Districts
ಅರ್ಜುನ ನೇತೃತ್ವದ ದಸರಾ ಗಜಪಡೆಯ ತೂಕ ಪರಿಶೀಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಗಜಪಡೆಯ ತೂಕ ಪರಿಶೀಲಿಸಲಾಗಿದೆ.
ನಗರದ ದೇವರಾಜ ಮೊಹಲ್ಲಾದ ಸಾಯಿರಾಮ್ & ಕೊ ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ಗಜಪಡೆಯ ತೂಕ ಪರಿಶೀಲನೆ ನಡೆದಿದೆ. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅರ್ಜುನ- 5,800 ಕೆ.ಜಿ ಇದ್ದರೆ, ವರಲಕ್ಷ್ಮಿ- 3,510 ಕೆ.ಜಿ, ಈಶ್ವರ- 3,995 ಕೆ.ಜಿ, ಧನಂಜಯ- 4,460 ಕೆ.ಜಿ, ವಿಜಯ- 2,825 ಕೆ.ಜಿ ಹಾಗೂ ಅಭಿಮನ್ಯು- 5,145 ಕೆ.ಜಿ ಇದೆ.
ಸೋಮವಾರ ಮೈಸೂರು ಅರಮನೆಗೆ ಮೊದಲ ತಂಡದ ಆರು ಆನೆಗಳು ಆಗಮಿಸಿದ್ದವು. ಜಿಲ್ಲಾಡಳಿತ ಸಾಂಪ್ರದಾಯಿಕವಾಗಿ ಆನೆಗಳನ್ನು ಬರ ಮಾಡಿಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಗಜಪಡೆಗೆ ಪೂಜೆ ನಡೆದಿದೆ.
ಅರ್ಜುನನ ನೇತೃತ್ವದ ಆನೆಗಳ ತಂಡಕ್ಕೆ ಸಾಂಪ್ರದಾಯಿಕ ಪೂಜೆ ನಡೆದಿದ್ದು, ಸೋಮವಾರ ಒಂದೂವರೆ ತಿಂಗಳ ಕಾಲ ಆನೆಗಳು ಅರಮನೆಯಲ್ಲೇ ಉಳಿಯಲಿದೆ. ಸೋಮವಾರ ಮಧ್ಯಾಹ್ನ 12ಕ್ಕೆ ಅಭಿಜಿನ್ ಲಗ್ನದಲ್ಲಿ ಗಜಪಡೆಗೆ ಸ್ವಾಗತ ಮಾಡಲಾಗಿದೆ.
