಳಗಾವಿ ಹಿಂಡಲಗಾ ಜೈಲು ಈಗಾಗಲೇ ಅನೇಕ ಅಪಖ್ಯಾತಿಯಿಂದ ಸುದ್ದಿಯಲ್ಲಿತ್ತು. ಈಗ ಕೊಲೆ ಆರೋಪಿ ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುತ್ತಾರಾ ಎಂಬ ಚರ್ಚೆ ಜೋರಾಗಿದೆ. ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕುಖ್ಯಾತ ಕೈದಿಗಳಿದ್ದಾರೆ. ಹೀಗಿರುವಾಗ ದರ್ಶನ್&ಗ್ಯಾಂಗ್ ಬಂದರೆ ಹೇಗೆ ಎಂದು ಜೈಲು ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದಾರೆ. ಇದನ್ನೂ ಓದಿ: Telegram Ban | ಭಾರತದಲ್ಲಿ ಬ್ಯಾನ್ ಆಗುತ್ತಾ ಟೆಲಿಗ್ರಾಂ ಆ್ಯಪ್?

TAGGED:belagavidarshanhindalaga jailRenukaswamy Murder caseದರ್ಶನ್ಬೆಳಗಾವಿಹಿಂಡಲಗಾ ಜೈಲು
Share This Article
Facebook Whatsapp Whatsapp Telegram

Cinema news

Dileep Chinmayi Sripada
ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ
Cinema Latest Top Stories
Suri Annas Nee Nanna Devi song release 2
ಸೂರಿ ಅಣ್ಣನ ನೀ ನನ್ನ ದೇವತೆ ಸಾಂಗ್ ರಿಲೀಸ್
Cinema Latest Sandalwood
Alpha Movie
ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Cinema Latest Sandalwood Top Stories
javara movie
ದುನಿಯಾ ವಿಜಯ್ ಮಗಳ ಹೊಸ ಚಿತ್ರಕ್ಕೆ ಮುಹೂರ್ತ: ರಿಷಿ ನಾಯಕ
Cinema Latest Sandalwood Top Stories

You Might Also Like

Bengaluru Family Suicide
Bengaluru City

ಸಾಲದ ಸುಳಿಗೆ ಸಿಲುಕಿ ಮಗಳು, ಮೊಮ್ಮಗ ಆತ್ಮಹತ್ಯೆ – ಸಾವು ಕಂಡ ಅಜ್ಜಿ ಹೃದಯಾಘಾತದಿಂದ ಕೊನೆಯುಸಿರು

Public TV
By Public TV
3 minutes ago
Byrathi Suresh
Belgaum

ಸಿಎ ಸೈಟ್‌ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ; 5 ವರ್ಷಕ್ಕೆ ಹೆಚ್ಚಿಸುವ ಭರವಸೆ

Public TV
By Public TV
28 minutes ago
Priyank Kharge 1
Districts

2023ರ ಚುನಾವಣೆ ವೇಳೆ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ – ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ನೋಟಿಸ್

Public TV
By Public TV
37 minutes ago
Starlink
Latest

ಭಾರತಕ್ಕೆ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ – ತಿಂಗಳಿಗೆ 8,600 ರೂ. ಪ್ಯಾಕ್‌ ಬಿಡುಗಡೆ

Public TV
By Public TV
56 minutes ago
PM Modi 1
Latest

ರಾಷ್ಟ್ರವನ್ನು ಒಗ್ಗೂಡಿಸಿದ್ದರಿಂದ ಜನರು ವಂದೇ ಮಾತರಂಗೆ ಋಣಿಯಾಗಿರಬೇಕು: ಮೋದಿ

Public TV
By Public TV
1 hour ago
Suryakumar Yadav
Cricket

ಸಾಕಷ್ಟು ಅವಕಾಶ ಕೊಟ್ಟಿದ್ದೇವೆ, ಯಾವ್ದೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡೋಕೆ ರೆಡಿ ಇರ್ಬೇಕು: ಸಂಜು ಬಗ್ಗೆ ಸೂರ್ಯ ಮಾತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?