ದಾವಣಗೆರೆ: ಸಾರ್ವಜನಿಕರ ಹಾಗೂ ಪೊಲೀಸರ ಜಟಾಪಟಿಯಲ್ಲಿ ಗಣಪತಿ ಮೂರ್ತಿ ನೆಲಕ್ಕೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ.
ಚನ್ನಗಿರಿಯ ಹಿಂದೂ ಏಕತಾ ಸಮಿತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, 11ನೇ ದಿನವಾದ ಇಂದು ಗಣೇಶ ಮೂರ್ತಿಯನ್ನು ವಿಸರ್ಜನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ಮೆರವಣಿಯಲ್ಲಿ ಡಿಜೆಗೆ ಪರವಾನಿಗೆ ನೀಡಲು ಪೊಲೀಸರ ನಿರಾಕರಿಸಿದ್ದಾರೆ.
ಈ ಹಿನ್ನೆಲೆ ಸಾರ್ವಜನಿಕರಿಗೂ ಹಾಗೂ ಪೊಲೀಸರ ನಡುವೆ ವಾಗ್ವಾದ ಶುರುವಾಗಿದ್ದು, ನಡು ರಸ್ತೆಯಲ್ಲಿ ಗಣೇಶ ಮೂರ್ತಿಯನ್ನು ನಿಲ್ಲಿಸಿ ಪ್ರತಿಭಟನೆಗೆ ಸಾರ್ವಜನಿಕರು ಮುಂದಾಗಿದ್ದಾರೆ. ಅಲ್ಲದೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಕೈವಾಡದಿಂದ ಡಿಜೆಗೆ ಪರವಾನಿಗೆ ನೀಡುತ್ತಿಲ್ಲ. ಹಿಂದೆ ನಡೆದ ಶಾಂತಿ ಸಭೆಯಲ್ಲಿ ಪರವಾನಿಗೆ ನೀಡುತ್ತೇವೆ ಎಂದು ಹೇಳಿದ್ದ ಪೊಲೀಸರು ಈಗ ಕೊನೆ ಕ್ಷಣದಲ್ಲಿ ನಿರಾಕರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಮಾಜಿ ಶಾಸಕ ವಡ್ನಾಳ್ ರಾಜಣ್ಣ ಬೇಟಿ ನೀಡಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರ ಜೊತೆಗೆ ರಸ್ತೆಯಲ್ಲಿದ್ದ ಗಣಪತಿ ಮುಗುಚಿ ಬಿದ್ದಿದ್ದು, ಸಾರ್ವಜನಿಕ ಆಕ್ರೋಶ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ. ಈಗ ಸ್ಥಳದಲ್ಲಿ ಪೊಲೀಸರು ಭಿಗಿ ಭದ್ರತೆ ಮಾಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.