ದಾವಣಗೆರೆ: ಬಿತ್ತನೆಗೆ ವಿತರಣೆ ಮಾಡಬೇಕಿದ್ದ ಶೇಂಗಾ ಬೀಜಗಳನ್ನು ಕಳ್ಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದವರ ಮೇಲೆ ರೈತರು ದಾಳಿ ನಡೆಸಿದ್ದಾರೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಚಿಕ್ಕ ಮಲ್ಲನಹೊಳೆ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ಶೇಂಗಾ ಬೀಜವನ್ನು ಬೇರೆಡೆಗೆ ಗೂಡ್ಸ್ ಆಟೋ ಮೂಲಕ ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ರೈತರು ದಾಳಿ ನಡೆಸಿದ್ದಾರೆ. ಗೂಡ್ಸ್ ಆಟೋ ಚಾಲಕ ಸೇರಿ ಇಬ್ಬರನ್ನು ರೈತರು ಜಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತರಿಗೆ ಸೇರಬೇಕಿದ್ದ ಬಿತ್ತನೆ ಶೇಂಗಾ ಬೀಜಗಳು ಎಲ್ಲಿಂದ ಎಲ್ಲಿಗೆ ತೆಗೆದುಕೊಂಡು ಹೋಗಲಾಗುತಿತ್ತು ಎಂಬುದರ ಕುರಿತಾಗಿ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.