Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಂ ಯುವಕನ ಜೊತೆ ಮದ್ವೆಗೆ ವಿರೋಧ- ತಂದೆಯಿಂದ್ಲೇ ಮಗಳು ಪೀಸ್ ಪೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮುಸ್ಲಿಂ ಯುವಕನ ಜೊತೆ ಮದ್ವೆಗೆ ವಿರೋಧ- ತಂದೆಯಿಂದ್ಲೇ ಮಗಳು ಪೀಸ್ ಪೀಸ್

Crime

ಮುಸ್ಲಿಂ ಯುವಕನ ಜೊತೆ ಮದ್ವೆಗೆ ವಿರೋಧ- ತಂದೆಯಿಂದ್ಲೇ ಮಗಳು ಪೀಸ್ ಪೀಸ್

Public TV
Last updated: December 10, 2019 2:10 pm
Public TV
Share
3 Min Read
FATHER
SHARE

– ಕೆಲ ಭಾಗಗಳನ್ನಷ್ಟೇ ಸೂಟ್‍ಕೇಸ್‍ನಲ್ಲಿ ತುಂಬಿದ
– ಶವ ಬಿಸಾಡಲು ಹೋಗಿ ಸಿಕ್ಕಿಬಿದ್ದ

ಮುಂಬೈ: ಇತ್ತೀಚೆಗಷ್ಟೇ ಪಾಪಿ ಮಗಳೊಬ್ಬಳು ತನ್ನ ತಂದೆಯನ್ನು ಕೊಲೆಗೈದು ಸೂಟ್ ಕೇಸ್‍ನಲ್ಲಿ ತುಂಬಿ ನದಿಗೆ ಎಸೆದ ಪ್ರಕರಣದ ಬೆನ್ನಲ್ಲೇ ಇದೀಗ ತಂದೆಯೇ ಮಗಳನ್ನು ಕೊಂದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

22 ವರ್ಷದ ಮಗಳನ್ನು ಕೊಲೆಗೈದ 47 ವರ್ಷದ ಪಾಪಿ ತಂದೆಯನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಯುವಕನೊಂದಿಗಿನ ಪ್ರೇಮವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅರವಿಂದ್ ತಿವಾರಿ ತನ್ನ ಮಗಳಾದ ಫ್ರಿನ್ಸಿಯನ್ನು ಹೊಡೆದು ಕೊಂದು ಬಳಿಕ ಆಕೆಯ ಶವವನ್ನು ಸೂಟ್ ಕೇಸಿನಲ್ಲಿ ತುಂಬಿ ಬಿಸಾಡಲೆಂದು ಶನಿವಾರ ರಾತ್ರಿ ಆಟೋದಲ್ಲಿ ತೆರಳುತ್ತಿದ್ದನು. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

father daughter

ಮೃತ ದುರ್ದೈವಿ ಯುವತಿ ಪದವೀಧರೆಯಾಗಿದ್ದು, 6 ತಿಂಗಳ ಹಿಂದೆಯಷ್ಟೇ ಉತ್ತರಪ್ರದೇಶಕ್ಕೆ ಸಮೀಪವಿರುವ ಜೌನ್ಪುರ್ ಸಿಟಿಯಿಂದ ಬಂದಿದ್ದಳು. ಅಲ್ಲದೆ ಆಕೆ ಕೆಲಸ ಮಾಡುತ್ತಿರುವ ಭಂದೂಪ್ ಕಂಪನಿಯಲ್ಲಿ ಸಹೋದ್ಯೋಗಿಯ ಮೇಲೆ ಪ್ರೀತಿ ಹುಟ್ಟಿಕೊಂಡಿದೆ. ಯುವಕ ಮುಸ್ಲಿಂ ಆಗಿದ್ದು, ಮದುವೆಯಾಗಲು ರೆಡಿಯಾಗಿದ್ದಳು. ಆದರೆ ಈ ವಿಚಾರ ತಿಳಿದ ತಂದೆ, ಆತನ ಜೊತೆಗಿನ ಮದುವೆಯನ್ನು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ತಂದೆ, ಮಗಳನ್ನು ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೆ ಇದೂವರೆಗೂ ಆಕೆಯ ದೇಹದ ಪೂರ್ತಿ ಭಾಗ ಸಿಗಲಿಲ್ಲ. ಹೀಗಾಗಿ ಅದನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ಆರೋಪಿ ತಿವಾರಿ ಮಲಾಡ್ ನಲ್ಲಿರುವ ಟ್ರಾವೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಪೊಲೀಸರ ಪ್ರಕಾರ, ಮುಸ್ಲಿಂ ಯುವಕನೊಂದಿಗಿನ ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಬಾರಿ ತನ್ನ ಮಗಳ ಜೊತೆ ಕ್ಯಾತೆ ತೆಗೆದಿದ್ದನು. ತನಿಖೆಯ ಸಂದರ್ಭದಲ್ಲಿಯೂ ಆತ, ನನಗೆ ನನ್ನ ಮಗಳು ಬೇರೆ ಸಮುದಾಯದ ಯುವಕನೊಂದಿಗೆ ಸಂಬಂಧ ಬೆಳೆಸಿರುವುದು ಇಷ್ಟವಾಗಿರಲಿಲ್ಲ. ಆದರೆ ಆಕೆ ಮಾತ್ರ, ತಾನು ಅತನನ್ನೇ ಮದುವೆಯಾಗುವುದೆಂದು ಹಠ ಹಿಡಿದಿದ್ದಳು. ಇದರಿಂದ ಸಿಟ್ಟಿಗೆದ್ದು ಆಕೆಯನ್ನು ಕೊಲೆ ಮಾಡಲು ತೀರ್ಮಾನ ಮಾಡಿದೆ ಎಂದು ಪೊಲೀಸರ ಬಳಿ ತಿಳಿಸಿದ್ದಾನೆ.

marriage 3

ತಿವಾರಿ ಹಾಗೂ ಮೃತ ಮಗಳು ತಿಟ್ ವಾಲಾದ ಇಂದಿರಾ ನಗರದಲ್ಲಿರುವ ಪ್ರದೇಶದಲ್ಲಿ ವಾಸವಾಗಿದ್ದರು. ಮೃತ ಪ್ರಿನ್ಸಿಯ ತಾಯಿ ಹಾಗೂ ಮೂವರು ಸಹೋದರಿಯರು ಉತ್ತರಪ್ರದೇಶ ಜೌನ್ಪುರದಲ್ಲಿ ವಾಸವಾಗಿದ್ದಾರೆ. ಇತ್ತ ತಂದೆ ಜೊತೆ ವಾಸವಾಗಿದ್ದ ಪ್ರಿನ್ಸಿ, ಶುಕ್ರವಾರ ರಾತ್ರಿ ಮುಸ್ಲಿಂ ಯುವಕನ ಜೊತೆ ಮದುವೆಯ ಪ್ರಸ್ತಾಪವನ್ನು ಅಪ್ಪನ ಮುಂದಿಟ್ಟಿದ್ದಾಳೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ತಂದೆ ಮಗಳನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಮಗೆ ಇದೂವರೆಗೂ ಆರೋಪಿ ಹೇಗೆ ತನ್ನ ಮಗಳನ್ನು ಕೊಲೆಗೈದಿದ್ದಾನೆ ಎಂಬುದು ತಿಳಿದುಬಂದಿಲ್ಲ. ಆದರೆ ಕೊಲೆಯ ನಂತರ ಆತ ಮಗಳ ದೇಹದ ಭಾಗಗಳನ್ನು ಕತ್ತರಿಸಿದ್ದಾನೆ. ನಂತರ ಸೂಟ್ ಕೇಸಿನಲ್ಲಿ ತುಂಬಿದ್ದಾನೆ. ಹೀಗಾಗಿ ಆತ ತುಂಬಿಸಿದ ಭಾಗಗಳಷ್ಟೇ ನಮಗೆ ದೊರೆತಿದ್ದು, ದೇಹದ ಇತರ ಭಾಗಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಹಿರಿಯ ಇನ್ಸ್ ಪೆಕ್ಟರ್ ನಿತಿನ್ ಠಾಕ್ರೆ ವಿವರಿಸಿದ್ದಾರೆ.

marriage

ಮಗಳ ಕತ್ತರಿಸಿದ ದೇಹದೊಂದಿಗೆ ತಂದೆ ರಿಕ್ಷಾದಲ್ಲಿ ತಿಟ್ ವಾಲಾ ರೈಲ್ವೆ ನಿಲ್ದಾಣದತ್ತ ತೆರಳಿದ್ದಾನೆ. ಅಲ್ಲಿಂದ ಆತ ಕಲ್ಯಾಣ ರೈಲ್ವೆ ನಿಲ್ದಾಣಕ್ಕೆ ಹೋಗಿದ್ದು, ಮತ್ತೆ ಆಟೋ ಹಿಡಿದುಕೊಂಡು ಭಿವಾಂಡಿ ಪ್ರದೇಶಕ್ಕೆ ತೆರಳಿ, ಅಲ್ಲಿ ಮೃತ ದೇಹವನ್ನು ಬಿಸಾಕುವ ಯೋಜನೆ ಹಾಕಿಕೊಂಡಿದ್ದನು. ಈ ಮಧ್ಯೆ ಆಟೋ ಚಾಲಕ ಸೂಟ್ ಕೇಸಿನಲ್ಲಿ ಏನಿದೆ ತುಂಬಾ ವಾಸನೆ ಬರುತ್ತಿದೆಯಲ್ವಾ ಎಂದು ಪ್ರಶ್ನಿಸಿದ್ದಾನೆ. ಇದರಿಂದ ಭಯಭೀತನಾದ ತಿವಾರಿ, ಸೂಟ್ ಕೇಸನ್ನು ಆಟೋದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಇದರಿಂದ ಸಂಶಯಗೊಂಡ ಆಟೋ ಚಾಲಕ, ಇತರ ಆಟೋ ಡ್ರೈವರುಗಳಿಗೆ ಮಾಹಿತಿ ನೀಡುತ್ತಾರೆ. ಇತ್ತ ಕೂಡಲೇ ಸ್ಥಳೀಯ ಮಹಾತ್ಮ ಫುಲೆ ಪೊಲೀಸ್ ಠಾಣೆಗೂ ಮಾಹಿತಿ ರವಾನಿಸುತ್ತಾರೆ. ಹೀಗಾಗಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸೂಟ್ ಕೇಸ್ ತೆರೆದು ನೋಡಿದಾಗ ತುಂಡು ತುಂಡಾದ ದೇಹದ ಭಾಗಗಳು ಪತ್ತೆಯಾಗಿವೆ. ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಕೊಲೆ ಪ್ರಕರಣವನ್ನೂ ದಾಖಲಿಸಿಕೊಳ್ಳುತ್ತಾರೆ.

Police Jeep

ಪ್ರಕರಣವನ್ನು ಕೈಗೆತ್ತಿಗೊಂಡ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ಆರಂಭಿಸಿದ್ದು, ರೈಲ್ವೆ ನಿಲ್ದಾಣಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದರು. ಈ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ನಂತರ ಆರೋಪಿ ಮನೆಗೆ ತೆರಳಿ ಮಗಳ ಬಗ್ಗೆ ಕೇಳಿದ್ದಾರೆ. ಮೊದಲು ಏನೇನೂ ಸಬೂಬು ಹೇಳಿದ ತಿವಾರಿ ಕೊನೆಗೆ ತನ್ನ ತಪ್ಪನ್ನು ಪೊಲಿಸರ ಮುಂದೆ ಒಪ್ಪಿಕೊಂಡನು. ಸದ್ಯ ಪೊಲೀಸರು ಕ್ರೈಂ ಬ್ರಾಂಚ್ ಪೊಲೀಸರು ಆರೋಪಿಯನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

TAGGED:daughtermarriagemumbai. fathermuslimPublic TVsuitcaseyouthತಂದೆಪಬ್ಲಿಕ್ ಟಿವಿಮಗಳುಮದುವೆಮುಂಬೈಮುಸ್ಲಿಂಯುವಕಸೂಟ್ ಕೇಸ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
6 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
6 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
6 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
6 hours ago
01 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-1

Public TV
By Public TV
7 hours ago
02 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-2

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?