Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ವಿಜಯದಶಮಿಯ ಹಿನ್ನೆಲೆ ಏನು? ರಾಮಾಯಣ, ಮಹಾಭಾರತಕ್ಕೆ ಏನು ಸಂಬಂಧ?

Public TV
Last updated: October 15, 2021 7:47 am
Public TV
Share
3 Min Read
jambu savari mysuru 6
Arjuna leads Jamboo Savari –Dasara Procession attracts thousands of people in Mysuru on Friday, October 23, 2015 as Navaratri festival ends. –KPN ### Mysuru Jamboo Savari
SHARE

ಅಶ್ವಯುಜ ಶುಕ್ಲಪಾಡ್ಯದಂದು ಆರಂಭಗೊಂಡು ನವರಾತ್ರಿ ಹಬ್ಬದ ಒಂಭತ್ತು ದಿನಗಳು ಕಳೆದ ನಂತರ ಬರುವ ಹತ್ತನೇ ದಿನವೇ ‘ದಶಮಿ’. ಇದನ್ನೇ ವಿಜಯ ದಶಮಿ ಎಂದು ಕರೆಯುತ್ತಾರೆ. ಈ ದಿನ ಸಂತೋಷದ ಸಾಂಸ್ಕೃತಿಕ, ಧಾರ್ಮಿಕ, ವೈಭವದ ಮೆರವಣಿಗೆ ದೇಶದೆಲ್ಲೆಡೆ ನಡೆಯುತ್ತದೆ.

ವಿಜಯದಶಮಿಯ ಹಿನ್ನೆಲೆ ಏನು?
ಕಾಡೆಮ್ಮೆ ರೂಪದ ಮಹಿಷಾಸುರ ದೀರ್ಘ ತಪಸ್ಸು ಮಾಡಿ, ಯಾವುದೇ ಮನುಷ್ಯನಿಂದ, ದೇವರಿಂದ ಅಥವಾ ವಿಶಿಷ್ಟ ಶಕ್ತಿಯಿಂದ ತನ್ನನ್ನು ಸಂಹರಿಸಲು ಸಾಧ್ಯವಾಗಬಾರದು ಎಂದು ಬ್ರಹ್ಮನಿಂದ ವರವನ್ನು ಪಡೆದಿದ್ದನು. ವರ ಸಿಕ್ಕಿದ ಕೂಡಲೇ ಅಹಂಕಾರದಿಂದ ಜನರಿಗೆ ಮತ್ತು ದೇವತೆಗಳಿಗೆ ತೊಂದರೆ ಕೊಡಲು ಆರಂಭಿಸಿದ. ಈತನ ಉಪಟಳವನ್ನು ತಾಳಲಾರದೇ ದೇವತೆಗಳು ಆದಿಶಕ್ತಿಯನ್ನು ಪೂಜಿಸಿ ಮಹಿಷನನ್ನು ಹತ್ಯೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ಪ್ರಾರ್ಥನೆ ಕೇಳಿದ ದೇವಿ ದುರ್ಗೆಯಾಗಿ ಸಿಂಹದ ಮೇಲೆ ಕುಳಿತು, ಹತ್ತು ಕೈಗಳಲ್ಲಿ ಹತ್ತು ಬಗೆಯ ಆಯುಧಗಳನ್ನು ಹಿಡಿದು ಧರೆಗಿಳಿದಳು. ರಾಕ್ಷಸನಾದ ಮಹಿಷಾಸುರನನ್ನು ದಶಮಿಯ ದಿನ ಸಂಹಾರ ಮಾಡಿದಳು. ಅಂದಿನಿಂದ ದಶಮಿಯಂದು ಮಹಿಷಾಸುರನ್ನು ಕೊಂದು ವಿಜಯ ಸಿಕ್ಕಿದ್ದಕ್ಕೆ `ವಿಜಯದಶಮಿ’ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ.

jambu savari mysuru 7

ರಾಮಾಯಣಕ್ಕೆ ಏನು ಸಂಬಂಧ?
ರಾವಣನನ್ನು ಸಂಹಾರ ಮಾಡುವ ಮೊದಲು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು. ‘ದಶಹರ’ದಂದು ದಶಕಂಠನಾಗಿದ್ದ ರಾವಣನನ್ನು ಶ್ರೀರಾಮನು ಸಂಹರಿಸಿದ ಬಳಿಕ ವಿಜಯೋತ್ಸವ ನಡೆಯಿತು ಎನ್ನುವ ಪ್ರತೀತಿ ಇದೆ. ಹೀಗಾಗಿ ಉತ್ತರಭಾರತ ಕಡೆ ದಸರಾ ಸಮಯದಲ್ಲಿ 10 ದಿನಗಳ ಕಾಲ ರಾಮನ ವಿವಿಧ ಘಟನೆಗಳನ್ನು ವಿವರಿಸುವ ರಾಮಲೀಲಾ ಕಥನ ನಡೆಯುತ್ತದೆ. ದಶಮಿಯಂದು ರಾವಣನ ಆಕೃತಿಯನ್ನು ಸುಡಲಾಗುತ್ತದೆ. ದೆಹಲಿಯಲ್ಲಿ ರಾಷ್ಟ್ರೀಯ ಮಹತ್ವ ಇರುವ ಹಬ್ಬ ಎಂಬಂತೆ ಆಚರಿಸಲಾಗುತ್ತದೆ. ರಾಮಲೀಲಾ ಮೈದಾನದಲ್ಲಿ ಈ ಹಬ್ಬಕ್ಕಾಗಿ ಭಾರೀ ಏರ್ಪಾಡು ನಡೆಯುತ್ತದೆ.

Mysuru Dasara Jambu Savari 2017 8

ಪಾಂಡವರಿಗೂ ಏನು ಸಂಬಂಧ?
ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ. ಪಾಂಡವರು ಒಂದು ವರ್ಷದ ಅಜ್ಞಾತವಾಸವನ್ನು ಮತ್ಸ್ಯದೇಶದಲ್ಲಿ ಕಳೆಯಲು ಮುಂದಾಗುತ್ತಾರೆ. ಈ ದೇಶದ ರಾಜನಾದ ವಿರಾಟನ ಆಸ್ಥಾನದಲ್ಲಿ ಆಗ ಧರ್ಮರಾಜ ಕಂಕಭಟ್ಟನಾದರೆ, ಭೀಮ ಬಾಣಸಿಗನಾದ ವಲಲನಾಗಿ ವೇಷ ಬದಲಾಯಿಸುತ್ತಾರೆ. ಅರ್ಜುನ ಬೃಹನ್ನಳೆಯಾಗಿ ನೃತ್ಯ ಶಿಕ್ಷಕಿಯಾಗಿ ನಕುಲ ಸಹದೇವರು ಅನುಕ್ರಮವಾಗಿ ಅಶ್ವಪಾಲಕ-ಗೋಪಾಲಕರಾದರು. ದ್ರೌಪದಿ ಸೈರಂಧ್ರಿಯಾಗಿ ವಿರಾಟನ ಪತ್ನಿಯಾದ ಸುದೇಷ್ಣೆಯ ಸೇವೆಯಲ್ಲಿ ನಿಂತಳು. ಅಜ್ಞಾತವಾಸದ ಕೊನೆಯಲ್ಲಿ ಕುರುಸೇನೆ ವಿರಾಟನ ರಾಜ್ಯದಲ್ಲಿರುವ ಗೋವುಗಳನ್ನು ಅಪಹರಿಸಿತ್ತು. ಈ ಸಮಯದಲ್ಲಿ ವಿರಾಟನ ಪುತ್ರನಾದ ಉತ್ತರಕುಮಾರ ನಾನು ಕುರುಸೇನೆಯನ್ನು ಸೆದೆ ಬಡಿಯುತ್ತೇನೆ ಎಂದು ಹೇಳಿ ಜಂಬ ಕೊಚ್ಚಿಕೊಂಡು ಯುದ್ಧಕ್ಕೆ ಹೊರಟಿದ್ದ. ಬೃಹನ್ನಳೆಯನ್ನು ಸಾರಥಿಯನ್ನಾಗಿ ಮಾಡಿ ಯುದ್ಧಕ್ಕೆ ಕರೆದುಕೊಂಡು ಹೋದ. ಯುದ್ಧದಲ್ಲಿ ಸೋಲು ಸಮೀಪವಾಗುತ್ತಿದೆ ಎಂದಾಗ  ಉತ್ತರ ಕುಮಾರ ಯುದ್ಧದಿಂದ ಹಿಂದಕ್ಕೆ ಸರಿಯುತ್ತೇನೆ. ದಯವಿಟ್ಟು ಇಲ್ಲಿಂದ ತೆರಳೋಣ ಎಂದು ಹೇಳುತ್ತಾನೆ.  ಈ ವೇಳೆ ಬೃಹನ್ನಳೆ ರೂಪದಲ್ಲಿದ್ದ ಅರ್ಜುನ ಅಜ್ಞಾತವಾಸದ ಸಮಯದಲ್ಲಿ ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರವನ್ನು ತೆಗೆದು ವಿರಾಟರಾಜನ ಶತ್ರುಗಳನ್ನು ಸೋಲಿಸುತ್ತಾನೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಕುರುಸೇನೆಯನ್ನು ವಿರಾಟ ಸೇನೆ ಸೋಲಿಸುತ್ತದೆ. ಈ ವಿಜಯದ ಕುರುಹಾಗಿ ಒಂಭತ್ತನೇ ದಿನ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ.

170930kpn80

ಕಲಿಯುಗದಲ್ಲೂ ಆಚರಣೆ:
ನವಮಿಯಂದು ಆಯುಧಗಳಿಗೆ ಪೂಜೆ ಮಾಡಿ ದಶಮಿಯಂದು ದಂಡಯಾತ್ರೆಗೆ ಹೊರಟರೆ ವಿಜಯ ಸಿದ್ಧಿ ಎನ್ನುವ ನಂಬಿಕೆ ಈ ಹಿಂದೆ ರಾಜರಲ್ಲಿತ್ತು. ಹೀಗಾಗಿ ದಶಮಿಯಂದೇ ಪೂಜೆ ಸಲ್ಲಿಸಿ ದಂಡಯಾತ್ರೆಗೆ ಹೊರಡುತ್ತಿದ್ದರು. ಈ ಪದ್ದತಿ ಈಗಲೂ ಉಳಿದುಕೊಂಡಿದ್ದು, ಸಾಂಕೇತಿಕವಾಗಿ ಕೆಲ ರಾಜವಂಶಸ್ಥರು ಸಾಂಕೇತಿಕವಾಗಿ ತಮ್ಮ ರಾಜ್ಯದ ಗಡಿಯನ್ನು ದಾಟಿ ಮತ್ತೆ ಹಿಂದಿರುಗುತ್ತಾರೆ. ವಿಜಯನಗರಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ಈ ಸೀಮೋಲ್ಲಂಘನ ಮೈಸೂರಿನ ಒಡೆಯರ ಕಾಲದಲ್ಲಿ ಮುಂದುವರಿದಿದೆ.

golden ambari 2

 

TAGGED:DasarakannadamysorePublic TVVijayadashamiನವರಾತ್ರಿಪಾಂಡವರುಮಹಾಭಾರತಮಹಿಷಾಸುರರಾಮಾಯಣರಾವಣವಿಜಯದಶಮಿ
Share This Article
Facebook Whatsapp Whatsapp Telegram

Cinema Updates

ileana 1 4
2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಇಲಿಯಾನಾ
7 minutes ago
drithi puneeth rajkumar 1 1
ನ್ಯೂಯಾರ್ಕ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಅಣ್ಣಾವ್ರ ಮೊಮ್ಮಕ್ಕಳು
44 minutes ago
hrithik roshan prithviraj sukumaran
ಹೃತಿಕ್ ರೋಷನ್‌ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?
1 hour ago
ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
2 hours ago

You Might Also Like

Mangaluru UT Khader
Bengaluru City

ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತ, ಪ್ರಾಣಹಾನಿ – ರಕ್ಷಣಾ ಕಾರ್ಯಕ್ಕೆ ಯು.ಟಿ ಖಾದರ್ ಸೂಚನೆ

Public TV
By Public TV
4 minutes ago
Salman Khurshid
Latest

ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

Public TV
By Public TV
15 minutes ago
bengaluru police commissioner b dayanand
Bengaluru City

ಮಂಡ್ಯ ಬಾಲಕಿ ಸಾವು ಕೇಸ್ | ಎಚ್ಚೆತ್ತ ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ

Public TV
By Public TV
29 minutes ago
G Parameshwar
Bengaluru City

ನಾವು ಕೈಕಟ್ಟಿ ಕೂರಲ್ಲ, ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದಿರಬೇಕು ಅಷ್ಟೇ: ಪರಮೇಶ್ವರ್

Public TV
By Public TV
53 minutes ago
mangaluru Rain Death
Dakshina Kannada

ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

Public TV
By Public TV
1 hour ago
Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?