ಬೆಂಗ್ಳೂರಿಗೆ ಬಾ ಅಂತಾ ನನ್ನನ್ನು ಯಾರು ಕರೆದಿಲ್ಲ – ಶಾಮನೂರು ಬೇಸರ

Public TV
1 Min Read
Shamanuru Shivashankarappa 1

ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ಇಷ್ಟೆಲ್ಲ ಗೊಂದಲ ನಡೆಯುತ್ತಿದೆ. ಆದರೆ ನನಗೆ ಬೆಂಗಳೂರಿಗೆ ಬಾ ಎಂದು ಯಾರು ಕರೆದಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಬೆಂಗಳೂರಿಗೆ ಹೋಗುವುದಿಲ್ಲ. ನನ್ನನ್ನು ಯಾರು ಕರೆದಿಲ್ಲ. ಸದ್ಯಕ್ಕೆ ಸರ್ಕಾರ ಏನ್ ಆಗುತ್ತದೆ ಎಂದು ಹೇಳುವುದು ಕಷ್ಟ ಎಂದು ತಿಳಿಸಿದರು.

siddaramaiah a copy

ಮಾಜಿ ಸಿಎಂ ಸಿದ್ದರಾಮಯ್ಯ ಅಥವಾ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುತ್ತಾರೆ ಎನ್ನುವುದು ಸುಳ್ಳು ಸುದ್ದಿ. ಈಗ ಇರುವ ಮುಖ್ಯಮಂತ್ರಿಗಳೇ ಮುಂದುವರಿಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಹಾಗೂ ಯಡಿಯೂರಪ್ಪ ಅವರ ಬಗ್ಗೆ ಪದೇ ಪದೇ ಪ್ರಶ್ನೆ ಕೇಳುವುದು ನಿಲ್ಲಿಸಿ ಎಂದು ಮಾಧ್ಯಮಗಳಲ್ಲಿ ವಿನಂತಿ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *