ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಖ್ಯಾತ ನಟ ದರ್ಶನ್ ಜೈಲು ಸೇರಿದ್ದಾರೆ. ಕಳೆದ ಒಂದು ತಿಂಗಳಿಂದ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ರನ್ನು (Darshan) ನೋಡಲು 4ನೇ ಬಾರಿ ಪತ್ನಿ ವಿಜಯಲಕ್ಷ್ಮಿ ಬಂದಿದ್ದಾರೆ. ಅತ್ತಿಗೆ ಜೊತೆ ತಮ್ಮ ದಿನಕರ್ ತೂಗುದೀಪ್ ಕೂಡ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ಕುಮಾರ್
ದರ್ಶನ್ ಜೈಲಿಗೆ ಹೋದ ಬಳಿಕ ಹೆಚ್ಚಿನ ಕಾಳಜಿ ವಹಿಸಿ ಪ್ರಕರಣದ ಹೋರಾಟದ ಜವಾಬ್ದಾರಿಯನ್ನು ಪತ್ನಿ ವಿಜಯಲಕ್ಷ್ಮಿ ತೆಗೆದುಕೊಂಡಿದ್ದಾರೆ. ಇದೀಗ ಪ್ರಕರಣದ ಕುರಿತು ಚರ್ಚಿಸಲು ಮತ್ತು ದರ್ಶನ್ರನ್ನು ನೋಡಲು ವಿಜಯಲಕ್ಷ್ಮಿ ಮತ್ತು ದಿನಕರ್ (Dinakar) ಜೊತೆ ಅಕ್ಕನ ಮಗ ಚಂದನ್ ಕೂಡ ಭೇಟಿ ನೀಡಿದ್ದಾರೆ.
ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಇರುತ್ತದೆ.