ನಾನು ಕಲ್ಲುಬಂಡೆ ಇದ್ದಂತೆ ಯಾವತ್ತು ಕರಗಲ್ಲ: ರೇಣುಕಾಚಾರ್ಯ

Public TV
1 Min Read
renukacharya

ದಾವಣಗೆರೆ: ನಾನು ಕಲ್ಲುಬಂಡೆ ಇದ್ದಂತೆ ನಾನ್ಯಾವತ್ತು ಕರಗಲ್ಲ. ಮಂತ್ರಿ ಸ್ಥಾನ ನೀರಿನ ಮೇಲೆ ಗುಳ್ಳೆ, ಈಗ ಎತ್ತಿನ ಬಂಡಿಯಲ್ಲಿ ಬಂದೆ. ಆ ಬಂಡಿ ಮುಂದೆ ಗೂಟದ ಕಾರು ಲೆಕ್ಕವೇ ಇಲ್ಲ ಎಂದು ದಾವಣಗೆರೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಗೂಟದ ಕಾರು ಬೇಕು ಎನ್ನುವವರಿಗೆ ಮಂತ್ರಿ ಮಾಡಬೇಡಿ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮದಲ್ಲಿ ತಿರುಗೇಟು ನೀಡಿದ ರೇಣುಕಾಚಾರ್ಯ, ನಾನು ಸಚಿವ ಸ್ಥಾನ ಆಕಾಂಕ್ಷಿ ಎಂದು ಹೇಳಿದ್ದು ನಿಜ. ಆದರೆ ನನಗೆ ಗೂಟದ ಕಾರು ಲೆಕ್ಕಕ್ಕೇ ಇಲ್ಲ ಎಂದಿದ್ದಾರೆ.

Basanagowda Patil Yatnal

ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಅಧಿಕಾರ ಶಾಶ್ವತ ಅಲ್ಲ ಯಾರೇ ಟೀಕೆ ಮಾಡಿದರು ಪರವಾಗಿಲ್ಲ. ನಾನು ಬಂಡೆಯಿದ್ದಂತೆ ಕರಗಲ್ಲ. ಸಚಿವ ಸಂಪುಟ ವಿಚಾರದಲ್ಲಿ ಸಿಎಂಗೆ ಪರಾಮಾಧಿಕಾರವಿದೆ. ಅವರು ಹಾಗೂ ಕೇಂದ್ರದ ವರಿಷ್ಠರು ಸೇರಿ ಸಚಿವ ಸ್ಥಾನ ತೀರ್ಮಾನ ಮಾಡುತ್ತಾರೆ. ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದರು.

CM Ibrahim

ಬಸ್ ನಿಲ್ದಾಣದಲ್ಲಿನ ಮಹಿಳೆ ಇದ್ದಾಗೆ ಎಂದು ಸಿಎಂ ಇಬ್ರಾಹಿಂ ಹೇಳಿಕೆಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಸಿಎಂ ಇಬ್ರಾಹಿಂ ಅವರದ್ದು ಎಲುಬಿಲ್ಲದ ನಾಲಿಗೆ. ಆತ ಜೋಕರ್ ವಚನ ಹೇಳೋಕೆ ಅವರನ್ನು ಬಳಸಿಕೊಳ್ಳುತ್ತಾರೆ. ಸಿಎಂ ಇಬ್ರಾಹಿಂ ನೀಚ ಭದ್ರಾವತಿಯಲ್ಲಿ ಏನೇನೂ ಪ್ರಕರಣ ಮಾಡಿದ್ದಾರೆ ಎಲ್ಲ ಗೊತ್ತಿದೆ. ಇಡೀ ಭದ್ರಾವತಿಯನ್ನು ಕೋಮು ಗಲಭೆಗೆ ತಳ್ಳಿದವರು ಎಂದು ಆರೋಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *