ದಾವಣಗೆರೆ: ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಬಳಿಕ ಹಿಂದಿನಿಂದ ಬಂದ ಲಾರಿ ಗಾಯಳುಗಳ ಮೇಲೆ ಹರಿದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ತ್ಯಾವಣಿಗೆ ಸಮೀಪದ ಕದ್ರನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮಿಯಾಪುರ ಗ್ರಾಮದ ಅಂಜಿನಪ್ಪ(29) ಮತ್ತು ಮನೋಜ್(19) ಸಾವನ್ನಪ್ಪಿದ ದುರ್ದೈವಿಗಳು. ದಾವಣಗೆರೆಯಿಂದ ತ್ಯಾವಣಿಗೆ ಕಡೆಗೆ ಬೈಕಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಈ ಯುವಕರ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿ ಹೊಡೆದ ಬೈಕ್ನವರು ರಸ್ತೆಯ ಬದಿಗೆ ಬಿದ್ದರೆ, ಇನ್ನಿಬ್ಬರು ರಸ್ತೆಯ ಮೇಲೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಬಂದ ಲಾರಿ ಗಾಯಾಳುಗಳ ಮೇಲೆ ಹರಿದು ಹೋಗಿದೆ. ಸ್ಥಳದಲ್ಲೇ ಓರ್ವ ಯುವಕ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
- Advertisement 2
- Advertisement 3
ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ವಾಹನ ಸಿಗದೆ ಕೆಲಕಾಲ ರಸ್ತೆಯಲ್ಲೇ ನರಳಿ ಪರದಾಟ ಅನುಭವಿಸಿದ್ದಾರೆ. ಇನ್ನಿಬ್ಬರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.