ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ, ಎಸ್‍ಪಿಯಿಂದ ಕೆರೆ ಸ್ವಚ್ಛತೆ

Public TV
0 Min Read
DVG Cleen

ದಾವಣಗೆರೆ: ಇಂದು ಬೆಳ್ಳಂಬೆಳಗ್ಗೆ ಜಿಲ್ಲಾಡಳಿತದ ವತಿಯಿಂದ ದಾವಣಗೆರೆಯ ಕುಂದುವಾಡ ಕೆರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.

ನಮ್ಮ ಕೆರೆ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಸಿದ್ದು, ಬೆಳಗ್ಗೆ 6 ಗಂಟೆಯಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್‍ಪಿ ಹನುಮಂತರಾಯ ಸೇರಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಿಸಿದ್ದು, ಕೆರೆಯ ಸುತ್ತಮುತ್ತಲಿನ ಪ್ರದೇಶವನ್ನು ಶುಚಿಗೊಳಿಸಿದ್ದಾರೆ.

DVG CLINA

ಜಿಲ್ಲಾಧಿಕಾರಿಗಳು ಹಾಗೂ ಎಸ್.ಪಿ ಹನುಮಂತರಾಯ ಕೂಡ ಸ್ವತಃ ಕೆರೆಯ ಏರಿ ಮೇಲಿರುವ ಕಳೆಯನ್ನು ತೆಗೆದು ಸ್ವಚ್ಚಗೊಳಿಸಿದರು. ಪ್ರತಿನಿತ್ಯ ಸಾರ್ವಜನಿಕರು ಕೆರೆಯ ವಾತವರಣದಲ್ಲಿ ವಾಕಿಂಗ್ ಮಾಡುವಾಗ ಕೆಲ ಕಾಲ ಸ್ವಚ್ಛತೆ ಮಾಡಿದರೆ ಇಡೀ ನಗರವನ್ನೇ ಶುಚಿಯಾಗಿಡಬಹುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *