ಸ್ಯಾಂಡಲ್ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರವಾಗಿ ಅರೆಸ್ಟ್ ಆಗಿದ್ದಾರೆ. ಇದೀಗ ಬೇಸರದಲ್ಲಿರುವ ಅಭಿಮಾನಿಗಳಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಧೈರ್ಯ ತುಂಬಿದ್ದಾರೆ. ತಾಳ್ಮೆಯಿಂದ ಇರಿ, ನ್ಯಾಯಾಲಯದ ಮೇಲೆ ನಂಬಿಕೆ ಇಡಿ ಎಂದು ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ರಾಬರ್ಟ್’ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

View this post on Instagram
ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ ಎಂದು ದರ್ಶನ್ ಪತ್ನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಅಂದಹಾಗೆ, ದರ್ಶನ್ ಮತ್ತು ವಿಜಯಲಕ್ಷ್ಮಿ 2003ರಲ್ಲಿ ಮದುವೆಯಾದರು. ಈ ಜೋಡಿಗೆ ವಿನೀಶ್ ಎಂಬ ಮಗನಿದ್ದಾನೆ.

