– ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು
ದಾವಣಗೆರೆ: ಬಿಜೆಪಿ (BJP) ನಾಯಕ ಬಿ.ಜಿ ಅಜಯ್ ಕುಮಾರ್ ಹಾಕಿದ್ದ ಸವಾಲು ಸ್ವೀಕರಿಸಿ ದಾವಣಗೆರೆಗೆ (Davanagere) ಬಂದಿದ್ದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರಿಗೆ ಕೆಸರಿ ಪಡೆಯ ಕಾರ್ಯಕರ್ತರು ಚಪ್ಪಲಿ, ಪೊರಕೆ ತೋರಿಸಿ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ (Congress) ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ದಿನ ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ತೊಡೆ ತಟ್ಟಿ ವಾಗ್ದಾಳಿ ನಡೆಸಿದ್ದರು. ಇದು ಬಿಜೆಪಿಗರನ್ನು ಕೆರೆಳಿಸಿತ್ತು. ಇದರಿಂದ ತಾಖತ್ ಇದ್ದರೆ ದಾವಣಗೆರೆಗೆ ಬರುವಂತೆ ಬಿಜೆಪಿ ನಾಯಕ ಸವಾಲು ಎಸೆದಿದ್ದರು. ಸವಾಲನ್ನು ಸ್ವೀಕರಿಸಿದ್ದ ಪ್ರದೀಪ್ ಈಶ್ವರ್ ಇಂದು ದಾವಣಗೆರೆಗೆ ಆಗಮಿಸಿದ್ದರು. ಈ ವೇಳೆ ಪಿಬಿ ರಸ್ತೆಯಿಂದ ಕೆಬಿ ಬಡಾವಣೆಯ ಬಿಜೆಪಿ ಕಚೇರಿ ಮೂಲಕ ರಾಯರ ಮಠಕ್ಕೆ ತೆರಳುವ ವೇಳೆ ಹೈಡ್ರಾಮಾ ನಡೆದು ಹೋಗಿದೆ. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಪೈಲ್ವಾನ್ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು
ಪ್ರದೀಪ್ ಈಶ್ವರ್ ಬಿಜೆಪಿ ಕಚೇರಿ ಬಳಿ ಆಗಮಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರು ಪೊರಕೆ ಹಿಡಿದು ಹುಚ್ಚ ಎಂದೆಲ್ಲ ಘೋಷಣೆ ಕೂಗಿದರು. ಒಂದು ಕಡೆ ಬಿಜೆಪಿ ನಾಯಕ ಬಿ.ಜಿ ಅಜಯ್ ಕುಮಾರ್ ಅವರನ್ನು ಹೆಗಲ ಮೇಲೆ ಹೊತ್ತ ಕಾರ್ಯಕರ್ತರು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಚಪ್ಪಲಿ, ಪೊರಕೆ ಪ್ರದರ್ಶನ ಮಾಡಿದರು. ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಕಾರಿನ ಮೇಲೆ ನಿಂತು ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಮೌನವಾಗಿ ದಾವಣಗೆರೆಗೆ ಬಂದಿದ್ದೇನೆ ಎಂದು ಸೆಡ್ಡು ಹೊಡೆದರು.
ಎಎಸ್ಪಿ ಪರಮೇಶ್ವರ್ ಹೆಗಡೆ ಬಿಜೆಪಿ ಕಾರ್ಯಕರ್ತರನ್ನು ಸಮಾಧಾನ ಮಾಡಿ ಪ್ರದೀಪ್ ಈಶ್ವರ್ ಕಾರು ಮುಂದೆ ಕಳಿಸಿದರು. ಈ ವೇಳೆ ನೂಕಾಟ ತಳ್ಳಾಟ ನಡೆಯಿತು. ಸಿಆರ್ಪಿಎಫ್ ಯೋಧರು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ಬಳಿಕ ಮಾತನಾಡಿದ ಪ್ರದೀಪ್ ಈಶ್ವರ್, ಬಿಜೆಪಿ ಮುಖಂಡರು ನನ್ನ ತಾಖತ್ ಬಗ್ಗೆ ಪ್ರಶ್ನೆ ಮಾಡಿದ್ದರು. ಅದ್ದರಿಂದ ದಾವಣಗೆರೆಗೆ ಬಂದು ತಾಖತ್ ತೋರಿಸಿದ್ದೇನೆ. ಶಾಮನೂರು ಶಿವಶಂಕರಪ್ಪ ಅವರು ಮೃತರಾದ ಹಿನ್ನಲೆಯಲ್ಲಿ ಅವರ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದೇವೆ. ಸಮರ್ಥ್ ಒಬ್ಬ ನ್ಯೂ ಜನರೇಷನ್ ಹುಡುಗ, ಅವನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ನಮ್ಮ ಕ್ಷೇತ್ರದಲ್ಲಿ ಸಮರ್ಥ್ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್

