ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಗಜಪಡೆಯ ತೂಕ ಪರಿಶೀಲಿಸಲಾಗಿದೆ.
ನಗರದ ದೇವರಾಜ ಮೊಹಲ್ಲಾದ ಸಾಯಿರಾಮ್ & ಕೊ ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ಗಜಪಡೆಯ ತೂಕ ಪರಿಶೀಲನೆ ನಡೆದಿದೆ. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅರ್ಜುನ- 5,800 ಕೆ.ಜಿ ಇದ್ದರೆ, ವರಲಕ್ಷ್ಮಿ- 3,510 ಕೆ.ಜಿ, ಈಶ್ವರ- 3,995 ಕೆ.ಜಿ, ಧನಂಜಯ- 4,460 ಕೆ.ಜಿ, ವಿಜಯ- 2,825 ಕೆ.ಜಿ ಹಾಗೂ ಅಭಿಮನ್ಯು- 5,145 ಕೆ.ಜಿ ಇದೆ.
- Advertisement 2
- Advertisement 3
ಸೋಮವಾರ ಮೈಸೂರು ಅರಮನೆಗೆ ಮೊದಲ ತಂಡದ ಆರು ಆನೆಗಳು ಆಗಮಿಸಿದ್ದವು. ಜಿಲ್ಲಾಡಳಿತ ಸಾಂಪ್ರದಾಯಿಕವಾಗಿ ಆನೆಗಳನ್ನು ಬರ ಮಾಡಿಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಗಜಪಡೆಗೆ ಪೂಜೆ ನಡೆದಿದೆ.
- Advertisement 4
ಅರ್ಜುನನ ನೇತೃತ್ವದ ಆನೆಗಳ ತಂಡಕ್ಕೆ ಸಾಂಪ್ರದಾಯಿಕ ಪೂಜೆ ನಡೆದಿದ್ದು, ಸೋಮವಾರ ಒಂದೂವರೆ ತಿಂಗಳ ಕಾಲ ಆನೆಗಳು ಅರಮನೆಯಲ್ಲೇ ಉಳಿಯಲಿದೆ. ಸೋಮವಾರ ಮಧ್ಯಾಹ್ನ 12ಕ್ಕೆ ಅಭಿಜಿನ್ ಲಗ್ನದಲ್ಲಿ ಗಜಪಡೆಗೆ ಸ್ವಾಗತ ಮಾಡಲಾಗಿದೆ.