ದಾವಣಗೆರೆ: ನಗರದಲ್ಲಿ (Davanagere) ಕಳೆದ ಅ.11 ರಂದು ಮನೆಗಳು ತೆರವುಗೊಂಡು ನಿರಾಶ್ರಿತರಾಗಿದ್ದ 36 ಕುಟುಂಬಗಳಿಗೆ `ಪಬ್ಲಿಕ್ ಟಿವಿ’ (Public Tv) ವರದಿ ಬಳಿಕ ಸೂರಿನ ಭಾಗ್ಯ ಒದಗಿ ಬಂದಿದೆ.
ನಗರದ ಲೋಕಿಕೆರೆ ರಸ್ತೆಯ ರವೀಂದ್ರನಾಥ್ ಬಡಾವಣೆಯ ಸರ್ಕಾರಿ ಜಾಗದಲ್ಲಿ ವಾಸವಾಗಿದ್ದ 36 ಕುಟುಂಬಗಳ ಮನೆಗಳನ್ನು ತೆರವು ಮಾಡಲಾಗಿತ್ತು. ನಿರಾಶ್ರಿತರನ್ನು ತುರ್ಚಘಟ್ಟ ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಮೂರು ತಿಂಗಳಾದರೂ ಸೂರಿನ ವ್ಯವಸ್ಥೆ ಕಲ್ಪಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇದನ್ನೂ ಓದಿ: ಪಾರ್ಕ್ ಜಾಗದಲ್ಲಿ ನಿರ್ಮಿಸಿದ್ದ 3 ಮನೆ ತೆರವು – 13 ಮನೆಗಳಿಗೆ ಎರಡು ದಿನ ಗಡುವು
ಬೆಂಗಳೂರಿನ ಕೋಗಿಲು ನಿರಾಶ್ರಿತರಿಗೆ ಮಿಡಿದ ಹೃದಯಗಳು ದಾವಣಗೆರೆಯ 36 ಬಡ ಕುಟುಂಬಗಳ ಕಷ್ಟಕ್ಕೆ ಮಿಡಿಯಲಿಲ್ಲ ಎಂದು ಈ ಬಗ್ಗೆ `ಪಬ್ಲಿಕ್ ಟಿವಿ’ ವರದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಇಂದು ಎಸ್ಓಜಿ ಕಾಲೋನಿಯಲ್ಲಿ 36 ಕುಟುಂಬಗಳಿಗೆ ನಿವೇಶನ ನೀಡಲು ಪಾಲಿಕೆ (Davanagere City Corporation) ಮುಂದಾಗಿದೆ.
ಇಂದು ಜ.2 ಬೆಳಗ್ಗೆಯಿಂದಲೇ ಪಾಲಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಿವೇಶನ ಅಳತೆ ಮಾಡುತ್ತಿದ್ದಾರೆ. ನಿವೇಶನ ನೀಡಿದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಾಗೂ ವರದಿ ಮಾಡಿದ್ದ `ಪಬ್ಲಿಕ್ ಟಿವಿ’ಗೆ ಜನ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ದೇವನಹಳ್ಳಿ ಟೋಲ್ ಬೂತ್ಗೆ ಸ್ಲೀಪರ್ ಬಸ್ ಡಿಕ್ಕಿ

