Tharun Sonal Wedding: ದರ್ಶನ್ ಅನುಪಸ್ಥಿತಿ ಬೇಸರವಾಗ್ತಿದೆ- ತರುಣ್ ಸುಧೀರ್

Public TV
1 Min Read
Tarun

ನಿರ್ದೇಶಕ ತರುಣ್ ಸುಧೀರ್ (Tarun Sudhir) ಮತ್ತು ಸೋನಲ್‍ (Sonal) ಮದುವೆ (Marriage) ಆಗೋಕೆ ಕಾರಣವೇ ನಟ ದರ್ಶನ್. ಅಂದುಕೊಂಡಂತೆ ಆಗಿದ್ದರೆ ದರ್ಶನ್ ಮುಂದೆ ನಿಂತು ಈ ಜೋಡಿಯ ಮದುವೆ ಮಾಡಬೇಕಿತ್ತು. ಇವರ ಮದುವೆ ನಿಶ್ಚಿಯ ಮಾಡಿ ಕೊಲೆ ಕೇಸ್‍ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡರು ದರ್ಶನ್. ಈ ಮದುವೆಗೆ ದರ್ಶನ್ (Darshan) ಬರ್ತಾರೆ ಅನ್ನೋ ಮಾತು ಸುಳ್ಳಾಯಿತು ಹಾಗಾಗಿ ಅವರ ಅನುಪಸ್ಥಿತಿ ಬೇಸರ ತರಿಸಿದೆ ಎಂದಿದ್ದಾರೆ ತರುಣ್ ಸುಧೀರ್.

Tharun Sonal Wedding 1 1

ಮದುವೆಯ ಈ ಸಂಭ್ರಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ತರುಣ್, `ಹೊಸ ಜೀವನ ಹೊಸ ಹುರುಪಿದೆ. ಇಷ್ಟು ದಿನ ಕಾದಿದ್ದಕ್ಕೂ ಬೇಸ್ಟ್ ಕೊಟ್ಟಿದಾರೆ ದೇವ್ರು. ತುಂಬಾ ಜನ ಬಂದು ವಿಶ್ ಮಾಡಿದ್ರು ಎಲ್ಲರೂ ತಮ್ಮನ ಥರ ಕುಟುಂಬದ ಥರ ಬಂದು ಹಾರೈಸಿದ್ರು ಎಂದಿದ್ದಾರೆ.

Tharun Sonal Wedding 2

ದರ್ಶನ್ ಅನುಪಸ್ಥಿತಿ ಬಗ್ಗೆಯೂ ಮಾತನಾಡಿದ ತರುಣ್, `ಲಗ್ನ ಪತ್ರಿಕೆ ಬರೆಸುವ ಮುಂಚೆ ಡೇಟ್ ಕನ್ಪರ್ಮ್ ಆಗಿತ್ತು. ಡೇಟ್ ಚೇಂಜ್ ಮಾಡ್ಬೇಡ ಮದ್ವೆ ಮಾಡ್ಕೊ ಅಂದ್ರು ದರ್ಶನ್. ಆಗಸ್ಟ್ 11 ಡೇಟ್ ಕೊಟ್ಟಿದ್ವಿ. ಅವರು ಹೇಳಿದಂತೆ ಮದುವೆ ಆಗ್ತಿದ್ದೇವೆ. ದರ್ಶನ್ ಅವ್ರ ಅನುಪಸ್ಥಿತಿ ಬೇಸರ ಅನ್ನಿಸ್ತಿದೆ’ ಎಂದು ದರ್ಶನ್ ಬಗ್ಗೆ ಮಾತಾಡ್ತಾ ಭಾವುಕರಾದ ತರುಣ್ ಸುಧೀರ್.

ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮದುವೆ ಇಂದು ಬೆಳಗ್ಗೆ 10.50ಕ್ಕೆ ಬೆಂಗಳೂರಿನ ಪೂರ್ಣಿಮಾ ಪಾಲೇಸ್‍ ನಲ್ಲಿ ನಡೆಯಿತು. ಚಿತ್ರರಂಗದ ಅನೇಕ ಗಣ್ಯರ ಮತ್ತು ಕುಟುಂಬದ ಸಮ್ಮುಖದಲ್ಲಿ ಈ ಜೋಡಿ ಹೊಸ ಜೀವನಕ್ಕೆ ಕಾಲಿಟಿತು. ತಾಳಿ ಕಟ್ಟೋ ವೇಳೆ ನಟಿ ಸೋನಲ್ ಭಾವುಕರಾಗಿದ್ದರು.

 

ತರುಣ್ -ಸೋನಲ್ ಮದುವೆಗೆ ಅದ್ದೂರಿ ಧಾರೆ ಮಂಟಪ ಸೆಟ್ ಹಾಕಲಾಗಿದೆ. ದಕ್ಷಿಣ ಭಾರತ ಶೈಲಿಯಲ್ಲಿ ಕಲ್ಯಾಣ ಮಂಟಪದ ಅಲಂಕಾರ ಮಾಡಲಾಗಿದೆ.  ಪ್ರವೇಶ ದ್ವಾರದಲ್ಲಿ ಮಹಾದ್ವಾರದ ಮಾದರಿ ಅಲಂಕಾರ ಮಾಡಲಾಗಿತ್ತು.  ವಿಷ್ಣುವಿನ ದಶಾವತಾರಗಳ ಮಧ್ಯೆ ಕಮಲ ಮಂಟಪದ ಸಿದ್ದತೆ ಮಾಡಿದ್ದು ವಿಶೇಷವಾಗಿತ್ತು.

Share This Article