– ಅಜ್ಜಿ ಕೊಲೆ ಬಳಿಕ ಎಣ್ಣೆ ಪಾರ್ಟಿ ಮಾಡಿದ ಮೊಮ್ಮಗ
– ಕುಡಿತದ ಚಟಕ್ಕೆ 75 ವರ್ಷದ ವೃದ್ಧೆ ಬಲಿ
ಬೆಂಗಳೂರು: ಕುಡಿತದ ಚಟಕ್ಕೆ ಒಳಗಾಗಿದ್ದ ಮಹಿಳೆಯೊಬ್ಬಳು ಆಸ್ತಿ ವಿಚಾರಕ್ಕೆ ನಡೆದ ಜಗಳದ ವೇಳೆ ತನ್ನ ಮಗನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಲೆ(Mother Murder) ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನ (Bengaluru)ಕೆಂಗೇರಿ(Kengeri Crime) ವ್ಯಾಪ್ತಿಯಲ್ಲಿ ನಡೆದಿದೆ.
75 ವರ್ಷದ ಜಯಮ್ಮ ಕೊಲೆಯಾದ ವೃದ್ಧೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳು ಭಾಗ್ಯಲಕ್ಷ್ಮಿ ಹಾಗೂ ಮೊಮ್ಮಗ ಕುಶಾಲ್ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೆಂಗೇರಿಯ ಸುಭಾಷ್ ನಗರದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ ಕೊಲೆ ನಡೆದಿದ್ದರೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬದ ಸದಸ್ಯರೆಲ್ಲರೂ ಕುಡಿತದ ಚಟಕ್ಕೆ ಒಳಗಾಗಿದ್ದರಿಂದ ಆಸ್ತಿ ಮಾರಾಟದ ವಿಚಾರವಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು.
ಘಟನೆ ನಡೆದ ರಾತ್ರಿ ಆಸ್ತಿ ಮಾರಾಟದ ಹಣದ ವಿಚಾರಕ್ಕೆ ಜಯಮ್ಮ ಆಕೆಯ ಮಗಳು ಭಾಗ್ಯಲಕ್ಷ್ಮಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಮಾತಿನ ಚಕಮಕಿ ಹೆಚ್ಚಾಗಿ ಜಗಳಕ್ಕೆ ತಿರುಗಿದೆ. ಈ ವೇಳೆ ಭಾಗ್ಯಲಕ್ಷ್ಮಿ ಅವರ ಮಗ ಕುಶಾಲ್ ಕೂಡ ಜಗಳಕ್ಕೆ ಸೇರಿಕೊಂಡಿದ್ದಾನೆ. ಈ ವೇಳೆ, ಮನೆಯಲ್ಲಿದ್ದ ಮುದ್ದೆ ಮಾಡುವ ಕೋಲಿನಿಂದ ಜಯಮ್ಮನ ತಲೆಗೆ ಬಲವಾಗಿ ಹೊಡೆದು ಹಲ್ಲೆ ನಡೆಸಿದ್ದು, ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಬೆಂಗಳೂರು – ತುಮಕೂರು ಹೈವೆಯಲ್ಲಿ ಸರಣಿ ಅಪಘಾತ: ಕಾರಿನಲ್ಲಿದ್ದ ನಾಲ್ವರು ಬಚಾವ್
ತಾಯಿ-ಮಗ ಇಬ್ಬರೂ ಕೊಲೆ ಮುಚ್ಚಿಹಾಕಲು ಯತ್ನಿಸಿದ್ದಾರೆ. ಆದರೆ ಕೆಲ ಸಮಯದ ಬಳಿಕ ಕುಶಾಲ್ ತನ್ನ ಸ್ನೇಹಿತನಿಗೆ ಕರೆ ಮಾಡಿ, ಅಜ್ಜಿ ತೀರಿ ಹೋಗಿದ್ದಾರೆ, ಎಣ್ಣೆ ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ. ಸ್ನೇಹಿತ ಮದ್ಯ ತೆಗೆದುಕೊಂಡು ಮನೆಗೆ ಬಂದಾಗ, ಕುಶಾಲ್ ಮನೆಯಲ್ಲಿ ಕುಡಿದು ಪಾರ್ಟಿ ಮಾಡುವಂತೆ ನಟಿಸಿದ್ದಾನೆ. ಈ ವೇಳೆ, ಕುಶಾಲ್ ಸ್ನೇಹಿತ ಜಯಮ್ಮನ ಮೃತದೇಹವನ್ನು ನೋಡಿ ಆಘಾತಕ್ಕೊಳಗಾಗಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಕೊಲೆ ರಹಸ್ಯವನ್ನು ಬಯಲು ಮಾಡಿದ್ದಾನೆ.
ಕೆಂಗೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ತನಿಖೆ ನಡೆಸಿದಾಗ ಕೊಲೆ ವಿಚಾರ ಬಯಲಾಗಿದೆ. ಆರೋಪಿಗಳಾದ ಭಾಗ್ಯಲಕ್ಷ್ಮಿ ಮತ್ತು ಆಕೆಯ ಮಗ ಕುಶಾಲ್ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: MLC ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಗ್ಗೆ ರಾಜ್ಯಾಧ್ಯಕ್ಷರು ಬಂದ ಬಳಿಕ ಪ್ರಾಥಮಿಕ ವರದಿ ಸಲ್ಲಿಕೆ – ಸಿ.ಟಿ ರವಿ
