ದಾವಣಗೆರೆ: ಹರಿಹರ (Harihara) ತಾಲೂಕಿನ ಕೊಕ್ಕನೂರು ಆಂಜನೇಯ ಸ್ವಾಮಿಗೆ ದುಡ್ಡಿನ ಪಲ್ಲಕ್ಕಿ ಉತ್ಸವ (Duddina Palankki Utsava) ಅದ್ದೂರಿಯಾಗಿ ನೆರವೇರಿದೆ.
ಉತ್ಸವ ಹೊರಟ ಪಲ್ಲಕ್ಕಿಗೆ ಈ ಬಾರಿ 12 ಲಕ್ಷ ರೂ. ನಗದು ಹಣದಲ್ಲಿ ಅಲಂಕಾರ ಮಾಡಲಾಗಿತ್ತು. ಪಲ್ಲಕ್ಕಿ ಕೊಕ್ಕನೂರು ಗ್ರಾಮದ ಪ್ರತಿ ಮನೆ ಮನೆಗೆ ತೆರಳಿತ್ತು. ಈ ವೇಳೆ ಪಲ್ಲಕ್ಕಿಗೆ ಭಕ್ತರು ನೋಟಿನ ಹಾರ ಹಾಕಿ ಭಕ್ತಿ ಸಮರ್ಪಣೆ ಮಾಡಿದ್ದಾರೆ. ಅಲ್ಲದೇ ನೋಟಿನ ಹಾರ ಹಾಕಿ ಹರಕೆ ಕಟ್ಟಿಕೊಳ್ಳುವ, ಹರಕೆ ತೀರಿಸುವ ಸಂಪ್ರದಾಯ ಸಹ ಇಲ್ಲಿದೆ. ಇದನ್ನೂ ಓದಿ: 1 ಲಕ್ಷ ಪಾವತಿಸಿ ಶೂಟಿಂಗ್ | ಗೋಪಾಲಸ್ವಾಮಿ ಬೆಟ್ಟದ ಜಾಗ ಯಾರಿಗೆ ಸೇರಿದ್ದು? ಈಗ ಮತ್ತೊಂದು ವಿವಾದ
ದುಡ್ಡಿನ ಪಲ್ಲಕ್ಕಿ ಉತ್ಸವದಲ್ಲಿ ಈ ಬಾರಿ ಒಟ್ಟು 14.80 ಲಕ್ಷ ರೂ. ಸಂಗ್ರಹವಾಗಿದೆ. ಕಳೆದ ಪಲ್ಲಕ್ಕಿ ಉತ್ಸವದಲ್ಲಿ 12 ಲಕ್ಷ ರೂ. ಸಂಗ್ರಹವಾಗಿತ್ತು. ಈ ಹಣವನ್ನು ದೇವಸ್ಥಾನದ ಅಭಿವೃದ್ಧಿಗೆ ಬಳಸಲಾಗುತ್ತದೆ.
ಕೊಕ್ಕನೂರು ಆಂಜನೇಯ ದೇವಸ್ಥಾನ ಅತೀ ಪ್ರಸಿದ್ಧಿ ಪಡೆದಿದ್ದು, ಇಲ್ಲಿನ ಆಂಜನೇಯ ಸ್ವಾಮಿ ಭಕ್ತಿಯಿಂದ ಬರುವ ಭಕ್ತರ ಸಂಕಷ್ಟಗಳನ್ನು ದೂರ ಮಾಡುತ್ತಾನೆ ಎಂಬ ನಂಬಿಕೆ ಇದೆ. ಇದನ್ನೂ ಓದಿ: ಕೋರ್ಟ್ಗೆ ಗೈರು, ಸಿನಿಮಾ ವೀಕ್ಷಣೆಗೆ ದರ್ಶನ್ ಹಾಜರ್