ದಾವಣಗೆರೆ: ಒಂದೇ ಜೀಪ್ ಪ್ರತ್ಯೇಕ ಎರಡು ಅಪಘಾತದಲ್ಲಿ ಇಬ್ಬರು ಬೈಕ್ ಸವಾರರನ್ನು ಬಲಿ ಪಡೆದ ಘಟನೆ ದಾವಣಗೆರೆಯ ಚನ್ನಗಿರಿಯಲ್ಲಿ ನಡೆದಿದೆ.
ಮೊದಲನೇ ಅಪಘಾತದಲ್ಲಿ ಸಂತೋಷ್( 30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಎರಡನೇ ಅಪಘಾತದಲ್ಲಿ ಶಿವಮೊಗ್ಗ ಮೂಲಕ ಜ್ಞಾನೇಶ್ವರ (23) ಮೃತಪಟ್ಟಿದ್ದಾರೆ. ಜ್ಞಾನೇಶ್ವರ ಜೊತೆ ಇದ್ದ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಚನ್ನಗಿರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೊದಲು ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಬಳಿ ರಭಸದಿಂದ ಬಂದ ಬುಲೇರೋ ಜೀಪ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಈ ಅಪಘಾತ ಮಾಡಿ ಗಾಬರಿಗೊಂಡ ಜೀಪ್ ಚಾಲಕ ವಾಹನ ನಿಲ್ಲಿಸದೇ ವೇಗವಾಗಿ ಮುಂದೆ ಹೋಗಿ ಚನ್ನಗಿರಿಯ ನವಚೇತನ ಶಾಲೆಯ ಮುಂಭಾಗ ಇನ್ನೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಇಬ್ಬರನ್ನು ಬಲಿ ಪಡೆದಿದ್ದಾನೆ.
ಈ ಸಂಬಂಧ ಚನ್ನಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜೀಪ್ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.