Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

Karnataka

ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

Public TV
Last updated: October 2, 2025 8:44 am
Public TV
Share
3 Min Read
Mysuru Dasara Jambu savari
SHARE

-415ನೇ ದಸರಾ ಮಹೋತ್ಸವಕ್ಕೆ ಸಜ್ಜಾದ ಮೈಸೂರು
-ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕೌಂಟ್‌ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಜಂಬೂಸವಾರಿ ವೀಕ್ಷಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ.ಇದನ್ನೂ ಓದಿ: ವಿಜಯ ದಶಮಿ| ದುರ್ಗಾ ನಮಸ್ಕಾರ ಪೂಜೆ ಮಾಡೋದರ ಉದ್ದೇಶ ಏನು?

415ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ಬೆಳಗ್ಗೆ 9:30ರಿಂದ 10ಕ್ಕೆ ಪಟ್ಟದ ಆನೆ, ಕುದುರೆ, ಹಸು ಮತ್ತು ಖಾಸಾ ಆಯುಧಗಳೊಂದಿಗೆ ಅರಮನೆ ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ ಬೆಳಗ್ಗೆ 9:45ಕ್ಕೆ ವಜ್ರಮುಷ್ಠಿ ಕಾಳಗ ನಡೆಯಲಿದೆ. ಬೆಳಗ್ಗೆ 10:50ರಿಂದ 11:10ಕ್ಕೆ ಬನ್ನಿಪೂಜೆ ನಡೆಯಲಿದೆ. ಬಳಿಕ ಅರಮನೆ ಅಂಗಳದಲ್ಲಿರುವ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ನಡೆಯಲಿದೆ. ಬಳಿಕ ವಿಜಯಯಾತ್ರೆ ಅರಮನೆಗೆ ವಾಪಸ್ಸಾಗಲಿದೆ.

Mysuru Dasara Jamboo Savari

ಬೆಳಗ್ಗೆ 10ರಿಂದ 10:30ರ ಸುಮಾರಿಗೆ ಚಾಮುಂಡಿಬೆಟ್ಟದಿಂದ ತಾಯಿ ವಿಗ್ರಹ ಅರಮನೆಗೆ ಬರಲಿದೆ. ಮಧ್ಯಾಹ್ನ 1ರಿಂದ 1:8ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:40ರ ಬಳಿಕ ಚಿನ್ನದ ಅಂಬಾರಿ ಕಟ್ಟಲಾಗುತ್ತೆ. ಸಂಜೆ 4:42ರಿಂದ 5:06 ಗಂಟೆಗೆ ಪುಷ್ಪಾರ್ಚನೆ ನೆರವೇರಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ನಡೆಯಲಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಲಿದೆ.

ಇನ್ನು ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲು ರೆಡಿಯಾಗಿದ್ದು, ಸತತ ಆರನೇ ಬಾರಿಗೆ ರಾಜಗಾಂಭೀರ್ಯದಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಅಭಿಮನ್ಯು ಸೇರಿ ಇತರ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. ಇದನ್ನೂ ಓದಿ: Navratri 2025: ವಿಜಯದಶಮಿಯ ಪೌರಾಣಿಕ ಮಹತ್ವವೇನು?

ದಸರಾ ಗಜಪಡೆ
ಅಂಬಾರಿ ಆನೆ : ಕ್ಯಾಪ್ಟನ್ ಅಭಿಮನ್ಯು, 59 ವರ್ಷ, 6ನೇ ಬಾರಿ ಅಂಬಾರಿ
ಕುಮ್ಕಿ ಆನೆ : ಕಾವೇರಿ ಮತ್ತು ರೂಪ
ನಿಶಾನೆ ಆನೆ : ಧನಂಜಯ , 45 ವರ್ಷ
ನೌಪತ್ ಆನೆ : ಗೋಪಿ, 42 ವರ್ಷ
ಸಾಲಾನೆ : ಭೀಮ, 25 ವರ್ಷ
ಪಟ್ಟದ ಆನೆ : ಶ್ರೀಕಂಠ ಮತ್ತು ಲಕ್ಷ್ಮಿ
ಸಾಲಾನೆಗಳು: ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.

ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 60 ಸಾವಿರಕ್ಕೂ ಹೆಚ್ಚು ಜನರಿಗೆ ದಸರಾ ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಆವರಣದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇತ್ತೀಚಿನ ಕೆಲ ಕಾಲ್ತುಳಿತ ಅವಘಢ ಹಿನ್ನೆಲೆ ಸರ್ಕಾರ ಮತ್ತು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ವೀಕ್ಷಕರ ಸಂಖ್ಯೆ ಇಳಿಕೆ ಮಾಡಿದೆ. ಅಲ್ಲದೇ ಒಳಭಾಗದಲ್ಲಿ ಪೊಲೀಸ್ ಭದ್ರತೆ ಕೂಡ ಹೆಚ್ಚು ಮಾಡಿದೆ. ಇನ್ನೂ ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ದಸರಾ ವೀಕ್ಷಣೆಗೆ ಅವಕಾಶ ನೀಡಿಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

Pushparchane Siddaramaiah

ಬೆಳಗ್ಗೆ 11ಗಂಟೆ ನಂತರ ಪಾಸ್ ಹೊಂದಿರುವ ಸಾರ್ವಜನಿಕರಿಗೆ ಅರಮನೆ ಪ್ರವೇಶ ನೀಡಲಾಗುತ್ತೆ. ಈಗಾಗಲೇ ನಗರ ವ್ಯಾಪ್ತಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆಯಾಗಿದ್ದು, ಅಂಬಾರಿ ಸಾಗುವ ರಾಜಮಾರ್ಗ ಸೇರಿದಂತೆ ನಗರ ವ್ಯಾಪ್ತಿ ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕೂ ರಸ್ತೆಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮವಹಿಸಲಾಗಿದೆ.

ಒಟ್ಟಾರೆ ಜಂಬೂಸವಾರಿಗೆ ಸಕಲ ಸಿದ್ಧತೆಗಳೆಲ್ಲಾ ಆಗಿದ್ದು, ಅಂಬಾರಿ ಹೊತ್ತು ಸಾಗುವ ಅಭಿಮನ್ಯು ರಾಜಗಾಂಭೀರ್ಯತೆಯೊಂದಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದಕ್ಕೂ ಜನ ಕಾತುರದಿಂದ ಕಾಯುತ್ತಿದ್ದಾರೆ.ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಕೌಂಟ್ ಡೌನ್ – ಭರದಿಂದ ಸಾಗಿದ ತಯಾರಿ

TAGGED:Dasara 2025Jambu Savarimysurumysuru dasaraಅಂಬಾರಿಅರಮನೆ ನಗರಿಜಂಬೂಸವಾರಿಜಂಬೂಸವಾರಿ 2025ದಸರಾ 2025ಮೈಸೂರುಮೈಸೂರು ದಸರಾ
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

RCB 7
Cricket

ಹ್ಯಾರಿಸ್‌, ಮಂಧಾನ ಆರ್ಭಟಕ್ಕೆ ವಾರಿಯರ್ಸ್‌ ಬರ್ನ್‌ – ಭರ್ಜರಿ ಜಯದೊಂದಿಗೆ ಫೈನಲ್‌ಗೆ RCB ಎಂಟ್ರಿ!

Public TV
By Public TV
6 hours ago
DK Shivakumar 9
Bengaluru City

ಜಿ ರಾಮ್‌ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಕೆಶಿ

Public TV
By Public TV
6 hours ago
Captain Sumit Kapoor
Latest

ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌ – ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

Public TV
By Public TV
7 hours ago
veerendra puppy
Bengaluru City

ಅಕ್ರಮ ಆನ್‌ಲೈನ್ ಬೆಟ್ಟಿಂಗ್ | ವೀರೇಂದ್ರ ಪಪ್ಪಿಗೆ ಇಡಿ ಶಾಕ್ – 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
7 hours ago
Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
7 hours ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?