ದಸರಾ ವಜ್ರಮುಷ್ಠಿ ಕಾಳಗದ ವಿಜೇತ ಚನ್ನಪಟ್ಟಣದ ಪ್ರವೀಣ್ ಜೆಟ್ಟಿಗೆ ಸನ್ಮಾನ

Public TV
1 Min Read
Praveen Jetti 1

ರಾಮನಗರ: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಉತ್ಸವದ ವಜ್ರಮುಷ್ಠಿ (Vajramushti) ಕಾಳಗದಲ್ಲಿ ವಿಜೇತರಾದ ಚನ್ನಪಟ್ಟಣದ (Channapatna) ಪ್ರವೀಣ್ ಜೆಟ್ಟಿ (Praveen Jetti) ಅವರನ್ನು ನಗರದ ರೈಲ್ವೆ ನಿಲ್ದಾಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಅಭಿನಂದಿಸಲಾಯಿತು.

ನಮ್ಮ ರಾಜ್ಯದ ಸಾಂಸ್ಕೃತಿಕ ಪರಂಪರೆಯ ಆಸ್ತಿಯಾಗಿರುವ ಜೆಟ್ಟಿ ಜನಾಂಗಕ್ಕೆ ಸರ್ಕಾರ ಸೂಕ್ತ ಗೌರವ ಹಾಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ಬೊಂಬೆನಾಡಿನ ಜೆಟ್ಟಿಗಳ ಕೊಡುಗೆ ಅಪಾರ. ಈ ಬಾರಿಯ ದಸರಾದಲ್ಲಿ ಜಯಗಳಿಸಿರುವ ಪ್ರವೀಣ್ ಜೆಟ್ಟಿ ಅವರ ಸಾಧನೆ ಶ್ಲಾಘನೀಯವಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್

ಪ್ರವೀಣ್ ಜೆಟ್ಟಿ ಅವರು ಚನ್ನಪಟ್ಟಣ ತಾಲೂಕಿನ ಸಾಂಸ್ಕೃತಿಕ ಪರಂಪರೆಯ ಆಸ್ತಿಯಾಗಿದ್ದಾರೆ. ವಜ್ರಮುಷ್ಠಿ ಕಾಳಗದಲ್ಲಿ ಚನ್ನಪಟ್ಟಣದ ಜೆಟ್ಟಿಗಳು ಜಯಗಳಿಸುತ್ತಾ ಬಂದಿದ್ದಾರೆ. ಈ ವರ್ಷ ಪ್ರವೀಣ್ ಜೆಟ್ಟಿ ಅವರು ದಸರಾದಲ್ಲಿ ಭಾಗವಹಿಸಿ ಜಯಗಳಿಸುವ ಮೂಲಕ ಬೊಂಬೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರು ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ: ಸಿದ್ದರಾಮಯ್ಯ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article